ಆ್ಯಪ್ನಗರ

ಲಾರಿ ಡಿಕ್ಕಿ: ಬೈಕ್‌ ಸವಾರರಿಬ್ಬರು ಸಾವು

ಬೇವೂರ: ಬಾಗಲಕೋಟದಿಂದ ಹುಲ್ಲೂರ ಗ್ರಾಮಕ್ಕೆ ತೆರಳುತ್ತಿದ್ದ ಇಬ್ಬರು ಬೈಕ್‌ ಸವಾರರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಇಬ್ಬರೂ ಮೃತಪಟ್ಟ ಘಟನೆ ಸಮೀಪದ ಬೋಡನಾಯಕದಿನ್ನಿ ಕ್ರಾಸ್‌ ಸಮೀಪದ ತಿರುವಿನಲ್ಲಿ ಮಂಗಳವಾರ ಸಂಜೆ ನಡೆದಿದೆ

Vijaya Karnataka 12 Dec 2018, 5:00 am
ಬೇವೂರ: ಬಾಗಲಕೋಟದಿಂದ ಹುಲ್ಲೂರ ಗ್ರಾಮಕ್ಕೆ ತೆರಳುತ್ತಿದ್ದ ಇಬ್ಬರು ಬೈಕ್‌ ಸವಾರರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಇಬ್ಬರೂ ಮೃತಪಟ್ಟ ಘಟನೆ ಸಮೀಪದ ಬೋಡನಾಯಕದಿನ್ನಿ ಕ್ರಾಸ್‌ ಸಮೀಪದ ತಿರುವಿನಲ್ಲಿ ಮಂಗಳವಾರ ಸಂಜೆ ನಡೆದಿದೆ
Vijaya Karnataka Web lorry collapses bike rider dies
ಲಾರಿ ಡಿಕ್ಕಿ: ಬೈಕ್‌ ಸವಾರರಿಬ್ಬರು ಸಾವು


ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಹುಲ್ಲೂರ ಗ್ರಾಮದವರಾದ ಮಲ್ಲಿಕಾರ್ಜುನ ಬ್ಯಾಲಿಹಾಳ(28) ಮಂಜು ಒಡೆಯರ(30)ಮೃತರು. ವೈಯಕ್ತಿಕ ಕೆಲಸದ ನಿಮಿತ್ತವಾಗಿ ಬಾಗಲಕೋಟ ನಗರಕ್ಕೆ ಬಂದಿದ್ದು ಕೆಲಸ ಮುಗಿಸಿ ಬೊಡನಾಯಕದಿನ್ನಿ ಕ್ರಾಸ್‌ ಮಾರ್ಗವಾಗಿ ಹುಲ್ಲೂರ ಗ್ರಾಮಕ್ಕೆ ತೆರಳುತ್ತಿದ್ದರು. ನಾಯನೇಗಲಿ ಸುಗರ್‌ ಪ್ಯಾಕ್ಟ್ರಿಗೆ ಕಬ್ಬು ಇಳಿಸಿ ಬಾಗಲಕೋಟ ಕಡೆಗೆ ವೇಗವಾಗಿ ಚಲಿಸುತ್ತಿದ್ದ ಖಾಲಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಸ್ಥಳದಲ್ಲೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಲಾರಿ ಚಾಲಕ ಪರಾರಿಯಾಗಿದ್ದು, ಬಾಗಲಕೋಟ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ