ಆ್ಯಪ್ನಗರ

ಜನಸಂಖ್ಯೆ ನಿಯಂತ್ರಣ ಅವಶ್ಯ:ಡಿಸಿ

ಬಾಗಲಕೋಟ: ಎಲ್ಲ ಮೂಲ ಸೌಕರ್ಯಗಳು ಜನಸಾಮಾನ್ಯರಿಗೆ ಸರಳವಾಗಿ ದೊರಕಿ ಸಾಮಾಜಿಕ, ಆರ್ಥಿಕ, ಮಾನಸಿಕವಾಗಿ ಪ್ರತಿಯೊಬ್ಬರು ಸದೃಢರಾಗಬೇಕಾಗಿದರೆ ಜನಸಂಖ್ಯೆ ನಿಯಂತ್ರಣ ಅವಶ್ಯವೆಂದು ಡಿಸಿ ಆರ್‌.ರಾಮಚಂದ್ರನ್‌ ಹೇಳಿದರು.

Vijaya Karnataka Web 12 Jul 2019, 5:00 am
ಬಾಗಲಕೋಟ: ಎಲ್ಲ ಮೂಲ ಸೌಕರ್ಯಗಳು ಜನಸಾಮಾನ್ಯರಿಗೆ ಸರಳವಾಗಿ ದೊರಕಿ ಸಾಮಾಜಿಕ, ಆರ್ಥಿಕ, ಮಾನಸಿಕವಾಗಿ ಪ್ರತಿಯೊಬ್ಬರು ಸದೃಢರಾಗಬೇಕಾಗಿದರೆ ಜನಸಂಖ್ಯೆ ನಿಯಂತ್ರಣ ಅವಶ್ಯವೆಂದು ಡಿಸಿ ಆರ್‌.ರಾಮಚಂದ್ರನ್‌ ಹೇಳಿದರು.
Vijaya Karnataka Web the need for population control dc
ಜನಸಂಖ್ಯೆ ನಿಯಂತ್ರಣ ಅವಶ್ಯ:ಡಿಸಿ


ಜಿಲ್ಲಾಡಳಿತ, ಜಿಪಂ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಜಾಗೃತಿ ಜಾಥಾ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು. ಜನಸಂಖ್ಯೆ ಹೆಚ್ಚಳದಿಂದ ಕುಟುಂಬ, ದೇಶದವರೆಗೆ ಹಲವಾರು ಸಮಸ್ಯೆ ಉಂಟಾಗುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು ಆರೋಗ್ಯಯುತ ಸುಖಿ ಕುಟುಂಬಕ್ಕಾಗಿ ಚಿಕ್ಕ ಸಂಸಾರ ಅಗತ್ಯವಿದೆ ಎಂದರು.

ಜಿಪಂ ಅಧ್ಯಕ್ಷೆ ಬಾಯಕ್ಕ ಮೇಟಿ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದರು. ಜಿಲ್ಲಾಡಳಿತ ಭವನದಿಂದ ಪ್ರಾರಂಭವಾದ ಜಾಥಾ ನವನಗರದ ನಾನಾ ಕಡೆ ಸಂಚರಿಸಿ ಜಿಲ್ಲಾಡಳಿತ ಭವನಕ್ಕೆ ಮುಕ್ತಾಯಗೊಂಡಿತು. ಜಾಥಾದಲ್ಲಿ ವಿದ್ಯಾರ್ಥಿಗಳು ಜಾಗೃತಿ ಮೂಡಿಸಿದರು. ಡಿಎಚ್‌ಒ ಡಾ.ಅನಂತ ದೇಸಾಯಿ, ಪ್ರಕಾಶ ಬಿರಾದಾರ, ಕುಟುಂಬ ಕಲ್ಯಾಣಾಧಿಕಾರಿ ಪಟ್ಟಣಶೆಟ್ಟಿ, ಡಾ.ಜಯಶ್ರೀ ಎಮ್ಮಿ, ಡಾ.ಬಿ.ಜಿ.ಹುಬ್ಬಳ್ಳಿ, ಡಾ.ಪಿ.ಎ.ಹಿತ್ನಳ್ಳಿ, ಡಾ.ವಿಜಯ ಕಂಠಿ ಹಾಗೂ ಎಎನ್‌ಎಂ ತರಬೇತಿ ಕೇಂದ್ರದ ಪ್ರಾಚಾರ್ಯೆ ಸುಮಿತ್ರ ಇತರರು ಇದ್ದರು.

ಆರೋಗ್ಯ ಇಲಾಖೆ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪವಾಡೆಪ್ಪ ಬಿ.ಸಿ, ಮಾತನಾಡಿ ಜನಸಂಖ್ಯೆ ನಿಯಂತ್ರಿಸಬಹುದಾದ ಕ್ರಮಗಳನ್ನುವಿವರಿಸಿದರು. ಡಿಎಚ್‌ಒ ಡಾ.ಅನಂತ ದೇಸಾಯಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಆರ್‌ಸಿಎಚ್‌ ಅಧಿಕಾರಿ ಡಾ.ಬಿ.ಜಿ.ಹುಬ್ಬಳ್ಳಿ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ