ಆ್ಯಪ್ನಗರ

ಘಟಕ ಸ್ಪೋಟ, ತೀವ್ರ ತನಿಖೆ

ಬಾಗಲಕೋಟ: ಜಿಲ್ಲೆಯ ಮುಧೋಳದ ನಿರಾಣಿ ಸಕ್ಕರೆ ಕಾರ್ಖಾನೆ ತ್ಯಾಜ್ಯ ಸಂಸ್ಕರಣಾ ಘಟಕದ ಸ್ಫೋಟಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.

Vijaya Karnataka 30 Dec 2018, 5:00 am
ಬಾಗಲಕೋಟ: ಜಿಲ್ಲೆಯ ಮುಧೋಳದ ನಿರಾಣಿ ಸಕ್ಕರೆ ಕಾರ್ಖಾನೆ ತ್ಯಾಜ್ಯ ಸಂಸ್ಕರಣಾ ಘಟಕದ ಸ್ಫೋಟಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.
Vijaya Karnataka Web the unit explosion intense investigation
ಘಟಕ ಸ್ಪೋಟ, ತೀವ್ರ ತನಿಖೆ


ನಿರಾಣಿ ಶುಗರ್ಸ್‌ನ ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಡಿ.16ರಂದು ಸ್ಫೋಟವಾಗಿ ನಾಲ್ವರು ಕಾರ್ಮಿಕರು ಮೃತಪಟ್ಟು, 8 ಜನರು ಗಾಯಗೊಂಡಿದ್ದರು. ಪೊಲೀಸ್‌ ಇಲಾಖೆ ನೇತೃತ್ವದಲ್ಲಿ ನಾನಾ ತಂಡಗಳನ್ನು ರಚಿಸಿ ತನಿಖೆ ನಡೆಸಲಾಗುತ್ತಿದೆ, ಶೀಘ್ರವೇ ತನಿಖೆಗೆ ಅಂತಿಮ ರೂಪ ದೊರೆಯುವ ಸಾಧ್ಯತೆಯಿದೆ.

ಪೊಲೀಸ್‌ ಇಲಾಖೆ, ಕಂದಾಯ ಇಲಾಖೆ ಅಧಿಕಾರಿಗಳು, ಬಾಯ್ಲರ್‌ ನಿರ್ದೇಶನಾಲಯ, ಫ್ಯಾಕ್ಟರೀಸ್‌ ನಿರ್ದೇಶನಾಲಯದ ಅಧಿಕಾರಿಗಳು ತನಿಖೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಇತ್ತೀಚೆಗೆ ಘಟನೆಗೆ ಸಂಬಂಧಿಸಿದಂತೆ ಪುಣೆ ಮೂಲದ ಎಂಜಿನಿಯರ್‌ ಒಬ್ಬರನ್ನು ಪೊಲೀಸರು ವಿಚಾರಣೆ ನಡೆಸಿದ್ದರು. ಘಟಕದ ಸ್ಫೋಟಕ್ಕೆ ಕಾರಣವೇನು ?, ರಸಾಯನಿಕಗಳ ಅಸಮರ್ಪಕ ಬಳಕೆಯಿಂದ ಸ್ಪೋಟವಾಯಿತೇ ಎಂಬ ಬಗ್ಗೆ ಪೊಲೀಸರು ತನಿಖೆ ಕೇಂದ್ರೀಕರಿಸಿದ್ದಾರೆ. ಬಾಯ್ಲರ್‌ ಹಾಗೂ ಫ್ಯಾಕ್ಟರಿ ನಿರ್ದೇಶನಾಲಯದ ತಜ್ಞರು ವೈಜ್ಞಾನಿಕ ಮಾಹಿತಿ ಆಧರಿಸಿ ತನಿಖೆ ಚುರುಕುಗೊಳಿಸಿದ್ದಾರೆ.

ಕಾರ್ಮಿಕ ಇಲಾಖೆಯ ಸಹಯೋಗವನ್ನೂ ಪಡೆಯಲಾಗಿದ್ದು, ಘಟಕ ನಿರ್ವಹಣೆಗೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಅಧಿಕಾರಿಗಳು ಮಾಹಿತಿ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

'ಎಲ್ಲ ದೃಷ್ಟಿಕೋನಗಳಿಂದ ತನಿಖೆ ನಡೆಸಲಾಗುತ್ತಿದ್ದು, ಸಂಪೂರ್ಣ ವರದಿ ಇನ್ನೂ ಸಿದ್ಧವಾಗಿಲ್ಲ. ಶೀಘ್ರವೇ ಕಾರಣವನ್ನು ಪತ್ತೆ ಮಾಡಲಾಗುತ್ತದೆ'ಎಂದು ಎಸ್‌ಪಿ ರಿಷ್ಯಂತ್‌ 'ವಿಜಯ ಕರ್ನಾಟಕ'ಕ್ಕೆ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ