ಆ್ಯಪ್ನಗರ

ಸಿದ್ದರಾಮಯ್ಯ ಸಿಎಂ: ಮತ್ತೆ ಭವಿಷ್ಯ !

ಇತ್ತೀಚೆಗೆ ಕಾಂಗ್ರೆಸ್‌ನ ಹಲವು ಶಾಸಕರು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುತ್ತಾರೆ ಎಂದು ನೀಡಿದ್ದ ಹೇಳಿಕೆ ಮೈತ್ರಿ ಸರಕಾರದಲ್ಲಿ ಗೊಂದಲಕ್ಕೆ ಕಾರಣವಾಗಿತ್ತು. ನಂತರ ಕಾಂಗ್ರೆಸ್‌ ವರಿಷ್ಠರು ಸಮಜಾಯಿಷಿ ನೀಡಿ ವಿವಾದ ತಣ್ಣಗಾಗಿಸಿದ್ದರು.

Vijaya Karnataka 21 Feb 2019, 8:39 pm
ಬಾಗಲಕೋಟ: ಸಿದ್ದರಾಮಯ್ಯ ಸಿಎಂ ಆಗಲಿದ್ದಾರೆ ಎಂದು ಕಾಂಗ್ರೆಸ್‌ನ ಮತ್ತೊಬ್ಬ ಶಾಸಕರು ಈಗ ಭವಿಷ್ಯ ನುಡಿದಿದ್ದಾರೆ, ಇತ್ತೀಚೆಗಷ್ಟೇ ತಣ್ಣಗಾಗಿದ್ದ ಸಿಎಂ ಅಭಿಯಾನ ಈಗ ಮತ್ತೆ ಶುರುವಾಗಿದೆ.
Vijaya Karnataka Web Siddaramaiah


ಇತ್ತೀಚೆಗೆ ಕಾಂಗ್ರೆಸ್‌ನ ಹಲವು ಶಾಸಕರು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುತ್ತಾರೆ ಎಂದು ನೀಡಿದ್ದ ಹೇಳಿಕೆ ಮೈತ್ರಿ ಸರಕಾರದಲ್ಲಿ ಗೊಂದಲಕ್ಕೆ ಕಾರಣವಾಗಿತ್ತು. ನಂತರ ಕಾಂಗ್ರೆಸ್‌ ವರಿಷ್ಠರು ಸಮಜಾಯಿಷಿ ನೀಡಿ ವಿವಾದ ತಣ್ಣಗಾಗಿಸಿದ್ದರು.

ಬಾದಾಮಿಯಲ್ಲಿ ಗುರುವಾರ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಗಂಗಾಮತಸ್ಥ ಅಂಬಿಗೇರ ಸಮಾವೇಶದಲ್ಲಿ ಬಸವಕಲ್ಯಾಣ ಶಾಸಕ ಬಿ.ನಾರಾಯಣರಾವ್‌ ಸಿದ್ದರಾಮಯ್ಯ ಪರ ಬ್ಯಾಟಿಂಗ್‌ ಮಾಡಿದ್ದಾರೆ.

ಸಮಾವೇಶದಲ್ಲಿ ಮಾತನಾಡಿದ ಅವರು 'ಲೋಕಸಭೆ ಚುನಾವಣೆ ಮುಗಿದ ನಾಲ್ಕೈದು ತಿಂಗಳು ನಂತರ ಸಿದ್ದರಾಮಯ್ಯ ನೂರಕ್ಕೆ ನೂರು ಪರ್ಸೆಂಟ್‌ ಮುಖ್ಯಮಂತ್ರಿಯಾಗಲಿದ್ದಾರೆ. ನನ್ನನ್ನು ಗುರುತಿಸಿದ ಸಿದ್ದರಾಮಯ್ಯ ಬಸವಕಲ್ಯಾಣ ಕ್ಷೇತ್ರದಿಂದ ಟಿಕೆಟ್‌ ನೀಡಿ 18 ಸಾವಿರ ಮತಗಳ ಅಂತರದಿಂದ ಗೆಲ್ಲಿಸಿದರು. ನಾವು ಸಿದ್ದರಾಮಯ್ಯನವರಿಗೆ ಎಲ್ಲರೂ ಶಕ್ತಿ ನೀಡಬೇಕು, ಶ್ರೀಗಳ ಆಶೀರ್ವಾದ, ನಿಮ್ಮೆಲ್ಲರ ಆಶೀರ್ವಾದ ಸಿದ್ದರಾಮಯ್ಯ ಅವರ ಮೇಲಿರಲಿ' ಎಂದು ನಾರಾಯಣರಾವ್‌ ಶ್ಲಾಘಿಸಿದರು. ಈ ಸಂದರ್ಭದಲ್ಲಿ ಸಿದ್ದರಾಮಯ್ಯ ವೇದಿಕೆಯಿಂದ ತೆರಳಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ