ಆ್ಯಪ್ನಗರ

ವಿಧಾನಸೌಧದ ಬೀಗ ಒಡೆದ ದೇವೇಗೌಡರನ್ನು ಏನೆಂದು ಕರೆಯುತ್ತೀರಾ?: ಸಿಎಂಗೆ ಜಯಶ್ರೀ ಸವಾಲು

ರಾಮಕೃಷ್ಣ ಹೆಗಡೆಯವರು ಸಿಎಂ ಹುದ್ದೆಯಲ್ಲಿದ್ದಾಗ ಇದೇ ದೇವೇಗೌಡರು ವಿಧಾನಸೌಧದ ಬೀಗ ಒಡೆದಿದ್ದರು.

Vijaya Karnataka Web 27 Nov 2018, 4:50 pm
ಮುಧೋಳ: ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ರೈತರನ್ನು ಗೂಂಡಾ, ದರೋಡೆಕೋರರು ಎಂದು ಉಲ್ಲೇಖಿಸಿದ್ದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ರೈತ ಮಹಿಳೆ ಜಯಶ್ರೀ ಗುರನ್ನವರ ತಿರುಗೇಟು ನೀಡಿದ್ದಾರೆ.
Vijaya Karnataka Web hd


ಮುಧೋಳದಲ್ಲಿ ನಡೆದ ಕೃತಜ್ಞತಾ ಸಭೆಯಲ್ಲಿ ಮಾತನಾಡಿರುವ ಜಯಶ್ರೀ, 'ರಾಮಕೃಷ್ಣ ಹೆಗಡೆಯವರು ಸಿಎಂ ಹುದ್ದೆಯಲ್ಲಿದ್ದಾಗ ಇದೇ ದೇವೇಗೌಡರು ವಿಧಾನಸೌಧದ ಬೀಗ ಒಡೆದಿದ್ದರು. ನೀವು ರೈತರನ್ನು ಗೂಂಡಾ, ದರೋಡೆಕೋರರ ಎಂದು ಕರೆದ ಮೇಲೆ ದೇವೇಗೌಡರನ್ನು ಏನೆಂದು ಕರೆಯುತ್ತೀರಾ? ಎಂದು ಕುಮಾರಸ್ವಾಮಿ ಅವರನ್ನು ಪ್ರಶ್ನಿಸಿದ್ದಾರೆ.

ರೈತರ ಬಗ್ಗೆ ಮಾತನಾಡುವಾಗ ದೇವೇಗೌಡರು ನಿಧಾನಸೌಧದ ಬೀಗ ಒಡೆದದ್ದು ನಿಮಗೆ ನೆನಪಿಗೆ ಬರಲಿಲ್ಲವೇ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಕುಟುಕಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ