ಆ್ಯಪ್ನಗರ

ಯಾವ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ

ಬಾಗಲಕೋಟ: 'ಯಾವುದೇ ಖಾತೆ ಕೊಟ್ಟರೂ ನಾನು ನಿಭಾಯಿಸಲು ಸಿದ್ಧನಿದ್ದೇನೆ, ನಾಳೆ ಖಾತೆಗಳ ಹಂಚಿಕೆಯಾಗಲಿದೆ' ಎಂದು ನೂತನ ಸಚಿವ ರಹೀಂ ಖಾನ್‌ ಹೇಳಿದರು.

Vijaya Karnataka 24 Dec 2018, 5:00 am
ಬಾಗಲಕೋಟ: 'ಯಾವುದೇ ಖಾತೆ ಕೊಟ್ಟರೂ ನಾನು ನಿಭಾಯಿಸಲು ಸಿದ್ಧನಿದ್ದೇನೆ, ನಾಳೆ ಖಾತೆಗಳ ಹಂಚಿಕೆಯಾಗಲಿದೆ' ಎಂದು ನೂತನ ಸಚಿವ ರಹೀಂ ಖಾನ್‌ ಹೇಳಿದರು.
Vijaya Karnataka Web i can handle any ministership rahim khan
ಯಾವ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ


ಜಿಲ್ಲೆಯ ಜಮಖಂಡಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು 'ಹೈದರಾಬಾದ್‌ ಕರ್ನಾಟಕ ಹಾಗೂ ಉತ್ತರ ಕರ್ನಾಟಕಕ್ಕೆ ಸಂಪುಟದಲ್ಲಿ ಆದ್ಯತೆ ದೊರೆತಿದೆ. ದಲಿತ, ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳು ಹಾಗೂ ಎಲ್ಲ ಸಮಾಜಗಳಿಗೆ ಅವಕಾಶ ನೀಡಲಾಗಿದೆ. ಸಂಪುಟ ವಿಸ್ತರಣೆಯ ವಿಷಯದಲ್ಲಿ ಮುಖಂಡ ಮಲ್ಲಿಕಾರ್ಜುನ ಖರ್ಗೆಯವರಿಗೆ ಹಿನ್ನಡೆಯಾಗಿದೆ ಎಂದೇನಿಲ್ಲ. ಎಲ್ಲರೂ ಚರ್ಚಿಸಿ ಸ್ಥಾನಮಾನದ ಕುರಿತು ವಿಚಾರ ಮಾಡಿದ್ದಾರೆ' ಎಂದು ತಿಳಿಸಿದರು.

'ಬಿಜೆಪಿಯವರು ಅತೃಪ್ತ ಶಾಸಕರನ್ನು ಸೆಳೆಯುವಂತಹ ಆಪರೇಶನ್‌ ನಡೆಯುವುದಿಲ್ಲ, ಹೈಕಮಾಂಡ್‌ ಎಲ್ಲವನ್ನೂ ವೀಕ್ಷಿಸುತ್ತಿದೆ. ರಮೇಶ ಜಾರಕಿಹೊಳಿಯವರು ಅಸಮಾಧಾನಗೊಂಡಿದ್ದರೆ ನಮ್ಮ ನಾಯಕರು ಅವರೊಂದಿಗೆ ಮಾತುಕತೆ ನಡೆಸುತ್ತಾರೆ. ಮುಂದೆ ಎಲ್ಲರಿಗೂ ಅವಕಾಶ ದೊರೆಯಲಿದೆ. ರಾಯಚೂರು ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಣೆ ತಡೆಯಲು ಯತ್ನಿಸಿದ ಗ್ರಾಮ ಲೆಕ್ಕಾಧಿಕಾರಿ ಹತ್ಯೆ ಮಾಡಿದವರ ವಿರುದ್ಧ ಗಂಭೀರ ಕ್ರಮ ಕೈಗೊಳ್ಳಬೇಕು.ಈ ವಿಷಯದಲ್ಲಿ ಪಕ್ಷ, ಸಂಬಂಧಗಳು ಎಂದೇನೂ ಇರುವುದಿಲ್ಲ' ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ