ಆ್ಯಪ್ನಗರ

ಬಾಗಲಕೋಟೆಯಲ್ಲಿ ಟಂಟಂಗೆ ಲಾರಿ ಡಿಕ್ಕಿ: ಮೂವರ ಸಾವು, ಒಬ್ಬರಿಗೆ ತೀವ್ರ ಗಾಯ

ಬಾಗಲಕೋಟೆ ಜಿಲ್ಲೆಯಲ್ಲಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಮೃತಪಟ್ಟಿದ್ದಾರೆ. ಟಂಟಂ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಘಟನೆಗೆ ಲಾರಿ ಚಾಲಕನ ಅಜಾಗರೂಕತೆಯೇ ಕಾರಣ ಎನ್ನಲಾಗಿದೆ. ಅಪಘಾತದಲ್ಲಿ ಒಬ್ಬರಿಗೆ ಗಾಯವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

Vijaya Karnataka Web 6 Nov 2019, 5:40 pm
ಬಾಗಲಕೋಟೆ: ಜಿಲ್ಲೆಯ ಕಮತಗಿ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಮಂಗಳವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಮೃತಪಟ್ಟು ಒಬ್ಬರಿಗೆ ತೀವ್ರ ಗಾಯವಾಗಿದೆ. ಗಾಯಾಳುವನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Vijaya Karnataka Web lorry accident


ಈ ಸುದ್ದಿ ಓದಿ: ತುಮಕೂರು ಬಳಿ ಸರಣಿ ಅಪಘಾತ: 4 ಮಂದಿ ಸಾವು; ಹಲವರಿಗೆ ಗಾಯ

ರಸ್ತೆ ಅಪಘಾತದಲ್ಲಿ ಬಸವರಾಜ ತೊರಗಲ್ (25), ಸಂಗಮೇಶ ಕಿತ್ತಲಿ (24) ಹಾಗೂ ವಿಠ್ಠಲ ವಗ್ಗಾ (24) ಮೃತ ದುರ್ದೈವಿಗಳಾಗಿದ್ದು, ಮೃತರೆಲ್ಲರೂ ಗುಳೇದಗುಡ್ಡ ನಿವಾಸಿಗಳು ಎಂದು ತಿಳಿದುಬಂದಿದೆ. ಕಮತಗಿಯಿಂದ ಗುಳೇದಗುಡ್ಡಕ್ಕೆ ಮಂಗಳವಾರ ರಾತ್ರಿ ತೆರಳುತ್ತಿದ್ದಾಗ ಎದುರಿಗೆ ಬಂದ ಲಾರಿಯೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಟಂಟಂ ಚಾಲಕನೂ ಸೇರಿದಂತೆ ಇನ್ನುಳಿದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಟಂಟಂನಲ್ಲಿದ್ದ ನೂರಂದಪ್ಪ ಎಂಬುವವರಿಗೂ ತೀವ್ರ ಗಾಯವಾಗಿದ್ದು ಚಿಕಿತ್ಸೆಗಾಗಿ ಬಾಗಲಕೋಟೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ರಾಮನಗರದ ಹಾಗಲಕೋಟೆ ಹ್ಯಾಂಡ್ ಪೋಸ್ಟ್ ಬಳಿ ಬಸ್ ಅಪಘಾತ; 30ಕ್ಕೂ ಹೆಚ್ಚು ಜನರಿಗೆ ಗಾಯ

ಘಟನೆ ಸಂಬಂಧ ಮೃತನ ತಂದೆ ಬಸವರಾಜ ಕಿತ್ತಲಿ ನೀಡಿದ ದೂರಿನನ್ವಯ ಕೇಸು ದಾಖಲಿಸಿಕೊಳ್ಳಲಾಗಿದೆ. ಆದರೆ, ಅಪಘಾತಕ್ಕೆ ಕಾರಣನಾದ ಲಾರಿ ಚಾಲಕ ಪರಾರಿಯಾಗಿದ್ದಾನೆ. ಇನ್ನು, ಘಟನಾ ಸ್ಥಳಕ್ಕೆ ಹುನಗುಂದ ಸಿಪಿಐ ಅಯ್ಯನಗೌಡ ಪಾಟೀಲ, ಅಮೀನಗಡ ಎಸೈ ಡಾ.ಲಕ್ಷ್ಮೀಕಾಂತ ಬಾನಿಕೋಲ ಭೇಟಿ ನೀಡಿ ಮಾಹಿತಿ ಪಡೆದರು.

ಅಪಘಾತ: ಚಾಲಕರಿಬ್ಬರ ಸಾವು

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ