ಆ್ಯಪ್ನಗರ

ಕಳಪೆ ಕಾಮಗಾರಿ ಆರೋಪ: ಅರ್ಧಕ್ಕೆ ನಿಂತ ಸಿಸಿ ರಸ್ತೆ

ಅಮೀನಗಡ : ಪಟ್ಟಣದಲ್ಲಿ ನಡೆಯುತ್ತಿರುವ ನಗರೋತ್ಥಾನ ಯೋಜನೆಯಡಿಯ ಕಾಮಗಾರಿ ಕಳಪೆಯಾಗಿದೆ ಎಂದು ಆರೋಪಿಸಿದ ಸಾರ್ವಜನಿಕರು ಕಾಮಗಾರಿ ಸ್ಥಗಿತಗೊಳಿಸುವಂತೆ ಸಂಬಂಧಿಸಿದವರಿಗೆ ಸೂಚಿಸಿದ್ದಾರೆ.

ವಿಕ ಸುದ್ದಿಲೋಕ 2 Apr 2018, 5:00 am
ಅಮೀನಗಡ : ಪಟ್ಟಣದಲ್ಲಿ ನಡೆಯುತ್ತಿರುವ ನಗರೋತ್ಥಾನ ಯೋಜನೆಯಡಿಯ ಕಾಮಗಾರಿ ಕಳಪೆಯಾಗಿದೆ ಎಂದು ಆರೋಪಿಸಿದ ಸಾರ್ವಜನಿಕರು ಕಾಮಗಾರಿ ಸ್ಥಗಿತಗೊಳಿಸುವಂತೆ ಸಂಬಂಧಿಸಿದವರಿಗೆ ಸೂಚಿಸಿದ್ದಾರೆ.
Vijaya Karnataka Web poor allegation
ಕಳಪೆ ಕಾಮಗಾರಿ ಆರೋಪ: ಅರ್ಧಕ್ಕೆ ನಿಂತ ಸಿಸಿ ರಸ್ತೆ


ಪಟ್ಟಣದ ವಾರ್ಡ್‌ ನಂ.8ರಲ್ಲಿ ಭಾನುವಾರ ಸಿಸಿ ರಸ್ತೆ ಕಾಮಗಾರಿ ನಡೆದಿತ್ತು. ಆದರೆ ಅದು ಕಳಪೆ ಆಗಿದ್ದು ಇರುವ ಸಿಸಿ ರಸ್ತೆ ಮೇಲೆ ಮತ್ತೆ ಕಾಂಕ್ರಿಟ್‌ ಹಾಕುತ್ತಿರುವುದನ್ನು ಗಮನಿಸಿದ ಅಲ್ಲಿನ ಸಾರ್ವಜನಿಕರು ಅಲ್ಲಿದ್ದ ಗುತ್ತಿಗೆದಾರರಿಗೆ ಕಾಮಗಾರಿಯ ಎಸ್ಟಿಮೇಟ್‌ ಪ್ರತಿ ಕೇಳಿದ್ದಾರೆ. ಈ ಸಂದರ್ಭದಲ್ಲಿ ಅಲ್ಲಿಯೇ ಒಂದು ಪುಸ್ತಕದಲ್ಲಿ ಕಾಮಗಾರಿ ಕುರಿತು ಬರೆದ ಮಾಹಿತಿ ನೋಡಿ ಪುಸ್ತಕದಲ್ಲಿನ ವಿವರಕ್ಕೂ ಸದ್ಯ ನಡೆಯುತ್ತಿರುವ ಕೆಲಸಕ್ಕೂ ವ್ಯತ್ಯಾಸವಿದೆ. ಕಾಮಗಾರಿ ನಡೆಯುವಾಗ ಸಂಬಂಧಿಸಿದ ಅಭಿಯಂತರರು ಸ್ಥಳದಲ್ಲಿರಬೇಕು. ಅವರು ಬರುವವರೆಗೆ ಕಾಮಗಾರಿ ನಿಲ್ಲಿಸುವಂತೆ ಸೂಚಿಸಿದ್ದಾರೆ.

ಈ ಸಂದರ್ಭದಲ್ಲಿ ಗುತ್ತಿಗೆದಾರರು ಹಾಗೂ ಸಾರ್ವಜನಿಕರ ಮದ್ಯೆ ಕೆಲ ಕಾಲ ವಾಗ್ವಾದ ನಡೆದಿದೆ. ನಮಗೆ ಅಭಿಯಂತರರು ಕೆಲಸ ಮಾಡಲು ಸೂಚಿಸಿದ್ದಾರೆ. ಮಾಡಿಯೇ ತೀರುತ್ತೇವೆಂದಿದ್ದಾರೆ. ಭಾನುವಾರವಾಗಿದ್ದರಿಂದ ಅಭಿಯಂತರರನ್ನು ಸಂಪರ್ಕಿಸಲು ಪ್ರಯತ್ನಿಸಿದರೆ ಸಂಪರ್ಕಕ್ಕೆ ಬರುತ್ತಿಲ್ಲ. ಕೂಡಲೆ ಕಾಮಗಾರಿ ನಿಲ್ಲಿಸಿ. ಸೂಕ್ತ ವ್ಯವಸ್ಥೆ ನಂತರ ಮುಂದುವರೆಸಿ ಎಂದು ಆಗ್ರಹಿಸಿದರು. ಸಾರ್ವಜನಿಕರ ವಿರೋಧದಿಂದಾಗಿ ಸದ್ಯ ಕಾಮಗಾರಿ ಸ್ಥಗಿತಗೊಂಡಿದೆ.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ