ಆ್ಯಪ್ನಗರ

ಬಾಗಲಕೋಟೆ: ಹೊಸ ವರ್ಷದ ತಡರಾತ್ರಿ ಸ್ನೇಹಿತರ ಪಾರ್ಟಿ, ಓರ್ವನ ಕೊಲೆ

ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಮಾತಿನ ಚಕಮಕಿ ನಡೆದಿದೆ. ಈ ಸಂದರ್ಭದಲ್ಲಿ ಸ್ನೇಹಿತರು ಸ್ಪಿಂಕ್ಲರ್‌ ರಾಡ್‌ನಿಂದ ಹೊಡೆದು ಹೊಳೆಯಪ್ಪ ಗಾಣಿಗೇರ (43) ಎಂಬುವರನ್ನು ಕೊಲೆ ಮಾಡಿದ್ದಾರೆ.

Vijaya Karnataka Web 1 Jan 2021, 8:01 pm
ಬಾಗಲಕೋಟೆ: ಹೊಸ ವರ್ಷದ ಗುಂಗಿನಲ್ಲಿ ಸ್ನೇಹಿತರ ನಡುವೆ ನಡೆಯುತ್ತಿದ್ದ ಪಾರ್ಟಿ ಕೊಲೆಯಲ್ಲಿ ಅಂತ್ಯಗೊಂಡಿದೆ. ಹೊಸ ವರ್ಷದ ಸಂಭ್ರಮಕ್ಕೆ ಸೂತಕ ಆವರಿಸಿದೆ.
Vijaya Karnataka Web ಸಂಗ್ರಹ ಚಿತ್ರ
ಸಂಗ್ರಹ ಚಿತ್ರ


ಬಾಗಲಕೋಟೆ ಜಿಲ್ಲೆಯ ಹಂಗರಗಿ ಗ್ರಾಮದ ತೋಟದಲ್ಲಿ ಮೂವರು ಸ್ನೇಹಿತರು ಗುಂಡಿನ ಪಾರ್ಟಿ ಮಾಡಿಕೊಳ್ಳುತ್ತಿದ್ದರು.

ಈ ಸಂದರ್ಭದಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಮಾತಿನ ಚಕಮಕಿ ನಡೆದಿದೆ. ಈ ಸಂದರ್ಭದಲ್ಲಿ ಸ್ನೇಹಿತರು ಸ್ಪಿಂಕ್ಲರ್‌ ರಾಡ್‌ನಿಂದ ಹೊಡೆದು ಹೊಳೆಯಪ್ಪ ಗಾಣಿಗೇರ (43) ಎಂಬುವರನ್ನು ಕೊಲೆ ಮಾಡಿದ್ದಾರೆ.

ಬೆಳಗಿನ ಜಾವ ತೋಟದ ಮನೆಗೆ ಕೆಲವರು ಬಂದು ನೋಡಿದಾಗ ಹೊಳೆಯಪ್ಪ ಗಾಣಿಗೇರ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂತು.

ವಿಷಯ ತಿಳಿಯುತ್ತಿದ್ದಂತೆ ಕುಟುಂಬ ಸದಸ್ಯರು ಆಕ್ರಂದನ ಮುಗಿಲು ಮುಟ್ಟಿದೆ.

ಸ್ಥಳಕ್ಕೆ ಕೆರೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಪಿಗಳ ಪತ್ತೆಗಾಗಿ ಪೊಲೀಸರು ಜಾಲ ಬೀಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ