ಆ್ಯಪ್ನಗರ

ಡಿಸಿಎಂ ಹುದ್ದೆ ಬಗ್ಗೆ ಮಾತನಾಡಲ್ಲ, ಮಾತನಾಡಲೂಬಾರದು: ಶ್ರೀರಾಮುಲು

ಚುನಾವಣೆಯಲ್ಲಿ ಏನೇ ಆಶ್ವಾಸನೆ ಕೊಟ್ಟಿದ್ರು. ಅದೀಗ ಬೇಡದ ವಿಷಯ. ಆಶ್ವಾಸನೆಯನ್ನು ನಾನು ಈ ಸಂದರ್ಭದಲ್ಲಿ ಪರಿಗಣನೆ ಮಾಡೋಲ್ಲ. ಈ ವಿಚಾರದಲ್ಲಿ ಪಕ್ಷದ ತೀರ್ಮಾನವೇ ಅಂತಿಮ ಎಂದು ಸಚಿವ ಶ್ರೀರಾಮುಲು ಹೇಳಿದರು.

Vijaya Karnataka Web 19 Feb 2020, 8:31 pm
ಬಾಗಲಕೋಟೆ: ಉಪ ಮುಖ್ಯಮಂತ್ರಿ ಸ್ಥಾನ ಸಿಗದ ವಿಚಾರ ಬಗ್ಗೆ ನಾನು ಮಾತನಾಡಲ್ಲ. ನಾನು ಮಾತನಾಡುವ ಪರಿಸ್ಥಿತಿಯಲ್ಲಿ ಇಲ್ಲ. ಮಾತನಾಡಲೂಬಾರದು. ಯಾಕಂದ್ರೆ ಪಕ್ಷ ತಾಯಿ ಸ್ಥಾನದಲ್ಲಿದೆ. ಪಕ್ಷ ಏನು ನಿರ್ಧಾರ ತೆಗೆದುಕೊಳ್ಳುತ್ತೆ. ಅದಕ್ಕೆ ನಾನು ಬದ್ಧ ಎಂದು ಆರೋಗ್ಯ ಸಚಿವ ಬಿ ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.
Vijaya Karnataka Web ಶ್ರೀರಾಮುಲು
ಶ್ರೀರಾಮುಲು


ಬಾಗಲಕೋಟೆಯಲ್ಲಿ ಆರೋಗ್ಯ ಸಚಿವ ಬಿ ಶ್ರೀರಾಮುಲು ಸುದ್ದಿಗಾರರೊಂದಿಗೆ ಮಾತನಾಡಿದರು.

ಚುನಾವಣೆಯಲ್ಲಿ ಏನೇ ಆಶ್ವಾಸನೆ ಕೊಟ್ಟಿದ್ರು. ಅದೀಗ ಬೇಡದ ವಿಷಯ. ಆಶ್ವಾಸನೆಯನ್ನು ನಾನು ಈ ಸಂದರ್ಭದಲ್ಲಿ ಪರಿಗಣನೆ ಮಾಡೋಲ್ಲ. ಈ ವಿಚಾರದಲ್ಲಿ ಪಕ್ಷದ ತೀರ್ಮಾನವೇ ಅಂತಿಮ ಎಂದು ಹೇಳಿದರು.

ಬಹಳಷ್ಟು ಜನ್ರು ಮಂತ್ರಿ, ಡಿಸಿಎಂ ಆಗಬೇಕು ಅಂದುಕೊಂಡಿದ್ದಾರೆ. ಸ್ಥಾನಮಾನ ಕೊಡುವ ಕೆಲ್ಸ ಪಕ್ಷ, ಹೈಕಮಾಂಡ್ ಮಾಡುತ್ತೆ. ಭವಿಷ್ಯದಲ್ಲಿ ಡಿಸಿಎಂ, ಸಿಎಂ ಸ್ಥಾನ ವಿಚಾರ ಬಂದರೆ ನೋಡೋಣ. ಪಕ್ಷ ತೀರ್ಮಾನ ಕೈಗೊಳ್ಳುತ್ತೆ ಎಂದರು.

ಸಿಎಂ ಪುತ್ರ ವಿಜಯೇಂದ್ರ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿಲ್ಲ. ಜಗದೀಶ್ ಶೆಟ್ಟರ್ ಮನೆಯಲ್ಲಿ ಉತ್ತರ ಕರ್ನಾಟಕ ಶಾಸಕರು ಸಭೆ ಸೇರಿದ್ದರು. ಕೆಲವೊಂದು ಅಭಿವೃದ್ಧಿ ವಿಚಾರವಾಗಿ ಚರ್ಚಿಸಿದ್ದಾರೆ. ಅಸಮಾಧಾನದಿಂದ ಸಭೆ ಸೇರಿಲ್ಲ. ನಮ್ಮಲ್ಲಿ ಯಾರಿಗೂ ಅಸಮಾಧಾನ ಇಲ್ಲ ಎಂದು ಸಚಿವ ಶ್ರೀರಾಮುಲು ಸ್ಪಷ್ಟಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ