ಆ್ಯಪ್ನಗರ

ಜಿಲ್ಲಾದ್ಯಂತ ಸಾಕ್ಷ ರತಾ ಕಲಿಕೆ: ಡಿಸಿ ಶಾಂತಾರಾಮ

ಬಾಗಲಕೋಟ: ಜಿಲ್ಲೆಯಾದ್ಯಂತ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಡಿಸೆಂಬರ್‌ ಅಂತ್ಯದೊಳಗೆ ಸಾಕ್ಷ ರತಾ ಕಲಿಕಾ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಡಿಸಿ ಕೆ.ಜಿ.ಶಾಂತಾರಾಮ ಅಧಿಕಾರಿಗಳಿಗೆ ಸೂಚಿಸಿದರು.

Vijaya Karnataka 10 Dec 2018, 5:00 am
ಬಾಗಲಕೋಟ: ಜಿಲ್ಲೆಯಾದ್ಯಂತ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಡಿಸೆಂಬರ್‌ ಅಂತ್ಯದೊಳಗೆ ಸಾಕ್ಷ ರತಾ ಕಲಿಕಾ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಡಿಸಿ ಕೆ.ಜಿ.ಶಾಂತಾರಾಮ ಅಧಿಕಾರಿಗಳಿಗೆ ಸೂಚಿಸಿದರು.
Vijaya Karnataka Web literary learning across the district dc shantaram
ಜಿಲ್ಲಾದ್ಯಂತ ಸಾಕ್ಷ ರತಾ ಕಲಿಕೆ: ಡಿಸಿ ಶಾಂತಾರಾಮ


ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಈ ಕುರಿತು ಜರುಗಿದ ಪೂರ್ವಭಾವಿ ಸಭೆ ಅಧ್ಯಕ್ಷ ತೆ ವಹಿಸಿ ಮಾತನಾಡಿದ ಅವರು ಜಿಲ್ಲೆಯ ನಗರ ಪ್ರದೇಶದಲ್ಲಿ ಸಾಕ್ಷ ರತಾ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಡಿ.15ರೊಳಗೆ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಿ ಡಿಸೆಂಬರ್‌ ಅಂತ್ಯಕ್ಕೆ ಸಾಕ್ಷ ರತಾ ಕಲಿಕೆ ಪ್ರಾರಂಭಿಸಬೇಕು. ಅನಕ್ಷ ರಸ್ಥರನ್ನು ಸಾಕ್ಷ ರರನ್ನಾಗಿಸಲು ಪ್ರತಿ 10 ಮಂದಿಗೆ ಒಬ್ಬ ಬೋಧಕರಂತೆ ಪ್ರತಿ ದಿನ ಎರಡೂವರೆ ಗಂಟೆಗಳ ಕಾಲ ಕಲಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲು ತಿಳಿಸಿದ ಅವರು ಈ ಬಾರಿ ಕೊಳಚೆ ಪ್ರದೇಶ ಗಮನದಲ್ಲಿಟ್ಟುಕೊಂಡು ಅಲ್ಲಿಂದಲೇ ಕಲಿಕೆ ಪ್ರಾರಂಭಿಸುವಂತೆ ಸೂಚಿಸಿದರು.

ಕಾರ್ಯಕ್ರಮ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಡಿಸಿ ಅಧ್ಯಕ್ಷ ತೆಯಲ್ಲಿ ಜಿಲ್ಲಾ ನಗರ ಸಾಕ್ಷ ರತಾ ಸಮಿತಿ, ವಾರ್ಡ್‌ ಮಟ್ಟದಲ್ಲಿ ಸ್ಥಳೀಯ ಸಾಕ್ಷ ರತಾ ಸಮಿತಿ ರಚಿಸಲಾಗಿದೆ. ಜಿಲ್ಲೆಯ 15 ನಗರ ಸ್ಥಳೀಯ ಸಂಸ್ಥೆಗಳ ಕೊಳಚೆ ಪ್ರದೇಶಗಳಲ್ಲಿ ಸಾಕ್ಷ ರತಾ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ನಗರ ಸ್ತ್ರೀಶಕ್ತಿ ಸಂಘಗಳ ಸದಸ್ಯರು ಕಲಿತವರಿದ್ದರೆ ಬೋಧನೆಗೆ ಆದ್ಯತೆ ನೀಡಬೇಕು. ಪ್ರತಿ ತಿಂಗಳು ಸ್ಥಳೀಯ ಸಂಸ್ಥೆಗಳ ಸಭೆಯಲ್ಲಿ ಈ ಕುರಿತು ಪರಿಶೀಲನೆ ನಡೆಸಬೇಕು. ಈ ಕಾರ್ಯದಲ್ಲಿ ಬದ್ಧತೆ ಪ್ರಾಮಾಣಿಕತೆಯಿಂದ ಶ್ರಮಿಸಲು ತಿಳಿಸಿದರು.

ಜಿಲ್ಲಾ ವಯಸ್ಕರ ಶಿಕ್ಷ ಣಾಧಿಕಾರಿ ಮಾತನಾಡಿ, ಜಿಲ್ಲೆಯಲ್ಲಿ ಶೇ.68.82ರಷ್ಟು ಸಾಕ್ಷ ರತಾ ಪ್ರಮಾಣವಿದ್ದು, ರಾಜ್ಯದಲ್ಲಿ 22ನೇ ಸ್ಥಾನದಲ್ಲಿದೆ. ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ನಗರ, ಕೊಳಚೆ ಪ್ರದೇಶಗಳ 15 ರಿಂದ 50 ವರ್ಷ ವಯೋಮಾನದ 13,782 ಅನಕ್ಷ ರಸ್ಥರನ್ನು ಸಾಕ್ಷ ರರನ್ನಾಗಿಸುವ ಗುರಿ ಹೊಂದಲಾಗಿದೆ. ನಗರ ಮತ್ತು ಕೊಳಚೆ ಪ್ರದೇಶಗಳಲ್ಲಿನ ಅನಕ್ಷ ರಸ್ಥರನ್ನು ಸಾಕ್ಷ ರರನ್ನಾಗಿಸುವುದು, ಪರಿಶಿಷ್ಟ ಜಾತಿ ಮತ್ತು ಪಂಗಡ ವರ್ಗದವರ ಸಾಕ್ಷ ರತೆ ಪ್ರಮಾಣ ಹೆಚ್ಚಿಸುವುದು ಹಾಗೂ ಮಹಿಳಾ ಸಾಕ್ಷ ರತಾ ಪ್ರಮಾಣ ಹೆಚ್ಚಿಸಿ ಸಾಮಾಜಿಕ ಮತ್ತು ಆರ್ಥಿಕ ಅರಿವು ಮೂಡಿಸುವ ಮೂಲಕ ಸಬಲೀಕರಣ ಮಾಡುವ ಉದ್ದೇಶ ಹೊಂದಲಾಗಿದೆ ಎಂದರು.

ಸ್ವಯಂ ಸೇವಾ ಸಂಸ್ಥೆಗಳನ್ನು ಗುರುತಿಸುವುದು, ಅನಕ್ಷ ರಸ್ಥರ ಗುರುತಿಸುವಿಕೆ, ವಾತಾವರಣ ನಿರ್ಮಾಣ, ಕಲಿಕಾ ಬೋಧನಾ ಸಾಮಗ್ರಿ ಒದಗಿಸುವುದು, ತರಬೇತಿ, ಕಾರ್ಯಕ್ರಮದಲ್ಲಿ ಕಲಿಕೆ ಮತ್ತು ಬೋಧನಾ ಪ್ರಕ್ರಿಯೆ, ಪರಿವೀಕ್ಷ ಣೆæ, ಮೌಲ್ಯಮಾಪನ, ಪರೀಕ್ಷೆ, ಅನುದಾನ, ಬೋಧಕರು ಮತ್ತು ಸ್ವಯಂ ಸೇವಾ ಸಂಸ್ಥೆಗಳಿಗೆ ಪ್ರೋತ್ಸಾಹಧನ, ಸಹಯೋಗದಂತಹ ಮಾರ್ಗೋಪಾಯಗಳನ್ನು ಕಾರ್ಯಕ್ರಮ ಅನುಷ್ಠಾನದಲ್ಲಿ ಪಾಲಿಸಲಾಗುತ್ತಿದೆ ಎಂದು ತಿಳಿಸಿದರು.

ಸಭೆಯಲ್ಲಿ ಜಿಪಂ ಉಪಕಾರ್ಯದರ್ಶಿ ದುರ್ಗೇಶ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಜಗದೀಶ ಹೆಬ್ಬಳ್ಳಿ, ನಗರಸಭೆ ಪೌರಾಯುಕ್ತ ಗಣಪತಿ ಪಾಟೀಲ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮೇಲಿನಮನಿ ಹಾಗೂ ಸ್ಥಳೀಯ ಸಂಸ್ಥೆಗಳ ಪೌರಾಯುಕ್ತರು, ಮುಖ್ಯಾಧಿಕಾರಿಗಳು, ಕಾರ್ಯಕ್ರಮ ಸಂಯೋಜಕರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ