ಆ್ಯಪ್ನಗರ

ಮೋದಿಗೆ ಕಿವಿ ಕೇಳುತ್ತಿಲ್ಲ, ಕಣ್ಣು ಕಾಣಿಸುತ್ತಿಲ್ಲ:ಸಿದ್ದರಾಮಯ್ಯ

ಬಾಗಲಕೋಟೆ: 'ರಾಜ್ಯದಲ್ಲಿ ಪ್ರವಾಹ ಸ್ಥಿತಿಯಿಂದ ಜನರು ಸಂಕಷ್ಟದಲ್ಲಿರುವ ಬಗ್ಗೆ ಪ್ರಧಾನಿ ಮೋದಿಗೆ ಕಣ್ಣು ಕಾಣಿಸುತ್ತಿಲ್ಲ, ಕಿವಿ ಕೇಳಿಸುತ್ತಿಲ್ಲ' ಎಂದು ಮಾಜಿ ಸಿಎಂ, ಬಾದಾಮಿ ಶಾಸಕ ಸಿದ್ದರಾಮಯ್ಯ ಟೀಕಿಸಿದರು.

Vijaya Karnataka 20 Aug 2019, 8:39 am
ಬಾಗಲಕೋಟೆ: 'ರಾಜ್ಯದಲ್ಲಿ ಪ್ರವಾಹ ಸ್ಥಿತಿಯಿಂದ ಜನರು ಸಂಕಷ್ಟದಲ್ಲಿರುವ ಬಗ್ಗೆ ಪ್ರಧಾನಿ ಮೋದಿಗೆ ಕಣ್ಣು ಕಾಣಿಸುತ್ತಿಲ್ಲ, ಕಿವಿ ಕೇಳಿಸುತ್ತಿಲ್ಲ' ಎಂದು ಮಾಜಿ ಸಿಎಂ, ಬಾದಾಮಿ ಶಾಸಕ ಸಿದ್ದರಾಮಯ್ಯ ಟೀಕಿಸಿದರು.
Vijaya Karnataka Web Siddaramaiah


ಜಿಲ್ಲೆಯ ಬಾದಾಮಿ ತಾಲೂಕಿನ ಬೀರನೂರ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು 'ಪ್ರವಾಹ ಬಂದು 15 ದಿನವಾದರೂ ಕೇಂದ್ರ ಸರಕಾರದಿಂದ ಒಂದು ಪೈಸೆ ನೀಡಿಲ್ಲ. ಅಮಿತ್‌ ಶಾ, ನಿರ್ಮಲಾ ಸೀತಾರಾಮನ್‌ ಹೀಗೆ ಬಂದು ಹಾಗೆ ಹೋದರು. ರಾಜ್ಯದಲ್ಲಿ ಅಂದಾಜು 10 ಸಾವಿರ ಕೋಟಿ ರೂ. ಹಾನಿಯಾಗಿದೆ. ತಕ್ಷಣ ಕೇಂದ್ರ ಸರಕಾರ 5ಸಾವಿರ ಕೋಟಿ ರೂ. ನೀಡಬೇಕು, ಕೇಂದ್ರ ತಂಡ ಪರಿಶೀಲನೆ ನಡೆಸಿದ ನಂತರ ಉಳಿದ ಹಣ ಬಿಡುಗಡೆಗೊಳಿಸಲಿ. 2009ರಲ್ಲಿ ಅಂದಿನ ಪ್ರಧಾನಿ ಮನಮೋಹನ್‌ ಸಿಂಗ್‌ ವೈಮಾನಿಕ ಸಮೀಕ್ಷೆ ನಡೆಸಿ ಪ್ರವಾಹ ಪೀಡಿತ ಪ್ರದೇಶಕ್ಕೆ 1,500 ಕೋಟಿ ರೂ. ಪರಿಹಾರ ನೀಡಿದ್ದರು. ಪ್ರಧಾನಿ ಮೋದಿ ರಾಜ್ಯದ ನೆರೆಪೀಡಿತರ ವಿಷಯದಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದ್ದಾರೆ' ಎಂದು ಆರೋಪಿಸಿದರು.

'ಫೋನ್‌ ಟ್ಯಾಪ್‌ ಪ್ರಕರಣವನ್ನು ಸಿಬಿಐಗೆ ವಹಿಸಿ ಎಂದು ನಾನು ಹೇಳಿಲ್ಲ. ನನ್ನ ಆಪ್ತ ಸಹಾಯಕರ ಫೋನ್‌ ಟ್ಯಾಪ್‌ ಆಗಿದ್ದರೆ ತನಿಖೆ ಮಾಡಿಸಲಿ ಎಂದಿದ್ದೆ, ನಾನು ಹೇಳಿದ್ದೇನೆ ಎಂದು ಯಡಿಯೂರಪ್ಪ ಸುಳ್ಳು ಹೇಳಿಕೆ ನೀಡುತ್ತಿದ್ದಾರೆ. ಸಿಬಿಐ ಅಥವಾ ಇಂತಹದ್ದೇ ಏಜೆನ್ಸಿಯಿಂದ ತನಿಖೆಯಾಗಲಿ ಎಂದು ನಾನು ಹೇಳಿಲ್ಲ. ಆಪರೇಶನ್‌ ಕಮಲ ಪ್ರಕರಣವನ್ನೂ ಸಿಬಿಐಗೆ ವಹಿಸಿ ಎಂದು ನಾನು ಯಡಿಯೂರಪ್ಪರಿಗೆ ಆಗ್ರಹಿಸುತ್ತೇನೆ. ನನ್ನ ಮಾತು ಕೇಳುವುದಾದರೆ ಯಡಿಯೂರಪ್ಪ ಆಪರೇಶನ್‌ ಕಮಲದ ಬಗ್ಗೆ ಸಮಗ್ರ ತನಿಖೆಯನ್ನು ಸಿಬಿಐಗೆ ನೀಡಲಿ. ಆಪರೇಷನ್‌ ಕಮಲದಲ್ಲಿ ಸಾವಿರಾರು ಕೋಟಿ ಹಣ ವಿನಿಮಯವಾಗಿದೆ' ಎಂದರು. ಸಂಸದ ರಾಘವೇಂದ್ರ ವರ್ಗಾವಣೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು 'ಈ ಬಗ್ಗೆ ಕಾಲ ಬಂದಾಗ ಉತ್ತರಿಸುತ್ತೇನೆ' ಎಂದಷ್ಟೇ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ