ಆ್ಯಪ್ನಗರ

ವಿಷಾಹಾರ ಸೇವಿಸಿ 16 ಮಕ್ಕಳು ಅಸ್ವಸ್ಥ

ಅಸ್ವಸ್ಥ ಮಕ್ಕಳಿಗೆ ವೈದ್ಯರು ಚಿಕಿತ್ಸೆ ನೀಡಿದ್ದು, ಚೇತರಿಸಿಕೊಂಡಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಡಿಎಚ್‌ಓ ಅನಂತ ದೇಸಾಯಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Vijaya Karnataka Web 19 Jul 2019, 3:33 pm
ಬಾಗಲಕೋಟ: ವಿಷಪೂರಿತ ಅಹಾರ ಸೇವಿಸಿ 16 ಮಕ್ಕಳು ಅಸ್ವಸ್ಥರಾದ ಘಟನೆ ಜಿಲ್ಲೆಯ ಬೀಳಗಿಯಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದ ಎಕ್ಸಲನ್ಸ್ ಕೋಚಿಂಗ್ ವಸತಿ ಶಾಲೆಯಲ್ಲಿ ಘಟನೆ ನಡೆದಿದೆ.
Vijaya Karnataka Web Food Poison


ಬೆಳಗಿನ ಉಪಹಾರ ಸೇವಿಸಿದ ಬಳಿಕ ಮಕ್ಕಳಲ್ಲಿ ವಾಂತಿ ಕಾಣಿಸಿಕೊಂಡಿದೆ. ಉಪಹಾರವಾಗಿ ಉಪ್ಪಿಟ್ಟು ಸೇವಿಸಿದ ಬಳಿಕ ಮಕ್ಕಳು ಅಸ್ವಸ್ಥರಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಕೂಡಲೇ ಮಕ್ಕಳನ್ನ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಸ್ವಸ್ಥ ಮಕ್ಕಳಿಗೆ ವೈದ್ಯರು ಚಿಕಿತ್ಸೆ ನೀಡಿದ್ದು, ಚೇತರಿಸಿಕೊಂಡಿದ್ದಾರೆ.
ಘಟನೆ ಹಿನ್ನೆಲೆಯಲ್ಲಿ ಡಿಎಚ್‌ಓ ಅನಂತ ದೇಸಾಯಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಬೆಳಗಿನ ಆಹಾರ ಮತ್ತು ನೀರು ಸ್ಯಾಂಪಲ್ ಸಂಗ್ರಹಿಸಿ ತಪಾಸಣೆಗೆ ಕಳುಹಿಸಲಾಗಿದೆ. ಜಿಲ್ಲೆಯ ಆಹಾರ ಗುಣಮಟ್ಟ ಹಾಗೂ ಸುರಕ್ಷೆ ವಿಭಾಗದ ವೈದ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ