ಆ್ಯಪ್ನಗರ

ಆರ್‌ಎಸ್‌ಎಸ್‌ ಬಗ್ಗೆ ಮಾತನಾಡುವ ನೈತಿಕ ಹಕ್ಕು ಕಾಂಗ್ರೆಸ್‌, ಜೆಡಿಎಸ್‌ಗಿಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರೇ ದೇಶಭಕ್ತ ಆರ್.ಎಸ್.ಎಸ್ ಸಂಸ್ಥೆಯನ್ನ ಎಳೆದು ತರಬೇಡಿ. ಆರ್‌ಎಸ್‌ಎಸ್‌ ಸಂಘಟನೆ ಹಾಗೂ ಅಲ್ಲಿರುವ ಕಾರ್ಯಕರ್ತರ ಬಗ್ಗೆ ನಿಮಗೆ ಏನೂ ಗೊತ್ತಿಲ್ಲ. ದೇಶದ ಸಂಸ್ಕೃತಿ ಉಳಿಸಿ ಬೆಳೆಸಿಕೊಂಡು ಬಂದದ್ದೇ ಆರೆಸ್ಸೆಸ್

Vijaya Karnataka Web 9 Oct 2021, 2:56 pm
ಬಾಗಲಕೋಟೆ: ಆರ್‌ಎಸ್‌ಎಸ್‌ ವಿರುದ್ಧ ವಿರುದ್ಧ ಅವಹೇಳನವಾಗಿ ಮಾತನಾಡುತ್ತಿರುವ ಕಾಂಗ್ರೆಸ್, ಜೆಡಿಎಸ್‌ ನಾಯಕರಿಗೆ ಜಲ ಸಂಪನ್ಮೂಲ ಖಾತೆ ಸಚಿವ ಗೋವಿಂದ ಕಾರಜೋಳ ಎಚ್ಚರಿಕೆ ನೀಡಿದ್ದಾರೆ,
Vijaya Karnataka Web ಗೋವಿಂದ ಕಾರಜೋಳ
ಗೋವಿಂದ ಕಾರಜೋಳ


ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಸಚಿವ ಗೋವಿಂದ ಕಾರಜೋಳ ಮಾತನಾಡಿದರು.

ಕೇಶವ ಕೃಪದಲ್ಲಿರುವವರು ದೇಶಭಕ್ತರು. ದೇಶಕ್ಕಾಗಿ ಸರ್ವಸ್ವ ತ್ಯಾಗ ಮಾಡಿ, ಪೂರ್ವಾಶ್ರಮ ತೊರೆದವರು. ಅವರು ಶರಣರು ಸೂಫಿ ಸಂತರಂತೆ ಕೆಲಸ ಮಾಡುತ್ತಿದ್ದಾರೆ. ಕೇಶವ ಕೃಪದಲ್ಲಿ ಯಾವ್ಯಾವ ಜಾತಿಯವರು ಇದ್ದಾರೆ ಎನ್ನುವುದೂ ಗೊತ್ತಿಲ್ಲ. ಆರ್‌ಎಸ್‌ಎಸ್ ಬಗ್ಗೆ ಮಾತನಾಡುವ ಹಕ್ಕು ಕಾಂಗ್ರೆಸ್‌, ಜೆಡಿಎಸ್‌ಗಿಲ್ಲ ಎಂದು ಹೇಳಿದರು.

ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರೇ ದೇಶಭಕ್ತ ಆರ್.ಎಸ್.ಎಸ್ ಸಂಸ್ಥೆಯನ್ನ ಎಳೆದು ತರಬೇಡಿ. ಆರ್‌ಎಸ್‌ಎಸ್‌ ಸಂಘಟನೆ ಹಾಗೂ ಅಲ್ಲಿರುವ ಕಾರ್ಯಕರ್ತರ ಬಗ್ಗೆ ನಿಮಗೆ ಏನೂ ಗೊತ್ತಿಲ್ಲ ಎಂದು ಗೋವಿಂದ ಕಾರಜೋಳ ತರಾಟೆಗೆ ತೆಗೆದುಕೊಂಡರು.

ದೇಶದ ಸಂಸ್ಕೃತಿ ಉಳಿಸಿ ಬೆಳೆಸಿಕೊಂಡು ಬಂದದ್ದೇ ಆರೆಸ್ಸೆಸ್. ಆರೆಸ್ಸೆಸ್ ನಲ್ಲಿ ಜಾತಿ ಮತ ಪಂಥ ಬಡವ ಬಲ್ಲಿದ ಯಾವುದೂ ಇಲ್ಲ ಎಂದು ಸ್ಪಷ್ಟಪಡಿಸಿದರು.

ಉಪಚುನಾವಣೆಯಲ್ಲಿ ಗೆಲುವು ನಮ್ಮದಾಗುತ್ತೆ..


ಮೋದಿ ಸಾಧನೆ, ಬಿಎಸ್ವೈ ಆಡಳಿತ, ಕೋವಿಡ್, ಪ್ರವಾಹ ನಿವ೯ಹಣೆ ಹಾಗೂ ಬೊಮ್ಮಾಯಿ ಅವರ ಆಡಳಿತ ಮುಂದಿಟ್ಟು ಉಪ ಚುನಾವಣೆಯಲ್ಲಿ ಮತ ಕೇಳುತ್ತೇವೆ ಎಂದು ಸಚಿವರು ತಿಳಿಸಿದರು.

ಕಾಂಗ್ರೆಸ್ ವಿನಾಕಾರಣ ಜನರ ಭಾವನೆ ಕೆರಳಿಸುತ್ತಿದೆ, ಜನರಲ್ಲಿ ತಪ್ಪು ಭಾವನೆ ಮೂಡಿಸುತ್ತಿದೆ. ಅವರಿಗೆ ಹೇಳಿಕೊಳ್ಳಲು ಸಾಧನೆ ಶೂನ್ಯವಿದೆ. ಹೀಗಾಗಿ ಆರ್‌ಎಸ್‌ಎಸ್ ಬೈಯ್ಯುವಂತಹ ಕೆಲಸ ಮಾಡುತ್ತಿದ್ದಾರೆ ಕಾಂಗ್ರೆಸ್‌ ನಾಯಕರು ಎಂದು ಗೋವಿಂದ ಕಾರಜೋಳ ತಿಳಿಸಿದರು.

ಕಾಂಗ್ರೆಸ್ , ಜೆಡಿಎಸ್ ನಾಯಕರೇ ನೀವು ಚುನಾವಣೆಯಲ್ಲಿ ಬಿಜೆಪಿ ಎದುರಿಸಬೇಕು. ನಮ್ಮ ರಾಷ್ಟ್ರೀಯ ನಾಯಕರು ಸಂಸದೀಯ ಮಂಡಳಿ ಸಭೆ ನಡೆಸಿ ಹಾನಗಲ್‌ಗೆ ಶಿವರಾಜ್ ಸಜ್ಜನ, ಸಿಂದಗಿಗೆ ರಮೇಶ್ ಭೂಸನೂರ್ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದಾರೆ. ನಮ್ಮ ಅಭ್ಯರ್ಥಿಗಳು ಗೆಲುವಿನ ಮುನ್ಸೂಚನೆ ನೀಡಿದ್ದಾರೆ ಎಂದು ಸಚಿವರು ತಿಳಿಸಿದರು.

ನಾವು ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ನವರ ಹಾಗೆ ಭಾವನಾತ್ಮಕ ಸಮಸ್ಯೆಗಳನ್ನ ಕೆದಕುವ ಕೆಲಸ ಮಾಡಲ್ಲ.. ನಮಗೆ ರೋಲ್ ಮಾಡೆಲ್ ನಮ್ಮ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ. ವಿಶ್ವದ 99 ದೇಶಗಳು ನರೇಂದ್ರ ಮೋದಿ ಅವರು ವಿಶ್ವದ ನಾಯಕ ಆಗಬೇಕು ಎಂದು ಆಶಯ ವ್ಯಕ್ತಪಡಿಸಿವೆ. ಮೋದಿ ಅವರ ಸಾಧನೆಗಳನ್ನ ಮುಂದೆ ಇಟ್ಟುಕೊಂಡು ಚುನಾವಣೆ ಎದುರಿಸುತ್ತೇವೆ ಎಂದು ಗೋವಿಂದ ಕಾರಜೋಳ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ