ಆ್ಯಪ್ನಗರ

​ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಬಿಎಸ್‌ವೈ ಬೆಂಬಲವಿದೆ: ಸ್ವಾಮೀಜಿ

ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟವನ್ನು ಬಿ.ಎಸ್‌. ಯಡಿಯೂರಪ್ಪ ಆಂತರಿಕವಾಗಿ ಬೆಂಬಲಿಸುತ್ತಾರೆ.

Vijaya Karnataka Web 10 Oct 2017, 12:38 pm
ಬಾಗಲಕೋಟ: ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟವನ್ನು ಬಿ.ಎಸ್‌. ಯಡಿಯೂರಪ್ಪ ಆಂತರಿಕವಾಗಿ ಬೆಂಬಲಿಸುತ್ತಾರೆ. ಪಕ್ಷದ ತತ್ತ್ವ, ಸಿದ್ದಾಂತದ ಹಿನ್ನೆಲೆಯಲ್ಲಿ ಬಹಿರಂಗವಾಗಿ ಬೆಂಬಲಿಸಿಲ್ಲ ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವಜಯಮೃತ್ಯಂಜಯ ಸ್ವಾಮೀಜಿ ಹೇಳಿದ್ದಾರೆ.
Vijaya Karnataka Web lingayat religion and bsy
​ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಬಿಎಸ್‌ವೈ ಬೆಂಬಲವಿದೆ: ಸ್ವಾಮೀಜಿ


ಈ ವಿಚಾರದಲ್ಲಿ ಬಿಜೆಪಿ ಅಥವಾ ಆರ್‌ಎಸ್‌ಎಸ್‌ ಯಡಿಯೂರಪ್ಪ ಅವರಿಗೆ ಯಾವ ಲಗಾಮೂ ಹಾಕಿಲ್ಲ. ನಾವು ಪ್ರತ್ಯೇಕತೆಗೆ ಹೋರಾಟ ಮಾಡುತ್ತಿಲ್ಲ, ಲಿಂಗಾಯತ ಧರ್ಮ ಮೊದಲೇ ಸ್ವತಂತ್ರ ಧರ್ಮ. ಸಾಂವಿಧಾನಿಕ ಮಾನ್ಯತೆಗಾಗಿ ಹೋರಾಡುತ್ತಿದ್ದೇವೆ ಎಂದು ಸ್ವಾಮೀಜಿ ಹೇಳಿದರು.

ಹುಬ್ಬಳ್ಳಿ, ಬೆಂಗಳೂರಿನಲ್ಲಿ ನಡೆಯುವ ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟಕ್ಕೆ ಬಿಎಸ್‌ವೈ ಅವರಿಗೂ ಆಹ್ವಾನ ನೀಡುತ್ತೇವೆ. ರಾಜ್ಯ ಸರಕಾರ ಕಿತ್ತೂರು ಚೆನ್ನಮ್ಮ ಜಯಂತಿ ಆಚರಿಸುತ್ತಿರುವುದು ಸಂತಸ ತಂದಿದೆ. ಚೆನ್ನಮ್ಮಳನ್ನುಇಡೀ ದೇಶಕ್ಕೆ ಪರಿಚಯಿಸುವ ಕೆಲಸ ಆಗಬೇಕು ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ