ಆ್ಯಪ್ನಗರ

ಕಾಂಗ್ರೆಸ್ ವೀಕ್ಷಕರ ಸಭೆಯಲ್ಲಿ ಗರಂ ಆದ ಕೆ.ಸಿ.ವೇಣುಗೋಪಾಲ್

ಉಪಚುನಾವಣೆ ಉಸ್ತುವಾರಿ ಹೊತ್ತ ನಾಯಕರ ಕ್ಷೇತ್ರಕ್ಕೆ ಇನ್ನೂ ಕಾಲಿಡದ ಕಾರಣ ಬೇಸರ ವ್ಯಕ್ತಪಡಿಸಿರುವ ವೇಣುಗೋಪಾಲ್, ಕ್ಷೇತ್ರದ ಉಸ್ತುವಾರಿ ಕೊಟ್ಟವರೇಕೆ ಪ್ರಚಾರದಲ್ಲಿ ಭಾಗಿಯಾಗುತ್ತಲ್ಲವೆಂದು ಬೇಸರ ವ್ಯಕ್ತಪಡಿಸಿದರು.

Vijaya Karnataka Web 26 Oct 2018, 12:06 pm
ಜಮಖಂಡಿ: ಜಮಖಂಡಿ ವಿಧಾನಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ವೀಕ್ಷಕರೊಂದಿಗೆ ನಡೆದ ಸಭೆಯಲ್ಲಿ ಪಕ್ಷದ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಫುಲ್ ಗರಂ ಆದ ಪ್ರಸಂಗ ನಡೆಯಿತು.
Vijaya Karnataka Web venu


ಉಪಚುನಾವಣೆ ಉಸ್ತುವಾರಿ ಹೊತ್ತ ನಾಯಕರು ಕ್ಷೇತ್ರಕ್ಕೆ ಇನ್ನೂ ಕಾಲಿಡದ ಕಾರಣ ಬೇಸರ ವ್ಯಕ್ತಪಡಿಸಿರುವ ಅವರು, ಕ್ಷೇತ್ರದ ಉಸ್ತುವಾರಿ ಹೊತ್ತವರೇಕೆ ಪ್ರಚಾರದಲ್ಲಿ ಪಾಲ್ಗೊಳುತ್ತಿಲ್ಲ ಎಂದು ಪ್ರಶ್ನಿಸಿದರು.

ಜಮಖಂಡಿ ಉಪಚುನಾವಣೆ ಉಸ್ತುವಾರಿಯಾಗಿ 30ಕ್ಕೂ ಹೆಚ್ಚು ಹಾಲಿ ಹಾಗೂ ಮಾಜಿ ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರನ್ನು ಕೆಪಿಸಿಸಿ ನೇಮಿಸಿತ್ತು. ಆದರೆ, ನೇಮಕಗೊಂಡವರ ಪೈಕಿ ಸುಮಾರು 15ಕ್ಕೂ ಹೆೆಚ್ಚು ಹಾಲಿ ಹಾಗೂ ಮಾಜಿ ಶಾಸಕರು ಗೈರಾಗಿರುವುದು ರಾಜ್ಯ ಉಸ್ತುವಾರಿಯ ಪಿತ್ತ ನೆತ್ತಿಗೇರಿಸಿತು.

ಜಮಖಂಡಿ ಕ್ಷೇತ್ರದ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದ ವೇಣುಗೋಪಾಲ್, ಕ್ಷೇತ್ರದಲ್ಲಿ ಪ್ರಚಾರ ಕಾರ್ಯದಲ್ಲಿ ಖಡ್ಡಾಯವಾಗಿ ಭಾಗಿಯಾಗುವಂತೆ ಉಸ್ತುವಾರಿಗಳಿಗೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.

ಗುರುವಾರ ರಾತ್ರಿ ಜಮಖಂಡಿ ನಗರದ ರಾಯಲ್ ಪ್ಯಾಲೇಸ್‌ನಲ್ಲಿ ನಡೆದ ಈ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಈಶ್ವರ ಖಂಡ್ರೆ, ಎಂ ಬಿ ಪಾಟೀಲ್, ಸತೀಶ್ ಜಾರಕಿಹೊಳಿ, ಅಜಯ್ ಸಿಂಗ್ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಸಭೆಯಲ್ಲಿ ಭಾಗಿಯಾಗಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ