ಆ್ಯಪ್ನಗರ

ಒಬಿಸಿ ಸಮಾವೇಶ ಯಶಸ್ವಿಗೊಳಿಸಿ

ಬಾಗಲಕೋಟ: 'ನಗರದಲ್ಲಿ ಫೆ.25 ರಂದು ಆಯೋಜಿಸಲಾಗಿರುವ ಜಿಲ್ಲಾಮಟ್ಟದ ಒಬಿಸಿ ಸಮಾವೇಶವನ್ನು ಯಶಸ್ವಿಗೊಳಿಸಬೇಕು' ಎಂದು ಮಾಜಿ ಡಿಸಿಎಂ, ಬಿಜೆಪಿ ಜಿಲ್ಲಾ ಉಸ್ತುವಾರಿ ಕೆ.ಎಸ್‌.ಈಶ್ವರಪ್ಪ ಹೇಳಿದರು.

Vijaya Karnataka 20 Feb 2019, 5:00 am
ಬಾಗಲಕೋಟ: 'ನಗರದಲ್ಲಿ ಫೆ.25 ರಂದು ಆಯೋಜಿಸಲಾಗಿರುವ ಜಿಲ್ಲಾಮಟ್ಟದ ಒಬಿಸಿ ಸಮಾವೇಶವನ್ನು ಯಶಸ್ವಿಗೊಳಿಸಬೇಕು' ಎಂದು ಮಾಜಿ ಡಿಸಿಎಂ, ಬಿಜೆಪಿ ಜಿಲ್ಲಾ ಉಸ್ತುವಾರಿ ಕೆ.ಎಸ್‌.ಈಶ್ವರಪ್ಪ ಹೇಳಿದರು.
Vijaya Karnataka Web obc convention succeeded ishwarappa request
ಒಬಿಸಿ ಸಮಾವೇಶ ಯಶಸ್ವಿಗೊಳಿಸಿ


ನಗರದ ಬವಿವ ಸಂಘದ ಮಿನಿ ಸಭಾ ಭವನದಲ್ಲಿ ಮಂಗಳವಾರ ಆಯೋಜಿಸಿಗಿದ್ದ ಒಬಿಸಿ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. 'ಬಿಜೆಪಿ ಸರಕಾರದ ಅವಧಿಯಲ್ಲಿ ಒಬಿಸಿ ಸಮುದಾಯದ ಮಠ, ಮಾನ್ಯಗಳಿಗೆ ಸಾಕಷ್ಟು ಅನುದಾನ ನೀಡಲಾಗಿದೆ. ನಾನಾ ಸಮಾಜಗಳ 39 ಸ್ವಾಮೀಜಿಗಳ ಸಲಹೆಯಂತೆ ಹಣ ಬಿಡುಗಡೆಗೊಳಿಸಲಾಗಿದೆ. ಒಬಿಸಿ ಸಮುದಾಯಗಳ ನೆರವಿನಿಂದ ರಾಜ್ಯದಲ್ಲಿ ಬಿಜೆಪಿ ಅತ್ಯಧಿಕ ಸಂಖ್ಯೆಯಲ್ಲಿ ಸ್ಥಾನ ಪಡೆಯಲು ಸಾಧ್ಯವಾಯಿತು. ಜನರನ್ನು ಹೆಚ್ಚಿನ ಸಂಖ್ಯೆಯಲ್ಲಿ ಸೇರಿಸುವ ಮೂಲಕ ಸಮಾವೇಶವನ್ನು ಸಾರ್ಥಕಗೊಳಿಸಬೇಕು' ಎಂದು ತಿಳಿಸಿದರು.

'ಹಿಂದುಳಿದವರು ಹಾಗೂ ದಲಿತರಿಗೆ ಪ್ರಾಮುಖ್ಯತೆ ನೀಡಿರುವುದು ಬಿಜೆಪಿ ಮಾತ್ರ. ತಾವೇ ದೇವರಾಜ್‌ ಅರಸು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಅಧಿಕಾರ ಪಡೆಯಲಿದ್ದು, ಹಿಂದುಳಿದ ವರ್ಗದವರು ಹಾಗೂ ದಲಿತರಿಗಾಗಿ ಯೋಜನೆಗಳನ್ನು ಹಮ್ಮಿಕೊಳ್ಳಲಾಗುತ್ತದೆ' ಎಂದರು. ಶಾಸಕ ವೀರಣ್ಣ ಚರಂತಿಮಠ 'ನವನಗರದ ಕ್ರೀಡಾಂಗಣದಲ್ಲಿ ಫೆ.25ರಂದು ಜಿಲ್ಲಾಮಟ್ಟದ ಸಮಾವೇಶ ಆಯೋಜಿಸಲಾಗಿದ್ದು, ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವಂತೆ ಸಂಘಟನೆ ಕೈಗೊಳ್ಳಬೇಕು' ಎಂದು ಸಲಹೆ ನೀಡಿದರು.

ವಿಧಾನ ಪರಿಷತ್‌ ಮಾಜಿ ಸದಸ್ಯ ನಾರಾಯಣಸಾ ಭಾಂಡಗೆ, ಬಿಟಿಡಿಎ ಮಾಜಿ ಅಧ್ಯಕ್ಷ ಜಿ.ಎನ್‌.ಪಾಟೀಲ, ನಗರಸಭೆ ಮಾಜಿ ಸದಸ್ಯ ಯಲ್ಲಪ್ಪ ಬೆಂಡಿಗೇರಿ, ನಗರ ಘಟಕದ ಅಧ್ಯಕ್ಷ ರಾಜು ನಾಯ್ಕರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ರೇವಣಕರ, ಸುರೇಶ ಮಜ್ಜಗಿ ಹಾಗೂ ಪದಾಧಿಕಾರಿಗಳು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ