ಆ್ಯಪ್ನಗರ

ಬಾಗಲಕೋಟೆಯಲ್ಲಿ ತಲೆಕೆಳಗು ಹಾರಿದ ರಾಷ್ಟ್ರಧ್ವಜ

ಇಳಕಲ್ ಕಂಠಿ ಸರ್ಕಲ್‌ನಲ್ಲಿ ವಿವಿಧ ಸಂಘಟನೆಗಳು ಧ್ವಜಾರೋಹಣ ಕಾರ್ಯಕ್ರಮ ಆಯೋಜಿಸಿತ್ತು. ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್‌ ಧ್ವಜಾರೋಹಣ ಮಾಡಬೇಕಾಗಿತ್ತು. ಈ ಸಂದರ್ಭದಲ್ಲಿ ಧ್ವಜಾರೋಹಣ ಮಾಡುವಾಗ ತ್ರಿವರ್ಣ ಧ್ವಜವನ್ನು ತಲೆಕೆಳಗು ಮಾಡಲಾಗಿದೆ.

Vijaya Karnataka Web 17 Aug 2020, 1:50 pm
ಬಾಗಲಕೋಟೆ: ಬಾಗಲಕೋಟೆಯ ಇಳಕಲ್‌ ಪಟ್ಟಣದಲ್ಲಿ ಸ್ವಾತಂತ್ರ ದಿನದಂದು ರಾಷ್ಟ್ರಧ್ವಜಕ್ಕೆ ಅವಮಾನ ಮಾಡಲಾಗಿದೆ.
Vijaya Karnataka Web ಬಾಗಲಕೋಟೆ
ಬಾಗಲಕೋಟೆ


ಇಳಕಲ್‌ನಲ್ಲಿ ರಾಷ್ಟ್ರಧ್ವಜವನ್ನು ತಲೆಕೆಳಗೆ ಹಾರಿಸುವ ಮೂಲಕ ಎಡವಟ್ಟು ಮಾಡಲಾಗಿದೆ.

ಹುನಗುಂದ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ರಾಷ್ಟ್ರ ಧ್ವಜಾರೋಹಣ ಮಾಡುವ ವೇಳೆ ಈ ಎಡವಟ್ಟು ಮಾಡಲಾಗಿದೆ.

ಇಳಕಲ್ ಕಂಠಿ ಸರ್ಕಲ್‌ನಲ್ಲಿ ವಿವಿಧ ಸಂಘಟನೆಗಳು ಧ್ವಜಾರೋಹಣ ಕಾರ್ಯಕ್ರಮ ಆಯೋಜಿಸಿತ್ತು. ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್‌ ಧ್ವಜಾರೋಹಣ ಮಾಡಬೇಕಾಗಿತ್ತು.

ಈ ಸಂದರ್ಭದಲ್ಲಿ ಧ್ವಜಾರೋಹಣ ಮಾಡುವಾಗ ಎಡವಟ್ಟು ಮಾಡಲಾಗಿದೆ. ಆಗ ತ್ರಿವರ್ಣ ಧ್ವಜವನ್ನು ತಲೆಕೆಳಗು ಮಾಡಿ ಹಾರಾಟ ಮಾಡಲಾಗಿದೆ. ನಂತರ ಅದನ್ನು ಕೆಳಗಿಳಿಸಿ ಸರಿಪಡಿಸಲಾಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ