ಆ್ಯಪ್ನಗರ

ದೆಹಲಿಯಲ್ಲಿ ಲಿಂಗಾಯತ ಮಹಾಸಮಾವೇಶ

ಕೂಡಲಸಂಗಮ: ಕೇಂದ್ರ ಸರಕಾರ ಲಿಂಗಾಯತ ಧರ್ಮದ ಶೀಘ್ರವಾಗಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲು ನವೆಂಬರ್‌ 17,18 ಮತ್ತು 19 ರಂದು ದೆಹಲಿಯಲ್ಲಿ ಲಿಂಗಾಯತ ಮಹಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕೂಡಲಸಂಗಮ ಬಸವ ಧರ್ಮ ಪೀಠದ ಪೀಠಾಧ್ಯೆಕ್ಷೆ ಮಾತೆ ಮಹಾದೇವಿ ತಿಳಿಸಿದ್ದಾರೆ.

Vijaya Karnataka 31 Aug 2018, 5:00 am
ಕೂಡಲಸಂಗಮ: ಕೇಂದ್ರ ಸರಕಾರ ಲಿಂಗಾಯತ ಧರ್ಮದ ಶೀಘ್ರವಾಗಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲು ನವೆಂಬರ್‌ 17,18 ಮತ್ತು 19 ರಂದು ದೆಹಲಿಯಲ್ಲಿ ಲಿಂಗಾಯತ ಮಹಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕೂಡಲಸಂಗಮ ಬಸವ ಧರ್ಮ ಪೀಠದ ಪೀಠಾಧ್ಯೆಕ್ಷೆ ಮಾತೆ ಮಹಾದೇವಿ ತಿಳಿಸಿದ್ದಾರೆ.
Vijaya Karnataka Web in delhi lingayat maha samavesha
ದೆಹಲಿಯಲ್ಲಿ ಲಿಂಗಾಯತ ಮಹಾಸಮಾವೇಶ


ರಾಜ್ಯದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಚಿವ ಸಂಪುಟ ಲಿಂಗಾಯತ ಧರ್ಮ ಬಸವಣ್ಣನವರಿಂದ ಸ್ಥಾಪಿತವಾದ ಸ್ವತಂತ್ರ ಧರ್ಮ ಎಂದು ಘೋಷಿಸಿದೆ. ಇದಕ್ಕೆ ಧಾರ್ಮಿಕ ಅಲ್ಪಸಂಖ್ಯಾತರ ಸ್ಥಾನಮಾನ ನೀಡಬೇಕೆಂದು ಶಿಫಾರಸ್ಸು ಮಾಡಿ ಕೇಂದ್ರಕ್ಕೆ ಕಳಿಸಿಕೊಟ್ಟಿದ್ದಾರೆ. ಆದರೆ ಕೇಂದ್ರ ಸರ್ಕಾರ ಈ ವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಅದಕ್ಕಾಗಿ ಮೂರು ದಿನಗಳ ಕಾಲ ದೆಹಲಿಯಲ್ಲಿ ಲಿಂಗಾಯತ ಮಹಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಎರಡು ದಿನ ಚಿಂತನಗೋಷ್ಠಿ ಏರ್ಪಡಿಸಿ 19 ರಂದು ಬೃಹತ್‌ ರಾರ‍ಯಲಿ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಈ ಸಮ್ಮೇಳದ ರೂಪುರೇಷ ಕುರಿತು ಚಿಂತಿಸಲು ಕೂಡಲಸಂಗಮ ಬಸವ ಧರ್ಮಪೀಠದ ಮಹಾಮನೆಯಲ್ಲಿ ಸೆ 9 ರ ಬೆಳಗ್ಗೆ 10:30ಕ್ಕೆ ಪೂರ್ವಭಾವಿ ಸಭೆ ಕರೆಯಲಾಗಿದೆ. ಮಹಾರಾಷ್ಟ್ರದ ರಾಷ್ಟ್ರಸಂತ ಶಿವಲಿಂಗ ಶಿವಾಚಾರ್ಯರು, ಬಸವ ಧರ್ಮ ಪೀಠದ ಪೀಠಾಧ್ಯೆಕ್ಷೆ ಮಾತೆ ಮಹಾದೇವಿ ಅವರ ಅಧ್ಯಕ್ಷ ತೆಯಲ್ಲಿ ನಡೆಯುವ ಈ ಸಭೆಗೆ ಅನೇಕ ಮಠಾಧೀಶರು, ರಾಷ್ಟ್ರೀಯ ಬಸವ ದಳದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆಂದು ಪ್ರಕಟಣೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ