ಆ್ಯಪ್ನಗರ

ಇನ್ನೂ ಚೇತರಿಸಿಕೊಳ್ಳದ ಉಮಾಶ್ರೀ

ಇಳಕಲ್‌ನಲ್ಲಿ ನಡೆದ ಪ್ರತಿಭಟನೆ ವೇಳೆ ಅಸ್ವಸ್ಥಗೊಂಡಿದ್ದ ಸಚಿವೆ ಉಮಾಶ್ರೀ ಇನ್ನೂ ಚೇತರಿಸಿಕೊಂಡಿಲ್ಲ.

ವಿಕ ಸುದ್ದಿಲೋಕ 28 Feb 2017, 5:00 pm
ಬಾಗಲಕೋಟ: ಇಳಕಲ್‌ನಲ್ಲಿ ನಡೆದ ಪ್ರತಿಭಟನೆ ವೇಳೆ ಅಸ್ವಸ್ಥಗೊಂಡಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಮಾಶ್ರೀ ಇನ್ನೂ ಚೇತರಿಸಿಕೊಂಡಿಲ್ಲ.
Vijaya Karnataka Web umashree falls ill during protest
ಇನ್ನೂ ಚೇತರಿಸಿಕೊಳ್ಳದ ಉಮಾಶ್ರೀ


ನಗರದ ಹೊಸ ಐಬಿಯಲ್ಲಿ ಚಿಕಿತ್ಸೆ ಜತೆಗೆ ವಿಶ್ರಾಂತಿ ಪಡೆಯುತ್ತಿರುವ ಉಮಾಶ್ರೀ ಅವರಿಗೆ ಹೆಚ್ಚಿನ ಚಿಕಿತ್ಸೆ ನೀಡಲು ಸರಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ವಿಶೇಷ ವಾರ್ಡ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಹೊಟ್ಟೆ ಸಮಸ್ಯೆಗೆ ಚಿಕಿತ್ಸೆ ನೀಡಲಾಗುತ್ತಿದೆ. ಯಾವುದೇ ತೊಂದರೆ ಇಲ್ಲ ಭಯ ಪಡುವ ಅಗತ್ಯ ಇಲ್ಲ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದಾರೆ.

ನೋಟ್‌ ಬ್ಯಾನ್‌ ಖಂಡಿಸಿ ಹುನಗುಂದದಲ್ಲಿ ಕಾಂಗ್ರೆಸ್‌ ಸೋಮವಾರ ನಡೆಸಿದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಉಮಾಶ್ರೀ ಅಸ್ವಸ್ಥರಾಗಿದ್ದರು. ಮೆರವಣಿಗೆಯಲ್ಲಿ ನಡೆದು ಸುಸ್ತಾಗಿದ್ದರು. ವಿಶ್ರಾಂತಿಯಲ್ಲಿರುವ ಸಚಿವರ ಭೇಟಿಗೆ ಅವಕಾಶ ನಿರಾಕರಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ