ಆ್ಯಪ್ನಗರ

ರಜೆಗೆಂದು ಊರಿಗೆ ಬಂದಿದ್ದ ಯೋಧ ಅಪಘಾತದಲ್ಲಿ ಸಾವು

ರಜೆ ಕಳೆಯಲೆಂದು ಊರಿಗೆ ಬಂದಿದ್ದೇ ಯೋಧನ ಪಾಲಿಗೆ ಮುಳುವಾಯಿತು. ಬೈಕ್ ಅಪಘಾತದಲ್ಲವರು ಸಾವನ್ನಪ್ಪಿದ್ದಾರೆ.

Vijaya Karnataka Web 16 Jul 2019, 12:19 pm
ಜಮಖಂಡಿ: ರಜೆಗೆಂದು ಊರಿಗೆ ಬಂದಿದ್ದ ಯೋಧ ದುರದೃಷ್ಟವಶಾತ್ ಅಪಘಾತದಲ್ಲಿ ಮೃತಪಟ್ಟ ದಾರುಣ ಘಟನೆ ರಾಯಚೂರಿನಲ್ಲಿ ನಡೆದಿದೆ. ಕಾರ್ ಮತ್ತು ಬೈಕ್ ಮಧ್ಯೆ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ.
Vijaya Karnataka Web Accident 1


ಜಮಖಂಡಿ ತಾಲೂಕಿನ ಮಧರಖಂಡಿ ಗ್ರಾಮದ ಯೋಧ ನೀಲಕಂಠ ಘಟನಟ್ಟಿ (29) ಮೃತ ದುರ್ದೈವಿ. ಮಹಾರಾಷ್ಟ್ರದ ಕೊಲ್ಲಾಪೂರ್ ಜಿಲ್ಲೆ ಮಂಗಳವೇಡ ಗ್ರಾಮದ ಬಳಿ ಅಪಘಾತ ನಡೆದಿದ್ದು, ಯೋಧನ ಪಾರ್ಥಿವ ಶರೀರವನ್ನು ಸ್ವಗ್ರಾಮಕ್ಕೆ ತರಲಾಗಿದೆ.

ಮಧ್ಯಪ್ರದೇಶದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಯೋಧ, ಜಮ್ಮು ಕಾಶ್ಮೀರಕ್ಕೆ ವರ್ಗಾವಣೆಯಾದ ಬೆನ್ನಲ್ಲೆ ಒಂದು ತಿಂಗಳ ರಜೆಗೆಂದು ಸ್ವಗ್ರಾಮಕ್ಕೆ ಆಗಮಿಸಿದ್ದ.

ತನ್ನ ಮಡದಿಯೊಂದಿಗೆ ಆಕೆಯ ತವರುಮನೆ ಮಹಾರಾಷ್ಟ್ರದ ಹುಲಜಂತಿಗೆ ಹೋಗಿ ಬರುವಾಗ ಅಪಘಾತ ನಡೆದಿದೆ. ದುರಂತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಹೆಂಡತಿಯ ಸ್ಥಿತಿ ಚಿಂತಾಜನಕವಾಗಿದೆ.

ಗ್ರಾಮ ಪಂಚಾಯತಿ ಆವರಣದಲ್ಲಿ ಯೋಧನ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಮಧುರಖಂಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸಕಲ ಗೌರವದೊಂದಿಗೆ ಇಂದು ಸಂಜೆ ಅಂತ್ಯಕ್ರಿಯೆ ನಡೆಯಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ