ಬಾಗಲಕೋಟ : 'ಪರಿಶಿಷ್ಟ ವರ್ಗದವರಿಗೆ ಜನಸಂಖ್ಯೆಗೆ ಅನುಗುಣವಾಗಿ ಸರಕಾರಿ ಹುದ್ದೆಗಳ ನೇಮಕಾತಿ ಹಾಗೂ ಶೈಕ್ಷಣಿಕ ಸಂಸ್ಥೆಗಳಲ್ಲಿ ಪ್ರವೇಶಕ್ಕೆ ಮೀಸಲಾತಿ ಪ್ರಮಾಣ ಹೆಚ್ಚಿಸಬೇಕು' ಎಂದು ಜಿಲ್ಲಾ ವಾಲ್ಮೀಕಿ ಮಹಾಸಭಾದ ಅಧ್ಯಕ್ಷ ರಾಜು ನಾಯ್ಕರ ಒತ್ತಾಯಿಸಿದರು.
ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು '2011ರ ಜನಗಣತಿ ಪ್ರಕಾರ ರಾಜ್ಯದಲ್ಲಿ ಪರಿಶಿಷ್ಟ ವರ್ಗದವರ ಜನಸಂಖ್ಯೆ 42 ಲಕ್ಷದಷ್ಟಿದೆ. ಜನಸಂಖ್ಯೆಯ ಪ್ರಮಾಣ ಶೇ.7.5ಕ್ಕಿಂತ ಹೆಚ್ಚಾಗಿದ್ದು, ಸರಕಾರಿ ನೇಮಕಾತಿ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಶೇ.3 ರಷ್ಟು ಮೀಸಲಾತಿ ಮಾತ್ರ ನೀಡಲಾಗುತ್ತಿದೆ. ಈ ಮೀಸಲಾತಿ ಪ್ರಮಾಣವನ್ನು ಶೇ.7.5 ರಷ್ಟು ಹೆಚ್ಚಿಸಬೇಕೆಂದು ರಾಜ್ಯ ಸರಕಾರಕ್ಕೆ ಒತ್ತಾಯಿಸಿ ಹೋರಾಟ ಆರಂಭಿಸಲಾಗುತ್ತಿದೆ. ಜೂ.9 ರಂದು ಚಿತ್ರದುರ್ಗ ಬಳಿಯ ರಾಜನಹಳ್ಳಿ ಗುರುಪೀಠದಿಂದ ಪಾದಯಾತ್ರೆ ಮುಖಾಂತರ ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗಿದೆ. ಈ ಪಾದಯಾತ್ರೆಯಲ್ಲಿ 17 ಶಾಸಕರು, ಇಬ್ಬರು ಸಂಸದರು ಪಾಲ್ಗೊಳ್ಳಲಿದ್ದಾರೆ. ಈ ಪ್ರತಿಭಟನೆಗೆ ಪೂರ್ವಭಾವಿಯಾಗಿ ಬಾಗಲಕೋಟದಲ್ಲಿ ಜೂ.6 ರಂದು ಬೆಳಗ್ಗೆ 11ಕ್ಕೆ ಜಿಲ್ಲಾಧಿಕಾರಿ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುತ್ತದೆ' ಎಂದು ತಿಳಿಸಿದರು.
ವಾಲ್ಮೀಕಿ ಸಮಾಜದ ಮುಖಂಡ ಶಂಭುಗೌಡ ಪಾಟೀಲ 'ಸರಕಾರ ಕುರುಬ ಸಮುದಾಯವನ್ನು ಎಸ್ಸಿ ಮೀಸಲಾತಿಗೆ ಸೇರಿಸಲು ಆಯೋಗ ರಚಿಸಿದೆ. ಸರಕಾರವೇ ನಡೆಸಿರುವ ಜಾತಿಗಣತಿ ವರದಿ ಬಹಿರಂಗಗೊಳಿಸಿದರೆ ಪರಿಶಿಷ್ಟ ವರ್ಗದವರ ಜನಸಂಖ್ಯೆಯ ಮಾಹಿತಿ ಬಹಿರಂಗಗೊಳ್ಳಲಿದೆ. ಕೆಲವು ಮುಂದುವರಿದ ಸಮಾಜದವರು ಪರಿಶಿಷ್ಟ ವರ್ಗದ ಪಟ್ಟಿಯಲ್ಲಿನ ಹೆಸರು ಬಳಸಿಕೊಂಡು ತಹಸೀಲ್ದಾರ್ಗಳಿಂದ ಜಾತಿ ಪ್ರಮಾಣ ಪತ್ರ ಪಡೆದು ಸೌಲಭ್ಯ ಪಡೆಯುತ್ತಿದ್ದಾರೆ. ಅರ್ಹರಲ್ಲದವರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವ ಪ್ರವೃತ್ತಿಗೆ ಸರಕಾರ ತಡೆಯೊಡ್ಡಬೇಕು' ಎಂದು ಒತ್ತಾಯಿಸಿದರು.
'ರಾಜ್ಯದಲ್ಲಿ 50 ಬುಡಕಟ್ಟು ಸಮಾಜಗಳನ್ನು ಪರಿರಿಶಿಷ್ಟ ವರ್ಗ ಎಂದು ಗುರುತಿಸಲಾಗಿದೆ. ಈ ಸಮಾಜಗಳಿಗೆ ಮೂಲ ಸೌಕರ್ಯ ಸೇರಿದಂತೆ ಸೌಲಭ್ಯ ಒದಗಿಸಲು ಪ್ರತ್ಯೇಕವಾಗಿ ಪರಿಶಿಷ್ಟ ವರ್ಗದ ಸಚಿವಾಲಯ ಸ್ಥಾಪಿಸಬೇಕು. ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜೂ.24 ರಂದು ಬೆಂಗಳೂರಿನ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುತ್ತದೆ. ಸಾವಿರಾರು ಜನರು ಪಾಲ್ಗೊಳ್ಳಲಿದ್ದಾರೆ' ಎಂದರು. ಸಂಘದ ಪ್ರಧಾನ ಕಾರ್ಯದರ್ಶಿ ದ್ಯಾಮಣ್ಣ ಗಾಳಿ ಹಾಗೂ ಇತರರು ಇದ್ದರು.
ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು '2011ರ ಜನಗಣತಿ ಪ್ರಕಾರ ರಾಜ್ಯದಲ್ಲಿ ಪರಿಶಿಷ್ಟ ವರ್ಗದವರ ಜನಸಂಖ್ಯೆ 42 ಲಕ್ಷದಷ್ಟಿದೆ. ಜನಸಂಖ್ಯೆಯ ಪ್ರಮಾಣ ಶೇ.7.5ಕ್ಕಿಂತ ಹೆಚ್ಚಾಗಿದ್ದು, ಸರಕಾರಿ ನೇಮಕಾತಿ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಶೇ.3 ರಷ್ಟು ಮೀಸಲಾತಿ ಮಾತ್ರ ನೀಡಲಾಗುತ್ತಿದೆ. ಈ ಮೀಸಲಾತಿ ಪ್ರಮಾಣವನ್ನು ಶೇ.7.5 ರಷ್ಟು ಹೆಚ್ಚಿಸಬೇಕೆಂದು ರಾಜ್ಯ ಸರಕಾರಕ್ಕೆ ಒತ್ತಾಯಿಸಿ ಹೋರಾಟ ಆರಂಭಿಸಲಾಗುತ್ತಿದೆ. ಜೂ.9 ರಂದು ಚಿತ್ರದುರ್ಗ ಬಳಿಯ ರಾಜನಹಳ್ಳಿ ಗುರುಪೀಠದಿಂದ ಪಾದಯಾತ್ರೆ ಮುಖಾಂತರ ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗಿದೆ. ಈ ಪಾದಯಾತ್ರೆಯಲ್ಲಿ 17 ಶಾಸಕರು, ಇಬ್ಬರು ಸಂಸದರು ಪಾಲ್ಗೊಳ್ಳಲಿದ್ದಾರೆ. ಈ ಪ್ರತಿಭಟನೆಗೆ ಪೂರ್ವಭಾವಿಯಾಗಿ ಬಾಗಲಕೋಟದಲ್ಲಿ ಜೂ.6 ರಂದು ಬೆಳಗ್ಗೆ 11ಕ್ಕೆ ಜಿಲ್ಲಾಧಿಕಾರಿ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುತ್ತದೆ' ಎಂದು ತಿಳಿಸಿದರು.
ವಾಲ್ಮೀಕಿ ಸಮಾಜದ ಮುಖಂಡ ಶಂಭುಗೌಡ ಪಾಟೀಲ 'ಸರಕಾರ ಕುರುಬ ಸಮುದಾಯವನ್ನು ಎಸ್ಸಿ ಮೀಸಲಾತಿಗೆ ಸೇರಿಸಲು ಆಯೋಗ ರಚಿಸಿದೆ. ಸರಕಾರವೇ ನಡೆಸಿರುವ ಜಾತಿಗಣತಿ ವರದಿ ಬಹಿರಂಗಗೊಳಿಸಿದರೆ ಪರಿಶಿಷ್ಟ ವರ್ಗದವರ ಜನಸಂಖ್ಯೆಯ ಮಾಹಿತಿ ಬಹಿರಂಗಗೊಳ್ಳಲಿದೆ. ಕೆಲವು ಮುಂದುವರಿದ ಸಮಾಜದವರು ಪರಿಶಿಷ್ಟ ವರ್ಗದ ಪಟ್ಟಿಯಲ್ಲಿನ ಹೆಸರು ಬಳಸಿಕೊಂಡು ತಹಸೀಲ್ದಾರ್ಗಳಿಂದ ಜಾತಿ ಪ್ರಮಾಣ ಪತ್ರ ಪಡೆದು ಸೌಲಭ್ಯ ಪಡೆಯುತ್ತಿದ್ದಾರೆ. ಅರ್ಹರಲ್ಲದವರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವ ಪ್ರವೃತ್ತಿಗೆ ಸರಕಾರ ತಡೆಯೊಡ್ಡಬೇಕು' ಎಂದು ಒತ್ತಾಯಿಸಿದರು.
'ರಾಜ್ಯದಲ್ಲಿ 50 ಬುಡಕಟ್ಟು ಸಮಾಜಗಳನ್ನು ಪರಿರಿಶಿಷ್ಟ ವರ್ಗ ಎಂದು ಗುರುತಿಸಲಾಗಿದೆ. ಈ ಸಮಾಜಗಳಿಗೆ ಮೂಲ ಸೌಕರ್ಯ ಸೇರಿದಂತೆ ಸೌಲಭ್ಯ ಒದಗಿಸಲು ಪ್ರತ್ಯೇಕವಾಗಿ ಪರಿಶಿಷ್ಟ ವರ್ಗದ ಸಚಿವಾಲಯ ಸ್ಥಾಪಿಸಬೇಕು. ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜೂ.24 ರಂದು ಬೆಂಗಳೂರಿನ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುತ್ತದೆ. ಸಾವಿರಾರು ಜನರು ಪಾಲ್ಗೊಳ್ಳಲಿದ್ದಾರೆ' ಎಂದರು. ಸಂಘದ ಪ್ರಧಾನ ಕಾರ್ಯದರ್ಶಿ ದ್ಯಾಮಣ್ಣ ಗಾಳಿ ಹಾಗೂ ಇತರರು ಇದ್ದರು.