ಆ್ಯಪ್ನಗರ

ವೀಣಾ ಏನು ಸಾಧನೆ ಮಾಡಿದ್ದಾರೆ ?

ಬಾಗಲಕೋಟ: 'ಗದ್ದಿಗೌಡರ ಸಾಧನೆ ಪ್ರಶ್ನಿಸುವುದಕ್ಕಿಂತ ಮೊದಲು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆಯಾಗಿ ವೀಣಾ ಅವರು ಯಾವ ಸಾಧನೆ ಮಾಡಿದ್ದಾರೆ ಎಂಬುದನ್ನು ತಿಳಿಸಲಿ' ಎಂದು ಶಾಸಕ ವೀರಣ್ಣ ಚರಂತಿಮಠ ಟೀಕಿಸಿದರು.

Vijaya Karnataka 31 Mar 2019, 5:00 am
ಬಾಗಲಕೋಟ: 'ಗದ್ದಿಗೌಡರ ಸಾಧನೆ ಪ್ರಶ್ನಿಸುವುದಕ್ಕಿಂತ ಮೊದಲು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆಯಾಗಿ ವೀಣಾ ಅವರು ಯಾವ ಸಾಧನೆ ಮಾಡಿದ್ದಾರೆ ಎಂಬುದನ್ನು ತಿಳಿಸಲಿ' ಎಂದು ಶಾಸಕ ವೀರಣ್ಣ ಚರಂತಿಮಠ ಟೀಕಿಸಿದರು.
Vijaya Karnataka Web what has veena kashapannavar accomplished
ವೀಣಾ ಏನು ಸಾಧನೆ ಮಾಡಿದ್ದಾರೆ ?


ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ವೀಣಾ ಅವರು ಅಧ್ಯಕ್ಷೆಯಾಗಿದ್ದ ಅವಧಿಯಲ್ಲಿ ಜಿಲ್ಲಾ ಪಂಚಾಯಿತಿ ಸಭೆಗಳು ನಡೆದಿಲ್ಲ. ಅವರ ಪತಿ ಕಾಂಗ್ರೆಸ್‌ನ ಮುಖಂಡರಾದ ಎಸ್‌.ಆರ್‌.ಪಾಟೀಲ, ಸಚಿವ ತಿಮ್ಮಾಪುರ ಅವರನ್ನು ಟೀಕಿಸಿ ನಂತರ ಬೇಷರತ್‌ ಕ್ಷಮೆ ಯಾಚಿಸಿದ್ದಾರೆ. ವಿಜಯಾನಂದ ಅವರ ತಂದೆ ಕೂಡ ಶಾಸಕರಾಗಿದ್ದರು, ಅವರು ಮೊದಲು ತಮ್ಮ ಸಾಧನೆ ಹೇಳಲಿ. ಗದ್ದಿಗೌಡರ ಅವರು ಬಾಗಲಕೋಟ-ಕುಡಚಿ ರೈಲ್ವೆ ಮಾರ್ಗ, ಗದಗ-ಹುಟಗಿ ಡಬ್ಲಿಂಗ್‌ ಮಾರ್ಗ, ರಾಷ್ಟ್ರೀಯ ಹೆದ್ದಾರಿ ಮೇಲ್ದರ್ಜೆಗೇರಿಸುವ ಯೋಜನೆ ಜಾರಿಗೊಳಿಸಿದ್ದಾರೆ. ಹೃದಯ ಯೋಜನೆ ಮೂಲಕ ಕೋಟ್ಯಂತರ ರೂ. ಅನುದಾನ ಒದಗಿಸಿದ್ದಾರೆ' ಎಂದು ಹೇಳಿದರು.

ಯಾವುದೇ ಅಪಸ್ವರವಿಲ್ಲ

'ಬಿಜೆಪಿಯಲ್ಲಿ ಟಿಕೆಟ್‌ ಹಂಚಿಕೆ ಕುರಿತು ಯಾವುದೇ ಅಸಮಾಧಾನವಿಲ್ಲ, ಜಿಲ್ಲೆಯಿಂದ ಹತ್ತಕ್ಕೂ ಹೆಚ್ಚು ಜನರು ಟಿಕೆಟ್‌ ಕೇಳಿದ್ದರು. ಪಕ್ಷದ ಹೈಕಮಾಂಡ್‌ ನಿರ್ಧಾರದಂತೆ ಗದ್ದಿಗೌಡರ ಅವರಿಗೆ ಟಿಕೆಟ್‌ ನೀಡಲಾಗಿದೆ. ಗದ್ದಿಗೌಡರ ಅವರು ಬೇಡ ಎಂದರೆ ಇನ್ನಿತರ ಆಕಾಂಕ್ಷಿಗಳು ಟಿಕೆಟ್‌ಗೆ ಆಕಾಂಕ್ಷಿಗಳಾಗಿರುವುದಾಗಿ ತಿಳಿಸಿದ್ದರು. ಬೆಂಗಳೂರಿನಲ್ಲಿ ತೇಜಸ್ವಿ ಸೂರ್ಯ ಅವರನ್ನು ಅಭ್ಯರ್ಥಿಯಾಗಿಸುವ ಕುರಿತು ಪಕ್ಷದ ಕೇಂದ್ರ ಸಮಿತಿ ನಿರ್ಧಾರ ಕೈಗೊಂಡಿದೆ. ಈ ಮೊದಲು ವಿಧಾನ ಪರಿಷತ್‌ ಸ್ಥಾನಕ್ಕೆ ಪೂಜಾರ ಅವರ ಹೆಸರು ಸೂಚಿಸಲಾಗಿತ್ತು. ಪಕ್ಷ ಅಧಿಕಾರ ಪಡೆದಾಗ ಸೂಕ್ತ ಸ್ಥಾನಮಾನ ನೀಡಲಾಗುತ್ತದೆ. ಬಿಜೆಪಿಯಲ್ಲಿ ಯಾರಿಂದಲೂ ಅಪಸ್ವರವಿಲ್ಲ, ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗೂಡಿ ಚುನಾವಣೆ ಪ್ರಚಾರ ನಡೆಸಲಿದ್ದಾರೆ' ಎಂದರು.

'ದೇಶದ ನಾನಾ ಕ್ಷೇತ್ರಗಳ ಗಣ್ಯರೊಂದಿಗೆ ಪ್ರಧಾನಿ ಮೋದಿ ಮಾ.31 ರಂದು ನೇರ ಸಂವಾದ ನಡೆಸಲಿದ್ದಾರೆ. ಬಿಜೆಪಿ ಹಾಗೂ ಮಿತ್ರ ಪಕ್ಷಗಳ ಮುಖಂಡರು, ವೈದ್ಯರು, ನ್ಯಾಯವಾದಿಗಳು, ಅಕೌಂಟಂಟ್‌ಗಳು, ಐಟಿ ಉದ್ಯೋಗಿಗಳು, ರೈತರು, ನಿವೃತ್ತ ಸೈನಿಕರು ಪ್ರಧಾನಿಯೊಂದಿಗೆ ಸಂವಾದ ನಡೆಸಲಿದ್ದಾರೆ. ಅಂದು ಬೆಳಗ್ಗೆ 11ಕ್ಕೆ 'ಮೈ ಭೀ ಚೌಕಿದಾರ್‌' ಕಾರ್ಯಕ್ರಮ ನಡೆಯಲಿದೆ. ಬಿಜೆಪಿಯಿಂದ ಕಾರ್ಯಕರ್ತರೊಂದಿಗೆ ಪ್ರಚಾರದ ಬಗ್ಗೆ ಸಂವಹನ ನಡೆಸಲು ಕಾಲ್‌ ಸೆಂಟರ್‌ ಆರಂಭಿಸಲಾಗಿದೆ' ಎಂದು ವಿವರಿಸಿದರು.

ವಿಧಾನಪರಿಷತ್‌ ಮಾಜಿ ಸದಸ್ಯ ನಾರಾಯಣಸಾ ಭಾಂಡಗೆ, ವಕ್ತಾರ ಜಯಂತ ಕುರುಂದವಾಡ, ಪ್ರಧಾನ ಕಾರ್ಯದರ್ಶಿ ರಾಜು ರೇವಣಕರ, ನಗರ ಘಟಕದ ಅಧ್ಯಕ್ಷ ರಾಜು ನಾಯ್ಕರ, ಮಾಧ್ಯಮ ಸಂಚಾಲಕ ಸಂಗಮೇಶ ಹಿತ್ತಲಮನಿ ಇದ್ದರು.

ಗೌಡರು ಸಕ್ಕರೆ ಗೊಂಬೆ

'ಗದ್ದಿಗೌಡರ ಅವರು ಕಾರ್ಯಕರ್ತರು, ಮುಖಂಡರು ಹಾಗೂ ಜನರಿಗೆ ಬೇಕಾದವರಾಗಿದ್ದಾರೆ. ಎಲ್ಲರೊಂದಿಗೆ ಬೆರೆಯುವ ಸ್ವಭಾವ ಹೊಂದಿರುವ ಅವರು ಪ್ರಚಾರ ಪ್ರಿಯರಲ್ಲ. ಸಕ್ಕರೆ ಗೊಂಬೆಯಂತೆ ಎಲ್ಲರೊಂದಿಗೆ ಒಂದಾಗುವ ಸ್ವಭಾವ ಹೊಂದಿದ್ದಾರೆ. ಏ.4ರಂದು ಗದ್ದಿಗೌಡರ ನಾಮಪತ್ರ ಸಲ್ಲಿಸಲಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಮುಖಂಡ ಕೆ.ಎಸ್‌.ಈಶ್ವರಪ್ಪ, ಶಾಸಕ ಶ್ರೀರಾಮುಲು ಸೇರಿದಂತೆ ಮುಖಂಡರು ಉಪಸ್ಥಿತರಿರಲಿದ್ದಾರೆ' ಎಂದು ಮಾಹಿತಿ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ