ಆ್ಯಪ್ನಗರ

ವೃಂದಾನವ ಧ್ವಂಸ: ದುಷ್ಕರ್ಮಿಗಳಿಗೆ ತಕ್ಕ ಶಿಕ್ಷೆಯಾಗಲಿ ಎಂದ ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ

ಯಾವ ಉದ್ದೇಶದಿಂದ ಕಿಡಗೇಡಿಗಳು ನವ ವೃಂದಾವನ ಧ್ವಂಸಗೊಳಿಸಿದ್ದಾರೆ ಎಂಬುದು ಪೊಲೀಸ್‌ ತನಿಖೆಯಿಂದ ಸತ್ಯ ಹೊರಬರಬೇಕಿದೆ.

Vijaya Karnataka 20 Jul 2019, 7:57 am
ಬಾಗಲಕೋಟ: ಆನೆಗೊಂದಿಯಲ್ಲಿನ ವ್ಯಾಸರಾಯರ ನವವೃಂದಾವನ ಭಗ್ನಗೊಳಿಸಿದ ದುಷ್ಕರ್ಮಿಗಳನ್ನು ಪತ್ತೆ ಮಾಡಿ ತಕ್ಕ ಶಿಕ್ಷೆ ನೀಡಬೇಕು ಎಂದು ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ನಾಗರಾಜ ಹದ್ಲಿ ಆಗ್ರಹಿಸಿದ್ದಾರೆ.
Vijaya Karnataka Web koppala


ಪ್ರಕಟಣೆ ನೀಡಿ, ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿ ಬಳಿ ಮಹಾತಪಸ್ವಿ ವ್ಯಾಸರಾಯರ ನವ ವೃಂದಾವನ ಭಗ್ನಗೊಳಿಸಿ ದುಷ್ಕರ್ಮಿಗಳು ವಿಕೃತಿ ಮೆರೆದಿದ್ದಾರೆ. ಈ ಘಟನೆ ಬ್ರಾಹ್ಮಣ ಸಮಾಜ ಮತ್ತು ಎಲ್ಲ ಭಕ್ತರಲ್ಲಿ ಆತಂಕ ಉಂಟುಮಾಡುವ ಮೂಲಕ ಸಮಾಜದಲ್ಲಿ ಭಯ ಹುಟ್ಟಿಸುವ ಕೆಲಸವಾಗಿದೆ.

ನವ ವೃಂದಾವನ ಧ್ವಂಸಗೊಳಿಸಿದ ಹೇಡಿಗಳು ಯಾವ ಉದ್ದೇಶದಿಂದ ಈ ಹೇಯ ಕೃತ್ಯ ನಡೆಸಿದ್ದಾರೆ ಎಂಬುದು ಪೊಲೀಸ್‌ ತನಿಖೆಯಿಂದ ಸತ್ಯ ಹೊರಬರಬೇಕಿದೆ. ಕೂಡಲೆ ಪೊಲೀಸ್‌ ಇಲಾಖೆ ಸೂಕ್ತ ತನಿಖೆ ನಡೆಸಿ ದುಷ್ಕರ್ಮಿಗಳನ್ನು ಪತ್ತೆ ಮಾಡಬೇಕು. ಸಮಾಜದಲ್ಲಿ ಅಶಾಂತಿ ನಿರ್ಮಾಣ ಮಾಡುವ ದ್ರೋಹಿಗಳಿಗೆ ತಕ್ಕ ಶಿಕ್ಷೆ ನೀಡುವಂತಾಗಬೇಕು. ದುಷ್ಕರ್ಮಿಗಳು ಯಾವುದೇ ಸಮಾಜಕ್ಕೆ ಸೇರಿರಲಿ ಅಂತವರನ್ನು ಸಮಾಜದಿಂದ ಬಹಿಷ್ಕರಿಸಬೇಕು ಎಂದು ಆಗ್ರಹಿಸಿದ್ದಾರೆ.

ದುಷ್ಕರ್ಮಿಗಳನ್ನು ಬಂಧಿಸಿ :ನವ ವೃಂದಾವನದಲ್ಲಿನ ವ್ಯಾಸರಾಜರ ವೃಂದಾವನವನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳನ್ನು ಬಂಧಿಸಬೇಕು ಎಂದು ನಗರದ ನಾನಾ ಸಂಘಟನೆಗಳು ಒತ್ತಾಯಿಸಿವೆ.

ಈ ಬಗ್ಗೆ ಪ್ರಕಟಣೆ ನೀಡಿರುವ ವಿದ್ಯಾಗಿರಿಯ ವಿಪ್ರ ಅಭಿವೃದ್ಧಿ ಸಂಘದ ಅಧ್ಯಕ್ಷ ಎ.ಕೆ.ಸರಾಫ್‌, ರುಕ್ಮಿಣಿ ಭಜನಾ ಮಂಡಳಿ ಅಧ್ಯಕ್ಷೆ ಲಕ್ಷ್ಮಿ ಪಾಟೀಲ ಹರಿದಾಸ ಸಾಹಿತ್ಯದ ಮೂಲಕ ವ್ಯಾಸರಾಜರು ಅಪಾರ ಕೊಡುಗೆ ನೀಡಿದ್ದಾರೆ. ದುಷ್ಕರ್ಮಿಗಳ ಕೃತ್ಯದಿಂದ ಮಧ್ವ ಮತ ಹಾಗೂ ಹಿಂದು ಧರ್ಮಕ್ಕೆ ಅವಮಾನವಾಗಿದೆ. ತಕ್ಷಣ ದುಷ್ಕರ್ಮಿಗಳನ್ನು ಬಂಧಿಸಬೇಕು, ವೃಂದಾವನ ಸ್ಥಳಕ್ಕೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಸರಕಾರವನ್ನು ಒತ್ತಾಯಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ