ಆ್ಯಪ್ನಗರ

ಕುಮಾರಸ್ವಾಮಿಯೇ 5 ವರ್ಷ ಮುಖ್ಯಮಂತ್ರಿ: ಎಂ ಬಿ ಪಾಟಿಲ್‌

ಮಾಜಿ ಸಿಎಂ ಸಿದ್ದರಾಮಯ್ಯನವರೇ ನಮ್ಮ ಮುಖ್ಯಮಂತ್ರಿ ಎಂಬ ಹೇಳಿಕೆಗಳ ಮೂಲಕ ಸಮ್ಮಿಶ್ರ ಸರಕಾರದಲ್ಲಿ ಗೊಂದಲವನ್ನುಂಟು ಮಾಡಿದ್ದ ಶಾಸಕ ಬಿ. ನಾರಾಯಣರಾವ್‌ ಮತ್ತು ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದ ಸಚಿವ ಎಂಬಿ ಪಾಟಿಲ್‌.

Vijaya Karnataka 23 Feb 2019, 10:28 am
ಬಾಗಲಕೋಟೆ: ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರಕಾರವು ರಾಜ್ಯದಲ್ಲಿ 5 ವರ್ಷ ಪೂರೈಸಲಿದ್ದು, ಎಚ್ ಡಿ ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿಯಾಗಿ ಇರುತ್ತಾರೆ ಎಂದು ಗೃಹ ಸಚಿವ ಎಂ ಬಿ ಪಾಟಿಲ್‌ ಸ್ಪಷ್ಟಪಡಿಸಿದ್ದಾರೆ.
Vijaya Karnataka Web MB Patil


ಬಾಗಲಕೋಟೆಯ ಹನಗುಂದ ತಾಲೂಕಿನ ಕೂಡಲಸಂಗಮದಲ್ಲಿರುವ ವಿಶ್ವಗುರು ಬಸವಣ್ಣನವರ ಐಕ್ಯಮಂಟಪಕ್ಕೆ ಭೇಟಿ ನೀಡಿದ ಎಂ ಬಿ ಪಾಟಿಲ್‌ ಬಿರುಕು ಬಿಟ್ಟ ಶಿವಲಿಂಗ ವೀಕ್ಷಣೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು. ಬಸವ ಕಲ್ಯಾಣದ ಶಾಸಕ ಬಿ. ನಾರಾಯಣರಾವ್‌ ಅವರು ಸಿದ್ದರಾಮಯ್ಯನವರೇ ಮುಂದಿನ ಸಿಎಂ ಎಂದು ಹೇಳಿಕೆ ನೀಡಿರುವುದು ಭಾವನಾತ್ಮಕದಿಂದ ಕೂಡಿದೆ. ಸಿದ್ದರಾಮಯ್ಯ ಅವರು ಕಳೆದ 5 ವರ್ಷಗಳ ಅವಧಿಯಲ್ಲಿ ಉತ್ತಮ ಆಡಳಿತ ನೀಡಿದ್ದಾರೆ. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಬೇಕು ಎಂಬುದು ಅವರ ಆಪ್ತರ ಆಶಯವಾಗಿದೆ. ಹೀಗಾಗಿ ಶಾಸಕ ನಾರಾಯಣರಾವ್‌ ಭಾವನಾತ್ಮಕವಾಗಿ ಸಿದ್ದರಾಮಯ್ಯನವರೇ ಸಿಎಂ ಎಂದು ಹೇಳಿದ್ದಾರೆ. ಆದರೆ ಸಮ್ಮಿಶ್ರ ಸರಕಾರ 5 ವರ್ಷ ಪೂರೈಸುತ್ತದೆ. ಎಚ್‌ ಡಿ ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿಗಳಾಗಿ ಸಂಪೂರ್ಣ ಅವಧಿ ಪೂರೈಸಲಿದ್ದಾರೆ ಎಂದು ಎಂ ಬಿ ಪಾಟಿಲ್‌ ಸ್ಪಷ್ಟ ಪಡಿಸಿದ್ದಾರೆ.

ಈ ಮೊದಲು, ಐದು ವರ್ಷದ ಸಮ್ಮಿಶ್ರ ಸರಕಾರದ ನಂತರ ಸ್ವಂತ ಬಲದಿಂದ ಕಾಂಗ್ರೆಸ್‌ ಅಧಿಕಾರಕ್ಕೆ ಬರಬೇಕು ಎಂಬುದು ನಮ್ಮ ಬಯಕೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕು ಎಂದು ಶಾಸಕರು ಮತ್ತು ಜನ ಬಯಸಿದರೆ ತಪ್ಪಿಲ್ಲ ಎಂದು ಸಚಿವ ಎಂ ಬಿ ಪಾಟಿಲ್‌ ಹೇಳಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ