ಆ್ಯಪ್ನಗರ

ಪ್ರವಾಹ ವಿಚಾರದಲ್ಲಿ ರಾಜಕಾರಣ ಬೇಡ: ಕಾಂಗ್ರೆಸ್‌ಗೆ ಚಾಟಿ ಬೀಸಿದ ಸಚಿವ ಸಿ ಸಿ ಪಾಟೀಲ್

ಪ್ರವಾಹ ವಿಚಾರದಲ್ಲಿ ರಾಜಕೀಯ ಬೇಡ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ ಸಿ ಪಾಟೀಲ್ ಹೇಳಿದರು.

Vijaya Karnataka Web 10 Sep 2019, 4:36 pm
ಬಾಗಲಕೋಟ: ಪ್ರವಾಹ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ರಾಜಕಾರಣ ಮಾಡಬಾರದು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ ಸಿ ಪಾಟೀಲ್ ಚಾಟಿ ಬೀಸಿದ್ದಾರೆ.
Vijaya Karnataka Web c c patil2


ಕೂಡಲಸಂಗಮದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಬಾಗಲಕೋಟ ಜಿಲ್ಲೆ ಉಪಮುಖ್ಯಮಂತ್ರಿ ಗೋವಿಂದ್ ಕಾರಜೋಳ ಅವರ ಕ್ಷೇತ್ರವಾಗಿದ್ದು, ಪ್ರವಾಹ ಸಂಬಂಧ ಅವರು ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ಹೇಳಿದರು.

ರಾಜ್ಯದಲ್ಲಿ ಪ್ರವಾಹ ಬಂದಿರುವುದು ಇದೇ ಮೊದಲೇನಲ್ಲ. ಆದರೆ, ಈಗ ಬಂದಿರುವ ಪ್ರವಾಹ ಉಗ್ರವಾಗಿತ್ತು. ಪ್ರವಾಹ ಸ್ಥಿತಿ ಎದುರಿಸಲು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಸರಕಾರ ಯಶಸ್ವಿಯಾಗಿದೆ. ಪ್ರವಾಹ ಪೀಡಿತ ಪ್ರದೇಶಗಳಿಗೆ ಸಿಎಂ ಭೇಟಿ ನೀಡಿದ್ದು, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನೆರೆ ಸಂತ್ರಸ್ತರಿಗೆ 10 ಸಾವಿರ ಪರಿಹಾರ ಮತ್ತು ಮನೆ ಕಳೆದುಕೊಂಡವರಿದೆ 5 ಲಕ್ಷ ರೂ. ಪರಿಹಾರ ನೀಡಲಾಗುತ್ತಿದೆ ಎನ್ನುವುದನ್ನು ಕಾಂಗ್ರೆಸ್ ಸ್ನೇಹಿತರು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.

ಆಡಳಿತದಲ್ಲಿ ಸಿಎಂ, ಸಚಿವರ ಪುತ್ರರ ಹಸ್ತಕ್ಷೇಪ

ಆಡಳಿತದಲ್ಲಿ ಮುಖ್ಯಮಂತ್ರಿ ಮತ್ತು ಮಂತ್ರಿಗಳ ಮಕ್ಕಳ ಹಸ್ತಕ್ಷೇಪಕ್ಕೆ ಹೈಕಮಾಂಡ್ ಎಚ್ಚರಿಕೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ ಸಿ ಪಾಟೀಲ್, 'ಹೈಕಮಾಂಡ್‌ನಿಂದ ನನಗೆ ಯಾವುದೇ ಎಚ್ಚರಿಕೆ ಬಂದಿಲ್ಲ. ನನಗೆ ಮೂವರು ಮೂವರು ಗಂಡು ಮಕ್ಕಳು. ಓರ್ವ ಮಗಳು ವಿದೇಶದಲ್ಲಿದ್ದಾರೆ. ನಾನ್ನ ಅನುಪಸ್ಥಿತಿಯಲ್ಲಿ ಮದುವೆ ಸಮಾರಂಭ ಅಥವಾ ಸಾರ್ವಜನಿಕ ಸಮಾರಂಭಗಳಿಗೆ ಮಾತ್ರ ನನ್ನ ಮಕ್ಕಳು ಹೋಗಿರುತ್ತಾರೆ. ಆದರೆ, ಸರಕಾರಿ ಕೆಲಸದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇಡಿನ ರಾಜಕಾರಣ ಮಾಡುತ್ತಿದ್ದಾರೆಂದು ಕಾಂಗ್ರೆಸ್ ನಾಯಕರ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಸಚಿವರು, ಕಾಂಗ್ರೆಸ್ಸಿಗರು ಆಕ್ಷೇಪಣೆ ಮಾಡುತ್ತಾರೆ. ಆದರೆ, ಅದನ್ನು ನಿಜ ಎಂದು ತಿಳಿದುಕೊಳ್ಳಬೇಕಿಲ್ಲ ಎಂದರು.

ಸೇಡಿನ ರಾಜಕಾರಣ ಮಾಡುವುದಿಲ್ಲ ಎನ್ನುವುದಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಬದ್ಧವಾಗಿದ್ದಾರೆ. ಹೀಗಾಗಿ ರಾಜ್ಯದ ಎಲ್ಲ ಕ್ಷೇತ್ರದ ರೈತರ ಬಾಯಿಯಲ್ಲಿ ಅವರ ಹೆಸರಿದೆ ಎಂದು ಹೇಳಿದರು.

ಮಾಜಿ ಸಚಿವ ಡಿ ಕೆ ಶಿವಕುಮಾರ್ ಬಂಧನದ ಹಿಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೈವಾಡ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದ ಪ್ರಶ್ನೆಗೆ ಮಾಧ್ಯಮಗಳಿಗೆ ಕೈ ಮುಗಿದ ಸಚಿವ ಸಿಸಿ ಪಾಟೀಲ್, ನನ್ನ ಇಲಾಖೆಗೆ ಸಂಬಂಧ ಪಟ್ಟ ಪ್ರಶ್ನೆಗಳಿಗೆ ಮಾತ್ರ ಉತ್ತರವೆಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ