ಆ್ಯಪ್ನಗರ

ಕುರುಬ ಸಮಾವೇಶಕ್ಕೆ ಸಿದ್ದರಾಮಯ್ಯ ಗೈರು, ಕೆ.ಎಸ್‌ ಈಶ್ವರಪ್ಪ ಅಸಮಾಧಾನ

ಎಸ್‌ಟಿ ಮೀಸಲಾತಿ ಆಗ್ರಹಿಸಿ ಕುರುಬ ಸಮುದಾಯ ಬಾಗಲಕೋಟೆಯಲ್ಲಿ ಸಮಾವೇಶ ನಡೆಸುತ್ತಿದ್ದು ಇದಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗೈರಾಗಿದ್ದಾರೆ. ಸಿದ್ದರಾಮಯ್ಯ ಸಮಾವೇಶದಲ್ಲಿ ಭಾಗಿಯಾಗದೆ ಇದ್ದಿದ್ದಕ್ಕೆ ಕೆ.ಎಸ್ ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Vijaya Karnataka Web 29 Nov 2020, 1:27 pm
ಬಾಗಲಕೋಟೆ: ಕುರುಬ ಸಮುದಾಯಕ್ಕೆ ಎಸ್‌ಟಿ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಬಾಗಲಕೋಟೆಯಲ್ಲಿ ನಡೆಯುತ್ತಿರುವ ಸಮಾವೇಶಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗೈರು ಹಾಜರಾಗಿದ್ದಕ್ಕೆ ಸಚಿವ ಕೆ.ಎಸ್ ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Vijaya Karnataka Web ks eshwarappa


ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಸಮಾವೇಶಕ್ಕೆ ಹಾಜರಾಗುವಂತೆ ನಾನು ನೂರು ಸಾರಿ ಕೇಳಿದ್ದೇನೆ, ಬೆಂಬಲವಿದೆ ಅನ್ನುತ್ತಾರೆ ಆದರೆ ಸಮಾವೇಶಕ್ಕೆ ಬರುವುದಿಲ್ಲ ಎಂದರು. ಇಂತಹ ಸಂದರ್ಭದಲ್ಲಿ ನಾವು ಏನು ಮಾಡಲು ಸಾಧ್ಯ? ಕರೆದುಕೊಂಡು ಬರಲು ಆಗುತ್ತಾ? ಎಳೆದುಕೊಂಡು ಬರಲು ಸಾಧ್ಯವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸ್ಫೋಟಕ ವಿಡಿಯೋ ಸದ್ದು! ಕೆ.ಎಸ್ ಈಶ್ವರಪ್ಪ ಏಕೆ ಹೆಗಲು ಮುಟ್ಟಿ ನೋಡುತ್ತಿದ್ದಾರೆ? ಡಿಕೆಶಿ ಪ್ರಶ್ನೆ

ಸಮಾವೇಶಕ್ಕೆ ಎಲ್ಲರೂ ಬಂದಿದ್ದಾರೆ, ಸಿದ್ದರಾಮಯ್ಯ ಕೂಡಾ ನ್ಯಾಯಯುತವಾಗಿ ಬರಬೇಕು ಎಂದು ಕೆಎಸ್‌ ಈಶ್ವರಪ್ಪ ಆಗ್ರಹಿಸಿದರು. ಇನ್ನು ಸಂಪುಟ ವಿಸ್ತರಣೆ ಕುರಿತಾಗಿ ಮಾತನಾಡಿದ ಅವರು, ಕಾಂಗ್ರೆಸ್ ಜೆಡಿಎಸ್ ನಿಂದ ರಾಜೀನಾಮೆ ಕೊಟ್ಟು ಬಂದವರು ಸಚಿವರಾಗಬೇಕು ಎಂಬುವುದು ನಮ್ಮ ಅಪೇಕ್ಷೆ, ನಮ್ಮ ಪಕ್ಷದ ನಾಯಕರು ಅವರನ್ನು ಮಂತ್ರಿ ಮಾಡುತ್ತೇವೆ ಎಂದು ಆಶ್ವಾಸನೆ ಕೊಟ್ಟಿದ್ದರು.ಕಾಂಗ್ರೆಸ್, ಜೆಡಿಎಸ್ ಗೆ ರಾಜೀನಾಮೆ ಕೊಟ್ಟು ಬರೆದಿದ್ರೆ ನಮ್ಮ ಸರ್ಕಾರವೇ ಬರುತ್ತಿರಲಿಲ್ಲ, ಈ ನಿಟ್ಟಿನಲ್ಲಿ ನಾವು ನಮ್ಮ ಋಣ ತೀರಿಸಬೇಕಿದೆ ತೀರಿಸುತ್ತೇವೆ ಎಂದರು.

ನಮ್ಮ ಶಾಸಕರು ಮಂತ್ರಿ ಸ್ಥಾನ ಕೇಳುತ್ತಿದ್ದಾರೆ, ಚುನಾವಣೆ ವೇಳೆ ರಾಜ್ಯದ ಜನ ಪೂರ್ಣ ಬಹುಮತ ಕೊಟ್ಟಿದ್ರೆ ಈ ಗೊಂದಲ ಇರುತ್ತಿರಲಿಲ್ಲ ಎಂದ ಈಶ್ವರಪ್ಪ ರಾಜ್ಯದ ಜನ ಅಧಿಕಾರ ಮಾಡಿ ಎಂದು ಮತ ನೀಡಿದರು, ಆದರೆ ಬಹುಮತ ಕೊಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ