ಆ್ಯಪ್ನಗರ

ಗೌಡರು ಮತ್ತೆ ಹುಟ್ಟಿ ಬಂದರೂ, ಸಿದ್ದು ಹೆಸರು ಕೆಡಿಸಲಾಗಲ್ಲ: ನಿರಂಜನಾನಂದಪುರಿ

ದೇವೇಗೌಡರ ಕುಟುಂಬ ಮತ್ತೊಮ್ಮೆ ಹುಟ್ಟಿ ಬಂದರೂ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರು ಹಾಳು ಮಾಡಲು ಆಗಲ್ಲ ಎಂದು ಕಾಗಿನೆಲೆ ಪೀಠದ ಸ್ವಾಮೀಜಿ ಹೇಳಿದರು.

Vijaya Karnataka Web 28 Aug 2019, 4:51 pm
ಬಾಗಲಕೋಟ: ಮಾಜಿ ಪ್ರಧಾನಿ ದೇವೇಗೌಡರ ಕುಟುಂಬ ಮತ್ತೊಮ್ಮೆ ಹುಟ್ಟಿ ಬಂದರೂ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರು ಹಾಳು ಮಾಡಲು ಆಗಲ್ಲ ಎಂದು ಕಾಗಿನೆಲೆ ಪೀಠದ ನಿರಂಜನಾನಂದಪುರಿ ಸ್ವಾಮೀಜಿ ಹೇಳಿದ್ದಾರೆ.
Vijaya Karnataka Web niranjan


ಜಿಲ್ಲೆಯ ಮುಧೋಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಸಿದ್ದರಾಮಯ್ಯ, ಸಿದ್ದರಾಮಯ್ಯನೇ. ಅವರಿಗೆ ಯಾರು ಸರಿಸಾಟಿ ಅಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯರನ್ನು ಕಟ್ಟಿ ಹಾಕುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಟಗರು ಗುಮ್ಮುತ್ತೆ ಎನ್ನುವುದನ್ನು ಕಾದು ನೋಡಿ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.

ಇಂದಿರಾ ಕ್ಯಾಂಟೀನ್‌ಗೆ ರಾಜ್ಯ ಸರಕಾರ ಅನುದಾನ ನೀಡದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸ್ವಾಮೀಜಿ, ಬಡವರು ಹಳ್ಳಿಯಿಂದ ನಗರಕ್ಕೆ ಹೋದ ಸಂದರ್ಭದಲ್ಲಿ 70-80 ರೂಪಾಯಿ ಕೊಟ್ಟು ಊಟ ಮಾಡಲು ಸಾಧ್ಯವಾಗಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ ಇಂದಿರಾ ಕ್ಯಾಂಟೀನ್ ಮೂಲಕ ಬಡವರ ಹೊಟ್ಟೆ ತುಂಬಿಸುವ ಕೆಲಸ ಮಾಡಿದ್ದಾರೆ. ಈ ಯೋಜನೆಯನ್ನು ಮುನ್ನಡೆಸಿಕೊಂಡು ಹೋದರೆ ಉತ್ತಮ ಎಂದು ಸಲಹೆ ನೀಡಿದರು.

ಸಿದ್ದರಾಮಯ್ಯರ ಅವಧಿಯಲ್ಲಿ ರಚನೆಯಾಗಿದ್ದ ಸಚಿವ ಸಂಪುಟ ಅನುಭವ ಮಂಟಪದಂತಿತ್ತು. ಆದರೆ, ಸದ್ಯ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಬಿಜೆಪಿ ಸರಕಾರದ ಸಚಿವ ಸಂಪುಟವನ್ನು ಯಾವುದಕ್ಕೂ ಹೋಲಿಸಲು ಇಷ್ಟಪಡಲ್ಲ ಎಂದಿದ್ದಾರೆ.

ರಾಜ್ಯದ ಜನತೆ ಬಿ ಎಸ್ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಎಂದು ಒಪ್ಪಿಕೊಂಡಿದ್ದಾರೆ. ಮತ್ತೊಮ್ಮೆ ಸಿದ್ದರಾಮಯ್ಯ ಅವರೇ ಸಿಎಂ ಆದರೆ ಬಹಳ ಖಷಿ ಎಂದು ಸ್ವಾಮೀಜಿ ಹೇಳಿದರು.

ಪ್ರವಾಹ ಸಂತ್ರಸ್ತರ ಸಮಸ್ಯೆಗೆ ಸರಕಾರ ಸ್ಪಂದಿಸದಿದ್ದರೆ, ಹಿಂದುಳಿದ, ದಲಿತ ಮಠಾಧೀಶರು ವಿಧಾನಸೌಧದ ಎದುರು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು. ಅಷ್ಟೆ ಅಲ್ಲದೆ ಈ ಕೂಡಲೇ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಅನುದಾನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.

ದೇವೇಗೌಡರಿಗೆ ಬಹುಶಃ ಅರೇ ವಯಸ್ಸು

ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಸರಕಾರ ಬೀಳಲು ಸಿದ್ದರಾಮಯ್ಯರೇ ನೇರ ಕಾರಣ ಎಂಬ ದೇವೇಗೌಡರ ಹೇಳಿಕೆಗೆ ಕನಕದಾಸರ ವಚನದ ಮೂಲಕ ಉತ್ತರ ಕೊಟ್ಟ ನಿರಂಜನಾನಂದಪುರಿ ಸ್ವಾಮೀಜಿ, 'ಮಕ್ಕಳಿಲ್ಲದೆ ಮೋಕ್ಷವಿಲ್ಲ. ಮಕ್ಕಳಂತಾಗದೆಯೂ ಮೋಕ್ಷವಿಲ್ಲ' ಎಂಬಂತೆ ದೇವೇಗೌಡರಿಗೆ ಬಹುಶಃ ಅರೇ ವಯಸ್ಸು 80. ಅವರು ಮಕ್ಕಳಂತೆ ಆಡುತ್ತಿದ್ದಾರೆ. ಮಾಜಿ ಪ್ರಧಾನಿಗಳಾದ ಅವರ ಬಗ್ಗೆ ಗೌರವವಿದೆ. ವಯಸ್ಸಾದಂತೆ ಮಕ್ಕಳಂತಾಗಿದ್ದಾರೆ. ಮಕ್ಕಳು ಹೇಗೆ ಆಡುತ್ತಾರೆಯೋ ಹಾಗೆ ದೇವೇಗೌಡರು ಆಗಿದ್ದಾರೆ ಎಂದು ಟಾಂಗ್ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ