ಆ್ಯಪ್ನಗರ

ಮೈತ್ರಿ ಸರಕಾರ ಪತನವಾಗುವುದಿಲ್ಲ

ಬಾಗಲಕೋಟ: 'ಮೈತ್ರಿ ಸರಕಾರ ಪತನವಾಗುವುದಿಲ್ಲ, ಸತೀಶ ಜಾರಕಿಹೊಳಿ ರಾಜೀನಾಮೆ ಕೊಡುವುದಿಲ್ಲ' ಎಂದು ಶಾಸಕ ರಾಮಲಿಂಗಾರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದರು.

Vijaya Karnataka 17 Sep 2018, 5:00 am
ಬಾಗಲಕೋಟ: 'ಮೈತ್ರಿ ಸರಕಾರ ಪತನವಾಗುವುದಿಲ್ಲ, ಸತೀಶ ಜಾರಕಿಹೊಳಿ ರಾಜೀನಾಮೆ ಕೊಡುವುದಿಲ್ಲ' ಎಂದು ಶಾಸಕ ರಾಮಲಿಂಗಾರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದರು.
Vijaya Karnataka Web the alliance government will not fall
ಮೈತ್ರಿ ಸರಕಾರ ಪತನವಾಗುವುದಿಲ್ಲ


ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು 'ಮೈತ್ರಿ ಸರಕಾರದಲ್ಲಿರುವ ಸಣ್ಣ ಪುಟ್ಟ ಭಿನ್ನಾಭಿಪ್ರಾಯ ಸರಿಪಡಿಸಲಾಗುತ್ತದೆ. ಅಸಮಾಧಾನಗೊಂಡವರು ಸಿದ್ದರಾಮಯ್ಯ ಅವರ ಶಿಷ್ಯರು ಎಂದಲ್ಲ, ಎಲ್ಲರೂ ಕಾಂಗ್ರೆಸ್‌ನವರಾಗಿದ್ದಾರೆ. ಮೈತ್ರಿ ಸರಕಾರ ಅಸ್ಥಿರಗೊಳಿಸಲು ಪ್ರಯತ್ನಿಸಿದವರು ಬೆಂಗಳೂರು ಮಹಾನಗರ ಪಾಲಿಕೆ ಅಸ್ಥಿರಗೊಳಿಸಲು ಯತ್ನಿಸಿದರು. ಆದರೆ ನಾನು ಅವಕಾಶ ಕೊಡಲಿಲ್ಲ. ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು, ಅವರು ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದ್ದಾರೆ' ಎಂದು ಹೇಳಿದರು.

'ಬಿಜೆಪಿಯವರು ಸರಕಾರ ಬೀಳಿಸುತ್ತೇವೆ ಎಂದು ಹಗಲುಗನಸು ಕಾಣುತ್ತಿದ್ದಾರೆ. ಅವರ ಕನಸು ನನಸಾಗುವುದಿಲ್ಲ, ಮೈತ್ರಿ ಸರಕಾರಕ್ಕೆ ಯಾವುದೇ ಅಪಾಯವಿಲ್ಲ. ಕಿಂಗ್‌ಪಿನ್‌ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಕುಮಾರಸ್ವಾಮಿ ಅವರು ಬಿಜೆಪಿ ಮುಖಂಡ ಅಶೋಕ ಕುರಿತು ನೀಡಿದ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ. ಅವರು ಹೇಳಿದ ಮೇಲೆ ನಾನು ಬೇರೆ ಹೇಳೋಕಾಗುತ್ತಾ ?' ಎಂದು ಪ್ರಶ್ನಿಸಿದರು.

'ಬಳ್ಳಾರಿಯ ಶಾಸಕರು ಸೇರಿದಂತೆ ಯಾವ ಕಾಂಗ್ರೆಸ್‌ ಶಾಸಕನೂ ಎಲ್ಲಿಯೂ ಹೋಗುವುದಿಲ್ಲ. ಎಲ್ಲರೂ ಕಾಂಗ್ರೆಸ್‌ನಲ್ಲಿ ಇರಲಿದ್ದಾರೆ' ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಸಂಪುಟ ವಿಸ್ತರಣೆ ವೇಳೆ ನಿಮಗೆ ಸಚಿವ ಸ್ಥಾನ ದೊರೆಯಬಹುದೇ ಎಂಬ ಪ್ರಶ್ನೆಗೆ ತಲೆ ಅಲ್ಲಾಡಿಸಿ ಇಲ್ಲ ಎಂದು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ