ಆ್ಯಪ್ನಗರ

ಲಿಂಗಾಯತ ಪ್ರತ್ಯೇಕ ಧರ್ಮ ಕುರಿತು ಸುಪ್ರೀಂಗೆ ಅರ್ಜಿ: ಮೃತ್ಯುಂಜಯ ಸ್ವಾಮೀಜಿ

ಸದ್ಯ ಕೇಂದ್ರ ಸರಕಾರ ಲಿಂಗಾಯತ ಪ್ರತ್ಯೇಕ ಧರ್ಮದ ವಿಷಯವನ್ನು ತಿರಸ್ಕರಿಸಿದೆ. ಕೇಂದ್ರ ಸರಕಾರ ಇಂತಹ ಹಲವು ವಿಷಯಗಳನ್ನು ಹಲವು ಸಂದರ್ಭದಲ್ಲಿ ತಿರಸ್ಕರಿಸಿದ ಉದಾಹರಣೆಗಳಿವೆ

Vijaya Karnataka Web 8 Feb 2019, 6:45 pm
ಬಾಗಲಕೋಟ: ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಒತ್ತಾಯಿಸಿ ಲೋಕಸಭೆ ಚುನಾವಣೆ ನಂತರ ಸುಪ್ರೀಂ ಕೋರ್ಟ್ ಮೊರೆ ಹೋಗಲು ನಿರ್ಧರಿಸಲಾಗಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.
Vijaya Karnataka Web ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ
ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ


ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಅವರು ಲಿಂಗಾಯತ ಪ್ರತ್ಯೇಕ ಧರ್ಮವಾಗಿಸಬೇಕು ಎಂಬ ಬೇಡಿಕೆಗೆ ರಾಜ್ಯ ಸರಕಾರ ಒಪ್ಪಿಗೆ ನೀಡಿ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಇದು ಹೋರಾಟದ ಮೊದಲ ಜಯವಾಗಿದೆ ಎಂದರು.

ಸದ್ಯ ಕೇಂದ್ರ ಸರಕಾರ ಲಿಂಗಾಯತ ಪ್ರತ್ಯೇಕ ಧರ್ಮದ ವಿಷಯವನ್ನು ತಿರಸ್ಕರಿಸಿದೆ. ಕೇಂದ್ರ ಸರಕಾರ ಇಂತಹ ಹಲವು ವಿಷಯಗಳನ್ನು ಹಲವು ಸಂದರ್ಭದಲ್ಲಿ ತಿರಸ್ಕರಿಸಿದ ಉದಾಹರಣೆಗಳಿವೆ ಎಂದರು.

ಸದ್ಯ ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು ಚುನಾವಣೆ ಬಳಿಕ ಲಿಂಗಾಯತ ಪ್ರತ್ಯೇಕ ಧರ್ಮಕ್ಕಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗಲಾಗುವುದು. ರಾಜ್ಯ ಸರಕಾರದ ಪ್ರಸ್ತಾಪವನ್ನು ಕೇಂದ್ರ ತಿರಸ್ಕರಿಸಿದ ನಂತರ ಜಾಗತಿಕ ಲಿಂಗಾಯತ ಮಹಾಸಭೆ ನಡೆಸಿದ ಸಭೆಯಲ್ಲಿ ಪ್ರತ್ಯೇಕ ಧರ್ಮಕ್ಕಾಗಿ ಸುಪ್ರೀಂಕೋರ್ಟ್ ಮೊರೆ ಹೋಗಲು ನಿರ್ಧರಿಸಲಾಗಿದೆ. ಈ ನಿಟ್ಟಿನಲ್ಲಿ ಎಲ್ಲ ದಾಖಲೆ ಸಂಗ್ರಹಿಸಲಾಗಿದ್ದು ಲೋಕಸಭೆ ಚುನಾವಣೆ ನಂತರ ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಮತ್ತೆ ಚಾಲನೆ ದೊರೆಯಲಿದೆ ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ