ಆ್ಯಪ್ನಗರ

‘ಬಾಯಿಗೆ ಬಂದಂಗೆ ಮಾತನಾಡ್ತಾರೆ’; ರಮೇಶ್ ಜಾರಕಿಹೊಳಿ ಹೇಳಿಕೆಗೆ ಸಿದ್ದರಾಮಯ್ಯ ಗರಂ

“ನಮ್ಮ ಜೀವನದ ಹೋರಾಟವೇ ಕೋಮುವಾದಿ ಶಕ್ತಿ ವಿರುದ್ಧ. ಅವನ್ಯಾರೋ ರಮೇಶ್, ಅವನಿಗೆ ಐಡಿಯಾಲಜಿ ಗೊತ್ತಿಲ್ಲ. ಪೊಲಿಟಿಕಲ್ ಫಿಲಾಸಫಿ ಗೊತ್ತಿಲ್ಲ. ಏನೂ ಓದಿಕೊಂಡಿಲ್ಲ. ಬಾಯಿಗೆ ಬಂದಂಗೆ ಮಾತನಾಡ್ತಾರೆ,” ಎಂಬುದಾಗಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

Vijaya Karnataka 5 Dec 2019, 1:50 pm
ಬಾಗಲಕೋಟೆ: ‘ಸಿದ್ದರಾಮಯ್ಯರನ್ನು ಬಿಜೆಪಿಗೆ ಕರೆತರುತ್ತೇವೆ’ ಎಂಬ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದು, ಇದು ಬಾಲಿಶವಾದ ಹೇಳಿದೆ. ಜವಾಬ್ದಾರಿಯಿದ್ರೆ ಹೀಗೆಲ್ಲ ಮಾತನಾಡುವುದಿಲ್ಲ. ರಾಜಕಾರಣದಲ್ಲಿ ಹುಡುಗಾಟಿಕೆ ಆಡಬಾರದು. ಗಂಭೀರವಾಗಿ ಮಾತನಾಡೋದನ್ನ ಕಲಿಯಬೇಕು ಎಂದು ಹರಿಹಾಯ್ದಿದ್ದಾರೆ.
Vijaya Karnataka Web Siddaramaiah


ಬಾದಾಮಿ ತಾಲೂಕಿನ ಕೆರೂರ ಪಟ್ಟಂದಲ್ಲಿ ಮಾತನಾಡಿದ ಅವರು, “ನಮ್ಮ ಜೀವನದ ಹೋರಾಟವೇ ಕೋಮುವಾದಿ ಶಕ್ತಿ ವಿರುದ್ಧ. ಅವನ್ಯಾರೋ ರಮೇಶ್, ಅವನಿಗೆ ಐಡಿಯಾಲಜಿ ಗೊತ್ತಿಲ್ಲ. ಪೊಲಿಟಿಕಲ್ ಫಿಲಾಸಫಿ ಗೊತ್ತಿಲ್ಲ. ಏನೂ ಓದಿಕೊಂಡಿಲ್ಲ. ಬಾಯಿಗೆ ಬಂದಂಗೆ ಮಾತನಾಡ್ತಾರೆ,” ಎಂದು ರಮೇಶ್ ವಿರುದ್ಧ ವಾಗ್ದಾಳಿ ನಡೆಸಿದರು.

ಮಲ್ಲಿಕಾರ್ಜುನ ಖರ್ಗೆ ದಲಿತ ಸಿಎಂ ವಿಚಾರಕ್ಕೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಅವರು, “ಏನೇ ತೀರ್ಮಾನ ಆಗಬೇಕಾದರೆ ಫಲಿತಾಂಶ ಬರಬೇಕು. ಆಮೇಲೆ ಹೈಕಮಾಂಡ್‌ನವರು ಏನು ತೀರ್ಮಾನ ಮಾಡ್ತಾರೆ ನೋಡೋಣ. ಈಗಲೇ ಚರ್ಚೆ ಮಾಡಿದ್ರೆ ಹೇಗೆ?” ಎಂದು ಪ್ರಶ್ನಿಸಿದರು.

“ನಮಗೊಂದು ಹೈಕಮಾಂಡ್ ಇದೆ. ನಾವು ಬೈ ಎಲೆಕ್ಷನ್‌ನಲ್ಲಿ 10 ಸೀಟು ಗೆಲ್ಲಬೇಕು. ಬಿಜೆಪಿ 5 ಸೀಟು ಗೆದ್ರೆ 112 ಸ್ಥಾನ ಆಗುತ್ತೆ. ಹಾಗಾಗಿ ಕಾಂಗ್ರೆಸ್‌ 10, ಜೆಡಿಎಸ್ ಒಂದರಿಂದ ಎರಡು ಸ್ಥಾನ ಗೆಲ್ಲಬೇಕು. ಆಗ ಇದು ಚರ್ಚೆಗೆ ಬರೋದು. ಇನ್ನೂ ಫಲಿತಾಂಶವೇ ಬಂದಿಲ್ಲ ಈಗಲೇ ಚರ್ಚೆ ಮಾಡಿದ್ರೆ ಹೇಗೆ,” ಎಂದು ಮರು ಪ್ರಶ್ನೆ ಹಾಕಿದರು.

ಉಪಚುನಾವಣೆಯಲ್ಲಿ ಸಿದ್ದರಾಮಯ್ಯ ಏಕಾಂಗಿ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಅದೆಲ್ಲ ಸುಳ್ಳು. ಬಿಜೆಪಿಯವ್ರು ಪ್ರಚಾರಕ್ಕಾಗಿ ಹಾಗೆ ಹೇಳ್ತಾರೆ. ಅದಕ್ಕೆಲ್ಲಾ ತಲೆಕೆಡಿಸಿಕೊಳ್ಳಬೇಕಿಲ್ಲ. ಅದು ಬಿಜೆಪಿ ಅಪಪ್ರಚಾರ. ಲಕ್ಷಾಂತರ ಕಾರ್ಯಕರ್ತರು ನಮ್ಮ ಜೊತೆ ಇದ್ದಾರೆ,” ಎಂದರು.

ಬೈ ಎಲೆಕ್ಷನ್ ಬಳಿಕ ಆಪರೇಷನ್ ಕಮಲ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, “ಆಪರೇಷನ್ ಕಮಲ ಮಾಡೋಕೆ ಮುಂದಾದ್ರೆ ಜನ ಬಿಜೆಪಿಯವರನ್ನು ಅಟ್ಟಾಡಿಸಿಕೊಂಡು ಹೊಡೆಯುತ್ತಾರೆ ಎಂದು ಎಚ್ಚರಿಸಿದರು.

ಸಿದ್ದರಾಮಯ್ಯ ಹೊರಗಿಟ್ಟು ಎಚ್‌ಡಿಕೆ -ಡಿಕೆಶಿ ಭೇಟಿ ಬಗ್ಗೆ ಕೇಳಿದ ಪ್ರಶ್ನೆಗೆ ಗರಂ ಆದ ವಿಪಕ್ಷ ನಾಯಕರು, “ಹೈಕಮಾಂಡ್‌ನವ್ರು ಹೇಳಿದ್ದಾರೆ ಏನ್ರಿ?” ಎಂದು ಮಾಧ್ಯಮ ಪ್ರತಿನಿಧಿಗಳನ್ನೇ ಪ್ರಶ್ನಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ