ಆ್ಯಪ್ನಗರ

ಅಮ್ಮ ಸಾಂತ್ವಾನ ಕೇಂದ್ರ ಕಪ್ಪುಪಟ್ಟಿಗೆ

ಬಾಗಲಕೋಟೆ: ಜಿಲ್ಲೆಯ ಜಮಖಂಡಿ ತಾಲೂಕಿನ ಅಮ್ಮ ಸಾಂತ್ವಾನ ಕೇಂದ್ರದಲ್ಲಿದ್ದ ಮಹಿಳೆಯರನ್ನು ಮನೆಗೆ ಕಳುಹಿಸುವಾಗ ಹಣ ಪಡೆದಿದ್ದು ಸಾಬೀತಾದ ಹಿನ್ನಲೆಯಲ್ಲಿಕೇಂದ್ರವನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಜಿಲ್ಲಾಸಮಿತಿಗೆ ಪತ್ರ ಬರೆಯಲಾಗಿದೆ ಎಂದು ಎಸ್ಪಿ ಲೋಕೇಶ ಜಗಲಾಸರ್‌ ಹೇಳಿದರು.

Vijaya Karnataka 28 Jan 2020, 5:00 am
ಬಾಗಲಕೋಟೆ: ಜಿಲ್ಲೆಯ ಜಮಖಂಡಿ ತಾಲೂಕಿನ ಅಮ್ಮ ಸಾಂತ್ವಾನ ಕೇಂದ್ರದಲ್ಲಿದ್ದ ಮಹಿಳೆಯರನ್ನು ಮನೆಗೆ ಕಳುಹಿಸುವಾಗ ಹಣ ಪಡೆದಿದ್ದು ಸಾಬೀತಾದ ಹಿನ್ನಲೆಯಲ್ಲಿಕೇಂದ್ರವನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಜಿಲ್ಲಾಸಮಿತಿಗೆ ಪತ್ರ ಬರೆಯಲಾಗಿದೆ ಎಂದು ಎಸ್ಪಿ ಲೋಕೇಶ ಜಗಲಾಸರ್‌ ಹೇಳಿದರು.
Vijaya Karnataka Web mummy savannah center blacklist
ಅಮ್ಮ ಸಾಂತ್ವಾನ ಕೇಂದ್ರ ಕಪ್ಪುಪಟ್ಟಿಗೆ


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿರಾಶ್ರಿತ ಮಹಿಳೆಯರು, ಮಕ್ಕಳನ್ನು ಕುಟುಂಬಗಳಿಗೆ ಒಪ್ಪಿಸುವ ಸಂದರ್ಭದಲ್ಲಿಹಣ ಪಡೆದಿರುವುದು ವಿಚಾರಣೆಯಲ್ಲಿಕಂಡಿದ್ದು ಆದರೆ ಮಾರಾಟ ಮಾಡಿರುವ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಸಂಸ್ಥೆಯಿಂದ ಮಕ್ಕಳ ಮಾರಾಟ ನಡೆಯುತ್ತಿದೆ ಎಂದು ಆರೋಪಿಸಿ ಮಕ್ಕಳ ಕಲ್ಯಾಣ ಸಮಿತಿ ದೂರು ನೀಡಿತ್ತು. ಇದನ್ನು ಆಧರಿಸಿ ಸಂಸ್ಥೆ ಮುಖ್ಯಸ್ಥೆ ರೇಖಾ ಕಾಂತಿ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿತ್ತು. ಪ್ರಕರಣದ ಎಲ್ಲಆಯಾಮಗಳಲ್ಲಿತನಿಖೆ ನಡೆಸಿದ್ದು ಮಕ್ಕಳ ಮಾರಾಟ ನಡೆದಿಲ್ಲ. ಆಶ್ರಮದಲ್ಲಿದ್ದು ನಂತರದಲ್ಲಿಕುಟುಂಬ ಸೇರಿರುವ 92 ಮಹಿಳೆಯರನ್ನು ಭೇಟಿ ಮಾಡಿ ವಿಚಾರಿಸಿ ಅವರಿಂದ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ಇನ್ನು ಬಾಲ್ಯ ವಿವಾಹ, ನಿರಾಶ್ರಿತರನ್ನು ಒಪ್ಪಿಸುವ ಸಂದರ್ಭದಲ್ಲಿಹಣ ಪಡೆದಿರುವುದು ಕಂಡು ಬಂದ ಹಿನ್ನಲೆಯಲ್ಲಿಸಂಸ್ಥೆಯನ್ನು ಕಪ್ಪುಪಟ್ಟಿಗೆ ಸೇರಿಸಲು ಸೂಚಿಸಲಾಗಿದೆ ಎಂದರು.

ರಕ್ಷಣೆ ಪಡೆದ ಮಹಿಳೆಯರು ಸದ್ಯ ಮನೆ ಹಾಗೂ ಕೂಲಿ ಕೆಲಸ ಮಾಡಿಕೊಂಡು ಮಹಾರಾಷ್ಟ್ರ, ಆಂಧ್ರಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿದ್ದಾರೆ. ಅವರಿಂದ ಸಾಂತ್ವಾನ ಕೇಂದ್ರದ ಬಗ್ಗೆ ಮಾಹಿತಿ ಪಡೆಯುವ ಸಂದರ್ಭದಲ್ಲಿಕೇಂದ್ರದಲ್ಲಿದ್ದ ಮಹಿಳೆಯರನ್ನು ಗಂಡನ ಮನೆಗೆ ಕಳುಹಿಸುವ ಸಂದರ್ಭದಲ್ಲಿದುಡ್ಡು ಪಡೆದಿರುವುದು ಹಾಗೂ ಬಾಲ್ಯ ವಿವಾಹ ಮಾಡಿಸಿದ್ದು ಸಾಬೀತಾದ ಹಿನ್ನೆಲೆಯಲ್ಲಿಪ್ರಕರಣ ದಾಖಲಿಸುವ ಜತೆಗೆ ಕೇಂದ್ರವನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಜಿಲ್ಲಾಸಮಿತಿಗೆ ಪತ್ರ ಬರೆಯಲಾಗಿದೆ ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ