ಆ್ಯಪ್ನಗರ

ಬಸ್ ಸೌಲಭ್ಯ ಇಲ್ಲವೆಂದು ಸಿದ್ದರಾಮಯ್ಯ ಬಳಿ ಗೋಳು ತೊಡಿಕೊಂಡ ವಿದ್ಯಾರ್ಥಿನಿಯರು

ಗ್ರಾಮಕ್ಕೆ ಬಸ್ ಸೌಲಭ್ಯ ಕಲ್ಪಿಸುವಂತೆ ಕಳಸ ಗ್ರಾಮದ ವಿದ್ಯಾರ್ಥಿನಿಯರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ಮನವಿ ಮಾಡಿದರು.

Vijaya Karnataka Web 19 Aug 2019, 5:44 pm
ಬಾಗಲಕೋಟ: ಊರಿಗೆ ಬಸ್ ಸೌಲಭ್ಯ ಇಲ್ಲ. ಇದರಿಂದ ಸಾಕಷ್ಟು ತೊಂದರೆಯಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ವಿದ್ಯಾರ್ಥಿನಿಯರು ಗೋಳು ತೊಡಿಕೊಂಡ ಪ್ರಸಂಗ ಜಿಲ್ಲೆಯ ಬಾದಾಮಿ ತಾಲೂಕಿನ ಕಳಸ ಗ್ರಾಮದಲ್ಲಿ ನಡೆದಿದೆ.
Vijaya Karnataka Web siddaramaiah3


ನೆರೆ ಪೀಡಿತ ಬಾದಾಮಿ ಪ್ರವಾಸದಲ್ಲಿರುವ ಸಿದ್ದರಾಮಯ್ಯ ಅವರನ್ನು ರಸ್ತೆ ಮಧ್ಯೆಯೇ ಭೇಟಿ ಮಾಡಿದ ವಿದ್ಯಾರ್ಥಿನಿಯರು, ಊರಿಗೆ ಬಸ್ ಸೌಲಭ್ಯ ಕಲ್ಪಿಸಿಕೊಡುವಂತೆ ಮನವಿ ಮಾಡಿದರು.

ಕಳಸ ಗ್ರಾಮದಿಂದ ಕಿತ್ತಲಿ ಗ್ರಾಮಕ್ಕೆ ನಿತ್ಯ ನಡೆದುಕೊಂಡೇ ವಿದ್ಯಾರ್ಥಿಗಳು ಶಾಲೆಗೆ ತೆರಳಬೇಕಾದ ಸ್ಥಿತಿ ಎದುರಾಗಿದೆ. ಹೀಗಾಗಿ ಗ್ರಾಮಕ್ಕೆ ಬಸ್ ಸೌಲಭ್ಯ ಕಲ್ಪಿಸುವಂತೆ ವಿದ್ಯಾರ್ಥಿನಿಯರು ಮನವಿ ಮಾಡಿದ್ದಾರೆ.

ವಿದ್ಯಾರ್ಥಿನಿಯರ ಮನವಿಗೆ ಸ್ಪಂದಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಶೀಘ್ರದಲ್ಲಿಯೇ ಗ್ರಾಮಕ್ಕೆ ಬಸ್ ಸೌಲಭ್ಯ ಕಲ್ಪಿಸಿಕೊಡುವ ಭರವಸೆ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ