ಆ್ಯಪ್ನಗರ

ಕಾದು ನೋಡಿ ಸಿದ್ದರಾಮಯ್ಯ ಕಾಂಗ್ರೆಸ್ ಬಿಡ್ತಾರೆ: ಮುರುಗೇಶ್ ನಿರಾಣಿ

ಪಕ್ಷ ಏನೇ ಜವಾಬ್ದಾರಿ ಕೊಟ್ಟರೂ ನಿಭಾಯಿಸುವೆ. ಕೊಡದಿದ್ದರೂ ಸುಮ್ಮನಿರುತ್ತೇನೆ ಎಂಬುದಾಗಿ ನಿರಾಣಿ ಸ್ಪಷ್ಟನೆ ನೀಡಿದ್ದಾರೆ. ಸಚಿವ ಸ್ಥಾನ ಸಿಗದಿದ್ದಕ್ಕೆ ನನಗೆ ಯಾವುದೇ ಅಸಮಾಧಾನ ಇಲ್ಲ ಎಂಬುದಾಗಿ ಅವರು ಸಮಜಾಯಿಷಿ ನೀಡಿದ್ದಾರೆ.

Vijaya Karnataka Web 1 Nov 2019, 6:18 pm

ಬಾಗಲಕೋಟೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಟಾಂಗ್ ನೀಡಿರುವ ಮಾಜಿ ಸಚಿವ ಮುರುಗೇಶ್‌ ನಿರಾಣಿ, 'ಸಿದ್ದರಾಮಯ್ಯನವರೇ ಕಾಂಗ್ರೆಸ್ ಬಿಟ್ಟು ಹೊರಬಂದರೂ ಅಚ್ಚರಿಯಿಲ್ಲ. ಕಾದುನೋಡಿ ಸಿದ್ದರಾಮಯ್ಯ ಕಾಂಗ್ರೆಸ್ ಬಿಡ್ತಾರೆ' ಎಂದಿದ್ದಾರೆ. ಸರ್ಕಾರ ಸತ್ತು ಹೋಗಿದೆ, ಬೈ ಎಲೆಕ್ಷನ್ ಬಳಿಕ ಸರ್ಕಾರ ಪತನ ಎಂಬ ಮಾಜಿ ಸಿಎಂ ಹೇಳಿಕೆಗೆ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.
Vijaya Karnataka Web Murugesh Nirani


ಬದಾಮಿ ತಾಲೂಕಿನ ಕುಳಗೇರಿಯಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯ ಅವರು ವಿರೋಧ ಪಕ್ಷದಲ್ಲಿದ್ದಾರೆ ಹಾಗಾಗಿ ಹಾಗೆ ಹೇಳಲೇಬೇಕು. ಸಿದ್ದರಾಮಯ್ಯ ಹಿರಿಯರು ಅವರ ಬಗ್ಗೆ ಕಾಮೆಂಟ್ ಮಾಡೋವಷ್ಟು ದೊಡ್ಡವನಲ್ಲ ಎಂಬುದಾಗಿ ನಿರಾಣಿ ತಿಳಿಸಿದ್ದಾರೆ.

ಸಿಎಂ ಆಗುವ ಅವಕಾಶ ಸಿಕ್ರೆ ಯಾರು ಬೇಡ ಅಂತಾರೆ: ಮುರುಗೇಶ್‌ ನಿರಾಣಿ

ಕಾಂಗ್ರೆಸ್‌ನಲ್ಲಿ ಅಲ್ಲೊಬ್ಬರು, ಇಲ್ಲೊಬ್ಬರು ಇರೋರು ಪಕ್ಷ ಬಿಡ್ತಾರೆ ಎಂದು ಹೇಳಿದ ಅವರು ಉಪಚುನಾವಣೆಯಲ್ಲಿ 15ರಲ್ಲಿ ಬಿಜೆಪಿ 12 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದೇ ವೇಳೆ ಪಕ್ಷ ಏನೇ ಜವಾಬ್ದಾರಿ ಕೊಟ್ಟರೂ ನಿಭಾಯಿಸುವೆ. ಕೊಡದಿದ್ದರೂ ಸುಮ್ಮನಿರುತ್ತೇನೆ ಎಂಬುದಾಗಿ ನಿರಾಣಿ ಸ್ಪಷ್ಟನೆ ನೀಡಿದ್ದಾರೆ. ಸಚಿವ ಸ್ಥಾನ ಸಿಗದಿದ್ದಕ್ಕೆ ನನಗೆ ಯಾವುದೇ ಅಸಮಾಧಾನ ಇಲ್ಲ ಎಂಬುದಾಗಿ ಅವರು ಸಮಜಾಯಿಷಿ ನೀಡಿದ್ದಾರೆ.

ಮೊದಲ ಬಾರಿಗೆ ಆಯ್ಕೆಯಾದಾಗ ನನಗೆ ಪಕ್ಷ ಅವಕಾಶ ಕೊಟ್ಟಿದೆ. ಹೀಗಾಗಿ ಪಕ್ಷ ಏನೇ ನಿಧಾ೯ರ ಕೈಗೊಂಡರೂ ಅದಕ್ಕೆ ನಾನು ಬದ್ಧ ಎಂದು ಹೇಳಿರುವ ಅವರು ಟಿಪ್ಪು ಸುಲ್ತಾನ್‌ ಪಠ್ಯ ಕೈಬಿಡುವ ವಿಚಾರದಲ್ಲೂ ಪಕ್ಷ ತಗೆದುಕೊಳ್ಳುವ ನಿರ್ಧಾರಕ್ಕೆ ನನ್ನ ಸಮ್ಮತಿ ಇದೆ ಎಂದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ