ಆ್ಯಪ್ನಗರ

ಕೃಷ್ಣಾ ನದಿ ಪ್ರವಾಹ: ಜಮಖಂಡಿ ತಾಲೂಕಿನ 3 ಗ್ರಾಮಗಳ ಶಾಲೆಗೆ ರಜೆ ಘೋಷಣೆ

ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬಾಗಲಕೋಟೆ ಜಿಲ್ಲೆಯ ಕೃಷ್ಣಾ ನದಿಯಲ್ಲಿ ಪ್ರವಾಹ ಬಂದಿದ್ದು, ಜಮಖಂಡಿ ತಾಲೂಕಿನ 3 ಗ್ರಾಮಗಳು ಜಲಾವೃತವಾಗಿವೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಈ ಪ್ರದೇಶಗಳಿಗೆ ನಾಳೆ ಭೇಟಿ ನೀಡುತ್ತಿದ್ದು, ಪ್ರವಾಹ ಪೀಡಿತ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

Vijaya Karnataka Web 4 Aug 2019, 6:59 pm
ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯಲ್ಲಿ ನಡುಗಡ್ಡೆಯಾದ 3 ಗ್ರಾಮಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಜಮಖಂಡಿ ತಾಲೂಕಿನ ಮುತ್ತೂರು, ತುಬಚಿ ಗ್ರಾಮದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳಿಗೆ ಘೋಷಿಸಲಾಗಿದೆ.
Vijaya Karnataka Web Bagalkot floods


ಮುಧೋಳ ತಾಲೂಕಿನ ನಂದಗಾಂವ ಗ್ರಾಮ ಘಟಪ್ರಭಾ ನದಿ ನೀರಿನಿಂದ ನಡುಗಡ್ಡೆಯಾಗಿದೆ. ಈ ಹಿನ್ನೆಲೆ ಗ್ರಾಮದ ಶಾಲೆಗಳಿಗೆ ರಜೆ ಘೋಷಿಸಿ ಬಾಗಲಕೋಟೆ ಜಿಲ್ಲಾಧಿಕಾರಿ ಆರ್. ರಾಮಚಂದ್ರನ್ ಆದೇಶ ಹೊರಡಿಸಿದ್ದಾರೆ.

ಪ್ರವಾಹಪೀಡಿತ ಸ್ಥಳಕ್ಕೆ ಅಧಿಕಾರಿಗಳ ದೌಡು:
ಜಮಖಂಡಿ ತಾಲೂಕಿನ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಾಳೆ ವೈಮಾನಿಕ ಸಮೀಕ್ಷೆ ನಡೆಸಲಿರುವ ಹಿನ್ನೆಲೆಯಲ್ಲಿ ಪ್ರವಾಹ ಪೀಡಿತ ಪ್ರದೇಶಕ್ಕೆ ಜಿಲ್ಲಾಧಿಕಾರಿ, ಜಿಪಂ ಮುಖ್ಯಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಅಧಿಕಾರಿಗಳ ದಂಡೇ ದೌಡಾಯಿಸಿದೆ.

ನಡುಗಡ್ಡೆಯಾದ ಮುತ್ತೂರು ಗ್ರಾಮಕ್ಕೆ ತೆರಳಿದ ಅಧಿಕಾರಿಗಳು ಪ್ರವಾಹ ಪರಿಸ್ಥಿತಿ, ಸಂತ್ರಸ್ತರ ರಕ್ಷಣಾ ಕಾರ್ಯ, ಮುಂಜಾಗ್ರತಾ ಕ್ರಮಗಳ ಬಗ್ಗೆ ಪರಿಶೀಲಲನೆ ನಡೆಸಿದರು.

ಬಾಗಲಕೋಟೆ ಜಿಲ್ಲಾಧಿಕಾರಿ ಆರ್ ರಾಮಚಂದ್ರನ್, ಜಿಪಂ ಸಿಇಒ ಗಂಗೂಬಾಯಿ ಮಾನಕರ್, ಎಸ್ಪಿ ಲೋಕೇಶ್ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ್ದು, ಸಂತ್ರಸ್ತರೊಂದಿಗೆ ಅಗತ್ಯ ಕ್ರಮಗಳ ಬಗ್ಗೆ ಚರ್ಚಿಸಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ