ಆ್ಯಪ್ನಗರ

ಕನ್ನಡಕ್ಕೆ ಕೊಟ್ಟಿರೋ ಸ್ಥಾನ ಯಾವ ಭಾಷೆ ಆಕ್ರಮಿಸಲು ಸಾಧ್ಯವಿಲ್ಲ: ಸಿದ್ದಲಿಂಗಯ್ಯ

ಹಿಂದಿ ಹೇರಿಕೆ ವಿಷಯ ಈಗ ಎಲ್ಲೆಡೆ ಭಾರಿ ಚರ್ಚೆಯಾಗುತ್ತಿದೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿರುದ್ಧ ಈಗ ದಕ್ಷಿಣ ರಾಜ್ಯಗಳವರು ಕಿಡಿಕಾರಿದ್ದಾರೆ. ಕವಿ ಸಿದ್ದಲಿಂಗಯ್ಯ ಕೂಡ ಹಿಂದಿ ಹೇರಿಕೆ ವಿರುದ್ಧ ಬಂಡಾಯ ಸಾರಿದ್ದಾರೆ.

Vijaya Karnataka Web 20 Sep 2019, 1:42 pm
ಬಾಗಲಕೋಟೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ಹಿಂದಿ ಹೇರಿಕೆ ಕುರಿತು ನೀಡಿರುವ ಹೇಳಿಕೆ ಖಂಡನೀಯ. ಅಮಿತ್‌ ಶಾ ಹೇಳಿಕೆಯನ್ನು ದಕ್ಷಿಣ ಮತ್ತು ಈಶಾನ್ಯ ಭಾರತದ ರಾಜ್ಯಗಳು ಸಹಿಸೋದಿಲ್ಲ ಎಂದು ಬಂಡಾಯ ಸಾಹಿತಿ ಡಾ. ಸಿದ್ದಲಿಂಗಯ್ಯ ತಿಳಿಸಿದ್ದಾರೆ.
Vijaya Karnataka Web ಸಿದ್ದಲಿಂಗಯ್ಯ
ಸಿದ್ದಲಿಂಗಯ್ಯ


ಬಾಗಲಕೋಟೆಯ ಯಲ್ಲಟ್ಟಿಯಲ್ಲಿ ದಲಿತ, ಬಂಡಾಯ ಸಾಹಿತಿ ಡಾ. ಸಿದ್ದಲಿಂಗಯ್ಯ ಸುದ್ದಿಗಾರರೊಂದಿಗೆ ಮಾತನಾಡಿದರು.

ಒತ್ತಾಯಪೂರ್ವಕವಾಗಿ ಹಿಂದಿ ಹೇರುವುದರಿಂದ ಆ ಭಾಷೆಯ ಮೇಲಿನ ಗೌರವ ಕಡಿಮೆಯಾಗುತ್ತೆ. ಜನ್ರಿಗೆ ಒತ್ತಾಯ ಮಾಡಿದಂತಾಗುತ್ತದೆ. ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ. ಕನ್ನಡವೇ ನಮ್ಮ ವೃತ್ತಿ ಸಾಧನ. ಕನ್ನಡಕ್ಕೆ ಕೊಟ್ಟಿರೋ ಸ್ಥಾನವನ್ನು ಯಾವ ಭಾಷೆ ಆಕ್ರಮಿಸಲು ಸಾಧ್ಯವಿಲ್ಲ ಎಂದು ಸಿದ್ದಲಿಂಗಯ್ಯ ತಿಳಿಸಿದ್ದಾರೆ.

ಕೇಂದ್ರ ಗೃಹ ಸಚಿವರು ಹೇಳಿರೋದು ಬಹಳ ದುಃಖದಾಯಕ ಸಂಗತಿ. ಮಾಧ್ಯಮಗಳ ಮೂಲಕ ಅಮಿತ್ ಶಾ ಹೇಳಿಕೆಯಲ್ಲಿ ತಿದ್ದುಪಡಿ ಮಾಡಿಕೊಂಡಂತೆ ಕಾಣುತ್ತಿದೆ. ಇದು ಸ್ವಾಗತಾರ್ಹ ಎಂದು ಕವಿ ಸಿದ್ದಲಿಂಗಯ್ಯ ತಿಳಿಸಿದರು.

ಯಾವುದೇ ಕಾರಣಕ್ಕೂ ಹಿಂದಿ ಹೇರಿಕೆ ಮಾಡುವುದನ್ನು ಬೆಂಬಲಿಸುವುದಿಲ್ಲ. ನಮ್ಮ ನಮ್ಮ ಭಾಷೆ ನಮಗೆ ಹೆಮ್ಮೆ. ಬೇಕಿದ್ದರೆ ಬೇರೆ ಭಾಷೆ ಕಲಿಯಲು ಆಸಕ್ತಿ ತೋರೋಣ. ಹಾಗೆಂದು ಹೇರಿಕೆ ಮಾಡಲು ಬಂದರೆ ಸುಮ್ಮನೆ ಕೂರುವುದಿಲ್ಲ ಎಂದು ಕವಿ ಸಿದ್ದಲಿಂಗಯ್ಯ ಬಂಡಾಯ ಸಾರಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ