ಆ್ಯಪ್ನಗರ

ಫೆ.8 ರಿಂದ ಹರಿಹರದಲ್ಲಿ ವಾಲ್ಮೀಕಿ ಸಮಾವೇಶ

ಬಾಗಲಕೋಟ: ಮಹರ್ಷಿ ವಾಲ್ಮೀಕಿ ಜಾತ್ರೆ, ಶ್ರೀಮಠದ 21ನೇ ವರ್ಷದ ವಾರ್ಷಿಕೋತ್ಸವ ನಿಮಿತ್ತ ಫೆ.8 ಹಾಗೂ 9 ರಂದು ಹರಿಹರದ ವಾಲ್ಮೀಕಿ ಗುರುಪೀಠದಲ್ಲಿ ನಾನಾ ಧಾರ್ಮಿಕ ಕಾರ್ಯಕ್ರಮ ಜರುಗಲಿವೆ ಎಂದು ವಾಲ್ಕೀಕಿ ಸಮಾಜದ ಅಧ್ಯಕ್ಷ ರಾಜು ನಾಯ್ಕರ ತಿಳಿಸಿದರು.

Vijaya Karnataka 6 Feb 2019, 5:00 am
ಬಾಗಲಕೋಟ: ಮಹರ್ಷಿ ವಾಲ್ಮೀಕಿ ಜಾತ್ರೆ, ಶ್ರೀಮಠದ 21ನೇ ವರ್ಷದ ವಾರ್ಷಿಕೋತ್ಸವ ನಿಮಿತ್ತ ಫೆ.8 ಹಾಗೂ 9 ರಂದು ಹರಿಹರದ ವಾಲ್ಮೀಕಿ ಗುರುಪೀಠದಲ್ಲಿ ನಾನಾ ಧಾರ್ಮಿಕ ಕಾರ್ಯಕ್ರಮ ಜರುಗಲಿವೆ ಎಂದು ವಾಲ್ಕೀಕಿ ಸಮಾಜದ ಅಧ್ಯಕ್ಷ ರಾಜು ನಾಯ್ಕರ ತಿಳಿಸಿದರು.
Vijaya Karnataka Web valmiki conference on harihara from feb 8
ಫೆ.8 ರಿಂದ ಹರಿಹರದಲ್ಲಿ ವಾಲ್ಮೀಕಿ ಸಮಾವೇಶ


ನಗರದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ದಾವಣಗೇರೆ ಜಿಲ್ಲೆಯ ಹರಿಹರದ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ಶ್ರೀಮಠದ 21ನೇ ವರ್ಷದ ವಾರ್ಷಿಕೋತ್ಸವ, ಲಿಂ.ಪುಣ್ಯಾನಂದಪುರಿ ಸ್ವಾಮೀಜಿ ಪುಣ್ಯರಾಧನೆ, ಜಗದ್ಗುರು ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ ಮತ್ತು ರಥೋತ್ಸವ ಸೇರಿದಂತೆ ಹಲವು ಧಾರ್ಮಿಕ ಕಾರ್ಯಕ್ರಮಗಳು ವಾಲ್ಮೀಕಿ ನಾಯಕ ಮಹಾಸಭಾದ ವತಿಯಿಂದ ನಡೆಯಲಿದ್ದು ಸಮಾಜದ ಜನಜಾಗೃತಿ ಸಮಾವೇಶವೂ ಜರುಗಲಿದೆ ಎಂದರು.

ಸಮಾಜಕ್ಕೆ ದೊರೆಯಬೇಕಾದ ಸೌಲಭ್ಯಗಳ ಕುರಿತು ಸರಕಾರ ವಿಳಂಬ ನೀತಿ ಅನುಸರಿಸುತ್ತಿದ್ದು ಸಮಾವೇಶದ ಮೂಲಕ ಸರಕಾರಕ್ಕೆ ಬಿಸಿ ಮುಟ್ಟಿಸಲಾಗುವುದು. ಹೀಗಾಗಿ ರಾಜ್ಯಾದ್ಯಂತ ಸಮಾಜ ಬಾಂಧವರನ್ನು ಒಂದುಗೂಡಿಸಿ ಸರಕಾರಕ್ಕೆ ಸಂದೇಶ ರವಾನಿಸಲಾಗುತ್ತದೆ. ಈಗಾಗಲೇ ನಮ್ಮ ಸಮಾಜವು 80ಲಕ್ಷ ಕ್ಕೂ ಹೆಚ್ಚಿನ ಜನಸಂಖ್ಯೆ ಹೊಂದಿದೆ. ಸರಕಾವು ಬೇರೆ ಜಾತಿಯವರನ್ನು ಎಸ್‌ಟಿಗೆ ಸೇರ್ಪಡೆಗೊಳಿಸುವ ಉದ್ದೇಶ ಹೊಂದಿದೆ. ಅವುಗಳನ್ನು ಸೇರ್ಪಡೆ ಮಾಡಿದರೆ ನಮ್ಮ ಸಮಾಜಕ್ಕೆ ಅನ್ಯಾಯವಾಗುತ್ತದೆ ಎಂದರು.

ಸಮಾಜದಲ್ಲಿ ಇನ್ನೂ ಎಲ್ಲರಿಗೂ ಸರಿಯಾಗಿ ಸೌಲಭ್ಯ ದೊರೆಯುತ್ತಿಲ್ಲ. ಇಂತಹ ವೇಳೆ ಬೇರೆ ಸಮಾಜವನ್ನು ಎಸ್‌ಟಿಗೆ ಸೇರ್ಪಡೆಗೊಳಿಸಿದರೆ ನಮ್ಮ ಸಮಾಜ ಅಭಿವೃದ್ದಿ ಸಾಧ್ಯವಾಗುವುದಿಲ್ಲ. ಶೇ.11ರಷ್ಟು ಮೀಸಲಾತಿಯನ್ನು ಪರಿಶಿಷ್ಟ ಪಂಗಡಕ್ಕೆ ನೀಡಬೇಕೆಂದು ಸಮಾವೇಶದ ಮೂಲಕ ಒತ್ತಾಯಿಸಲಾಗುವುದು ಎಂದರು. ಸಮಾಜದ ಮುಖಂಡರಾದ ಅಯ್ಯಪ್ಪ ವಾಲ್ಮೀಕಿ, ದ್ಯಾಮಣ್ಣ ಗಾಳಿ, ವೆಂಕಟೇಶ ಲೋಕಾಪೂರ, ರಾಜು ನಾಯಕ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ