ಆ್ಯಪ್ನಗರ

ಮಾಜಿ ಸಿಎಂ ಸಿದ್ದರಾಮಯ್ಯರಿಂದ ರೋಗದಲ್ಲೂ ರಾಜಕಾರಣ ಪ್ರಯತ್ನ: ಡಿಸಿಎಂ ಕಾರಜೋಳ ಟಾಂಗ್‌

ಕೊರೊನಾ ವಿಚಾರವಾಗಿ ಸರಕಾರದ ವಿರುದ್ಧ ಟೀಕೆ ಮಾಡುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯಗೆ ವಿರುದ್ಧ ಡಿಸಿಎಂ ಗೋವಿಂದ ಕಾರಜೋಳ ಟಾಂಗ್‌ ನೀಡಿದ್ದು, ಸಿದ್ದರಾಮಯ್ಯ ರೋಗದಲ್ಲೂ ರಾಜಕಾರಣ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.‌

Vijaya Karnataka Web 29 Jun 2020, 8:38 pm
ಬಾಗಲಕೋಟೆ: ಕೊರೊನಾ ತಡೆಯುವಲ್ಲಿ ರಾಜ್ಯ ಸರಕಾರ ವಿಫಲವಾಗಿದೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿರುಗೇಟು ನೀಡಿದ್ದು, ಸಿದ್ದರಾಮಯ್ಯ ಅವರು ರೋಗದಲ್ಲೂ ರಾಜಕಾರಣ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
Vijaya Karnataka Web siddaramaiah trying to politicise the coronavirus situation says dcm govind karjol
ಮಾಜಿ ಸಿಎಂ ಸಿದ್ದರಾಮಯ್ಯರಿಂದ ರೋಗದಲ್ಲೂ ರಾಜಕಾರಣ ಪ್ರಯತ್ನ: ಡಿಸಿಎಂ ಕಾರಜೋಳ ಟಾಂಗ್‌


ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಕೇಂದ್ರ, ರಾಜ್ಯ ಸರಕಾರ ಬಹಳ ಜವಾಬ್ದಾರಿಯಿಂದ ಕಾರ್ಯನಿರ್ವಹಿಸುತ್ತಿವೆ. ಮಾರ್ಚ್ 25ರ ಲಾಕ್‌ಡೌನ್ ಘೋಷಣೆಯಿಂದ ಇಲ್ಲಿಯವರೆಗೆ ಸಮರ್ಪಕ ಕಾರ್ಯವಾಗಿದೆ. ಇಲ್ಲಿಯವರೆಗೂ ಅದನ್ನು ಸಿದ್ದರಾಮಯ್ಯ ಮೆಚ್ಚಿಕೊಂಡು ಬಂದಿದ್ದರು. ಈಗ ರೋಗದಲ್ಲೂ ರಾಜಕಾರಣ ಮಾಡುವ ಪ್ರಯತ್ನವನ್ನು ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ರೋಗ ಉಲ್ಭಣವಾಗುವ ಸಂದರ್ಭದಲ್ಲಿ ಸರಕಾರಕ್ಕೆ ಸಲಹೆ ನೀಡಬೇಕು. ವಿನಾ ಕಾರಣ ಹೇಳಿಕೆ ಕೊಡುವುದರಲ್ಲಿ ಯಾವುದೇ ಅರ್ಥವಿಲ್ಲ. ಅವರು ಜವಾಬ್ದಾರಿಯುತ ಮನುಷ್ಯರಾಗಿದ್ದು, ಅದನ್ನು ಅರಿತು ಮಾತನಾಡಬೇಕು. ಶ್ವೇತ ಪತ್ರ ಹೊರಡಿಸುವುದರ ಅಗತ್ಯವಿಲ್ಲ ಎಂದು ಸಿದ್ದರಾಮಯ್ಯಗೆ ಕಾರಜೋಳ ಟಾಂಗ್ ನೀಡಿದರು.

"ಸರಕಾರದ ಮುಂದೆ ಸದ್ಯಕ್ಕೆ ಲಾಕ್‌ಡೌನ್‌ ಪ್ರಸ್ತಾಪ ಇಲ್ಲ": ಡಿಸಿಎಂ ಗೋವಿಂದ ಕಾರಜೋಳ ಸ್ಪಷ್ಟನೆ

ಇನ್ನು, ರಾಜ್ಯ ಸರಕಾರದ ಮುಂದೆ ಸದ್ಯಕ್ಕೆ ಲಾಕ್‌ಡೌನ್‌ ಜಾರಿಗೊಳಿಸುವ ಪ್ರಸ್ತಾಪ ಇಲ್ಲ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಸ್ಪಷ್ಟನೆ ನೀಡಿದ್ದು, ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಪರೀಕ್ಷೆ ಜೊತೆ ಇನ್ನೂ ಅನೇಕ ಸಮಸ್ಯೆಗಳಿವೆ. ಆದ್ದರಿಂದ ಲಾಕ್‌ಡೌನ್‌ ಬಗ್ಗೆ ಇನ್ನೂ ನಿರ್ಧಾರ ಮಾಡಲಾಗಿಲ್ಲ ಎಂದು ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ