ಆ್ಯಪ್ನಗರ

ಬಾಗಲಕೋಟೆ: ಡಿಸಿಸಿ ಬ್ಯಾಂಕ್‌ ಎಲೆಕ್ಷನ್‌ ಫಲಿತಾಂಶ ಪ್ರಕಟಣೆಗೆ ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌

ಬಾಗಲಕೋಟೆ ಡಿಸಿಸಿ ಬ್ಯಾಂಕ್‌ನ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಫಲಿತಾಂಶ ಪ್ರಕಟಣೆಗೆ ನೀಡಿದ್ದ ತಡೆಯನ್ನು ಹೈಕೋರ್ಟ್ ತೆರವುಗೊಳಿಸಿದ್ದು, ನಾಮನಿರ್ದೇಶಿತ ಸದಸ್ಯರ ಮತ ಹೊರತುಪಡಿಸಿ ಉಳಿದ ಮತಗಳನ್ನು ಎಣಿಕೆ ಮಾಡಿ ಫಲಿತಾಂಶ ಪ್ರಕಟಿಸಬಹುದು ಎಂದು ಆದೇಶಿಸಿದೆ.

Vijaya Karnataka Web 25 Nov 2020, 8:27 pm
ಬಾಗಲಕೋಟೆ: ಇಲ್ಲಿನ ಡಿಸಿಸಿ ಬ್ಯಾಂಕ್‌ನ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಫಲಿತಾಂಶ ಪ್ರಕಟಣೆಗೆ ಹೈಕೋರ್ಟ್ ಹಸಿರು ನಿಶಾನೆ ತೋರಿಸಿದೆ. ಸರಕಾರದಿಂದ ನಾಮನಿರ್ದೇಶಿತ ಸದಸ್ಯರೊಬ್ಬರ ನೇಮಕ ಪ್ರಶ್ನಿಸಿ ಕಾಂಗ್ರೆಸ್ ಮುಖಂಡರು ಹೈಕೋರ್ಟ್ ಮೆಟ್ಟಿಲೇರಿದ್ದರು‌. ಹೈಕೋರ್ಟ್ ನಿಗಾದಲ್ಲಿ ಮತದಾನ ನಡೆಸಲಾಗಿತ್ತು.
Vijaya Karnataka Web BDCC


ಪ್ರಕರಣದ ಬಗ್ಗೆ ಬುಧವಾರ ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್ ಪೀಠ ನಾಮನಿರ್ದೇಶಿತ ಸದಸ್ಯರ ಮತ ಹೊರತುಪಡಿಸಿ ಉಳಿದ 15 ಮತಗಳನ್ನು ಎಣಿಕೆಗೆ ಪರಿಗಣಿಸುವಂತೆ ಆದೇಶಿಸಿದೆ. ಇನ್ನೆರಡು ದಿನಗಳಲ್ಲಿ ಮತ ಎಣಿಕೆ ನಡೆಸಿ ಫಲಿತಾಂಶ ಪ್ರಕಟಿಸುವ ಸಾಧ್ಯತೆಯಿದೆ.

13 ನಿರ್ದೇಶಕ ಸ್ಥಾನಗಳ ಪೈಕಿ ಕಾಂಗ್ರೆಸ್ 7 ಹಾಗೂ ಬಿಜೆಪಿ 6 ಮತ ಹೊಂದಿವೆ. ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಮತ ಚಲಾಯಿಸದ ಕಾರಣ ಕಾಂಗ್ರೆಸ್ ಮತಬಲ 6ಕ್ಕೆ ಇಳಿದಿದೆ. ಒಬ್ಬ ನಾಮನಿರ್ದೇಶಿತ ಸದಸ್ಯ ಹಾಗೂ ಸಹಕಾರ ಸಂಘಗಳ ಉಪ ನಿಬಂಧಕರ ಮತಗಳನ್ನು ಬಿಜೆಪಿ ನೆಚ್ಚಿಕೊಂಡಿದೆ.

ಬಾಗಲಕೋಟೆ: ಡಿಸಿಸಿ ಬ್ಯಾಂಕ್ ಮತದಾನ ಗುಪ್ತ, ಹೈ ತೀರ್ಪು ನಂತರ ಫಲಿತಾಂಶ

ಡಿಸಿಸಿ ಬ್ಯಾಂಕ್‌ನಲ್ಲಿ ನಿಗದಿಯಾಗಿದ್ದ ಚುನಾವಣೆಯಲ್ಲಿ ಎರಡೂ ಪಕ್ಷಗಳು ಅಳೆದು ತೂಗಿ ನಿರ್ಧಾರ ಕೈಗೊಂಡು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದವು. ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ಬಂಡಾಯ ಸದಸ್ಯ ಕುಮಾರಗೌಡ ಜನಾಲಿ, ಉಪಾಧ್ಯಕ್ಷ ಸ್ಥಾನಕ್ಕೆ ಪ್ರಕಾಶ ತಪಶೆಟ್ಟಿ ನಾಮಪತ್ರ ಸಲ್ಲಿಸಿದ್ದರು. ಕಾಂಗ್ರೆಸ್‌ನಿಂದ ಈ ಮೊದಲು ಅಧ್ಯಕ್ಷರಾಗಿದ್ದ ಮಾಜಿ ಸಚಿವ ಅಜಯಕುಮಾರ ಸರ್‌ನಾಯಕ ಅಧ್ಯಕ್ಷ ಸ್ಥಾನಕ್ಕೆ, ಬಂಡಾಯ ಸದಸ್ಯ ಮುರಗೇಶ ಕಡ್ಲಿಮಟ್ಟಿ ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು.

ಮಹಿಳಾ ಸದಸ್ಯೆಯನ್ನು ತಳ್ಳಾಡಿದ ಬಿಜೆಪಿ ಶಾಸಕ ಸಿದ್ದು ಸವದಿ; ಶಾಸಕನ ನಡೆಗೆ ವ್ಯಾಪಕ ಆಕ್ರೋಶ

ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಕಾಂಗ್ರೆಸ್‌ನ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಕೂಡ ನಾಮಪತ್ರ ಸಲ್ಲಿಸಿದರು. ಆದರೆ ಸೂಚಕ, ಅನುಮೋದಕರ ಸಹಿಯಿರದ ಕಾರಣ ಅವರ ನಾಮಪತ್ರ ತಿರಸ್ಕೃತಗೊಂಡಿತು. ಅಡ್ಡ ಮತದಾನ ನಡೆದಿರುವ ಊಹಾಪೋಹಗಳಿದ್ದು, ಇದು ನಿಜವಾದರೆ ಕಾಂಗ್ರೆಸ್‌ನ ಅಜಯಕುಮಾರ್ ಸರ್‌ನಾಯಕ ಅಧ್ಯಕ್ಷ ಹಾಗೂ ಬಿಜೆಪಿಯ ಪ್ರಕಾಶ್‌ ತಪಶೆಟ್ಟಿ ಉಪಾಧ್ಯಕ್ಷರಾಗಿ ಆಯ್ಕೆಯಾಗಲಿದ್ದಾರೆ‌.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ