ಆ್ಯಪ್ನಗರ

ಘಟಪ್ರಭಾ, ಕೃಷ್ಣಾ ನದಿಗಳ ಒಳಹರಿವು ಹೆಚ್ಚಳ ಮನೆಗಳಿಗೆ ನುಗ್ಗಿದ ನೀರು

ಕೃಷ್ಣಾ ಹಾಗೂ ಘಟಪ್ರಭಾ ನದಿಗಳ ಮಟ್ಟ ಹೆಚ್ಚಳವಾಗುತ್ತಿದ್ದು, ಜಮಖಂಡಿ ತಾಲೂಕಿನ ಕೆಲ ತೋಟದ ಮನೆಗಳಿಗೆ ನೀರು ನುಗ್ಗಿದೆ.

Vijaya Karnataka Web 11 Jul 2020, 5:00 am
ಬಾಗಲಕೋಟೆ: ಕೃಷ್ಣಾ ಹಾಗೂ ಘಟಪ್ರಭಾ ನದಿಗಳ ಮಟ್ಟ ಹೆಚ್ಚಳವಾಗುತ್ತಿದ್ದು, ಜಮಖಂಡಿ ತಾಲೂಕಿನ ಕೆಲ ತೋಟದ ಮನೆಗಳಿಗೆ ನೀರು ನುಗ್ಗಿದೆ.
Vijaya Karnataka Web WATER-BGK-10-2_41


ಜಿಲ್ಲೆಯ ಕೃಷ್ಣಾ, ಘಟಪ್ರಭಾ ನದಿಗಳು ಮೈದುಂಬಿ ಹರಿಯುತ್ತಿದ್ದು, ಪ್ರತಿ ದಿನ ನೀರಿನ ಪ್ರಮಾಣದಲ್ಲಿಹೆಚ್ಚಳವಾಗುತ್ತಿದೆ. ಕೃಷ್ಣಾ ನದಿಗೆ ಮಹಾರಾಷ್ಟ್ರದಿಂದ 65 ಸಾವಿರ ಕ್ಯೂಸೆಕ್‌ ನೀರು ಹರಿದು ಬರುತ್ತಿದ್ದು, ಹಿಪ್ಪರಗಿ ಬ್ಯಾರೇಜ್‌ನಿಂದ 64 ಸಾವಿರ ಕ್ಯೂಸೆಕ್‌ ನೀರು ಹೊರ ಬಿಡಲಾಗುತ್ತಿದೆ. ಕೃಷ್ಣಾ ನದಿಗೆ ಒಂದೇ ದಿನದಲ್ಲಿ20 ಸಾವಿರ ಕ್ಯೂಸೆಕ್‌ ನೀರಿನ ಹೆಚ್ಚಳ ಕಂಡುಬಂದಿದೆ. ಜಮಖಂಡಿ ತಾಲೂಕಿನ ತುಬಚಿ, ಶೂರ್ಪಾಲಿ ಗ್ರಾಮಗಳ ಆಸುಪಾಸು ನೀರು ಸಂಗ್ರಹಗೊಂಡಿದೆ. ಕೆಲವೆಡೆ ತೋಟದ ಮನೆಗಳಿಗೆ ನೀರು ನುಗ್ಗಿದ್ದು, ಮನೆಯ ವಸ್ತುಗಳು ನೀರಿನಲ್ಲೇ ನಿಂತಿವೆ.

ಬೆಳಗಾವಿ ಜಿಲ್ಲೆಯ ಹಿಡಕಲ್‌ ಡ್ಯಾಮ್‌ ನಿಂದ ಘಟಪ್ರಭಾ ನದಿಗೆ ಹೆಚ್ಚಿನ ನೀರು ಬಿಡಲಾಗಿದೆ. ನದಿಗೆ ಶುಕ್ರವಾರ 10, 700 ಕ್ಯೂಸೆಕ್‌ ನೀರು ಬರುತ್ತಿದೆ. ಈಗಾಗಲೇ ಮುಧೋಳ ತಾಲೂಕಿನ ಮಿರ್ಜಿ ಸೇತುವೆ ಜಲಾವೃತವಾಗಿದೆ. ನೀರಿನ ಪ್ರಮಾಣ ಹೆಚ್ಚಳಗೊಂಡರೆ ಇನ್ನಷ್ಟು ಸೇತುವೆಗಳು ಮುಳುಗಡೆಯಾಗಲಿವೆ.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ