ಆ್ಯಪ್ನಗರ

ಮಾಜಿ ಸಚಿವೆ ಉಮಾಶ್ರೀ ಮನೆಗೆ ಕನ್ನ ಹಾಕಿದ ಖದೀಮರು!

ಬೆಂಗಳೂರಿನ ರಾಜರಾಜೇಶ್ವರಿ ನಗರ (ಆರ್.ಆರ್.ನಗರ) ಉಪಚುನಾವಣೆಯಲ್ಲಿ ಬ್ಯುಸಿಯಾಗಿದ್ದ ಮಾಜಿ ಸಚಿವೆ ಉಮಾಶ್ರೀ ಮನೆಗೆ ಭಾನುವಾರ ತಡರಾತ್ರಿ ಖದೀಮರು ಕನ್ನ ಹಾಕಿದ್ದಾರೆ. ಒಡವೆ ಸಹಿತ ಹಣ ಕದ್ದೊಯ್ದಿರುವ ಶಂಕೆ ವ್ಯಕ್ತವಾಗಿದೆ.

Vijaya Karnataka Web 2 Nov 2020, 4:09 pm
ಬಾಗಲಕೋಟೆ: ಬೆಂಗಳೂರಿನ ರಾಜರಾಜೇಶ್ವರಿ ನಗರ (ಆರ್.ಆರ್.ನಗರ) ಉಪಚುನಾವಣೆಯಲ್ಲಿ ಬ್ಯುಸಿಯಾಗಿದ್ದ ಮಾಜಿ ಸಚಿವೆ ಉಮಾಶ್ರೀ ಮನೆಗೆ ಭಾನುವಾರ ತಡರಾತ್ರಿ ಖದೀಮರು ಕನ್ನ ಹಾಕಿದ್ದಾರೆ.
Vijaya Karnataka Web umashree


ಬಾಗಲಕೋಟೆ ಜಿಲ್ಲೆಯ ರಬಕವಿ ಪಟ್ಟಣದ ವಿದ್ಯಾನಗರದಲ್ಲಿರುವ ಮಾಜಿ ಸಚಿವೆ ಉಮಾಶ್ರೀ ಅವರ ಮನೆಯ ಬೀಗ ಒಡೆದು ಕಳ್ಳರು ಒಳನುಗ್ಗಿದ್ದಾರೆ.

ಉಮಾಶ್ರೀ ಅವರು ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ಎಚ್‌. ಅವರ ಪರ ಪ್ರಚಾರ ಕಾರ್ಯದಲ್ಲಿ ತೊಡಗಬೇಕಿದ್ದ ಕಾರಣ, ರಬಕವಿ ಪಟ್ಟಣದಲ್ಲಿದ್ದ ಮನೆಗೆ ಬೀಗ ಹಾಕಿಕೊಂಡು ಹೋಗಿದ್ದರು.

ತಾನೇ ಮಾರಿದ್ದ ಕಾರನ್ನು ಕದಿಯುತ್ತಿದ್ದ ಕಳ್ಳ : ಈತನ ಕತೆ ಕೇಳಿ ನೆಟ್ಟಿಗರು ಶಾಕ್

ಬೀಗ ಒಡೆದು ಒಳನುಗ್ಗಿದ ಖದೀಮರು, ಮನೆಯೊಳಗಿನ ಟ್ರಜರಿ ಒಡೆದು ಹಾಕಿ, ಒಡವೆ ಸಹಿತ ಹಣ ಕದ್ದೊಯ್ದಿರುವ ಶಂಕೆ ವ್ಯಕ್ತವಾಗಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಉಮಾಶ್ರೀ ಅವರು ಬೆಂಗಳೂರಿನಿಂದ ರಬಕವಿಗೆ ಹಿಂದಿರುಗುತ್ತಿದ್ದಾರೆ.

ಉಮಾಶ್ರೀ ಅವರು ಬಂದ ಬಳಿಕವೇ ಕದ್ದೊಯ್ದಿರುವ ವಸ್ತುಗಳ ಬಗ್ಗೆ ಮಾಹಿತಿ ಲಭ್ಯವಾಗಲಿದೆ. ಈಗಾಗಲೇ ತೇರದಾಳ ಠಾಣೆ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಿಂಬಾಗಿಲು ಒಡೆದು ಮನೆ ಕಳ್ಳತನ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ