ಆ್ಯಪ್ನಗರ

ಆಸ್ಪತ್ರೆಗೆ ತೆರಳುವ ಮಾರ್ಗ ಮಧ್ಯ ಆ್ಯಂಬುಲೆನ್ಸ್‌ನಲ್ಲೇ ಗರ್ಭಿಣಿಗೆ ಹೆರಿಗೆ!

ಆಸ್ಪತ್ರೆಗೆ ತೆರಳುವ ಮಾರ್ಗದಲ್ಲಿ ಆ್ಯಂಬುಲೆನ್ಸ್‌ನಲ್ಲೇ ಗರ್ಭಿಣಿಯೋರ್ವಳು ಮಗುವಿಗೆ ಜನ್ಮ ನೀಡಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.​​​​​​​ ತಾಯಿ ಹಾಗೂ ಮಗುವಿನ ಆರೋಗ್ಯ ಸ್ಥಿರವಾಗಿದ್ದು, ಸದ್ಯ ಆಸ್ಪತ್ರೆಗೆ ದಾಖಲಿಸಿ

Vijaya Karnataka Web 14 May 2020, 11:15 pm
ಬಾಗಲಕೋಟೆ: ಆಸ್ಪತ್ರೆಗೆ ತೆರಳುವ ಮಾರ್ಗದಲ್ಲಿ ಆ್ಯಂಬುಲೆನ್ಸ್‌ನಲ್ಲೇ ಗರ್ಭಿಣಿಯೋರ್ವಳು ಮಗುವಿಗೆ ಜನ್ಮ ನೀಡಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.
Vijaya Karnataka Web Ambulance
ಆ್ಯಂಬುಲೆನ್ಸ್‌ನಲ್ಲೇ ಗರ್ಭಿಣಿಗೆ ಹೆರಿಗೆ


ಇಲ್ಲಿನ ಸಂಗಾಪುರ ಗ್ರಾಮದ ಸುರೇಖಾ ಎಂಬ ಗರ್ಭಿಣಿಯನ್ನು ಬಾಗಲಕೋಟೆಯ ಆಸ್ಪತ್ರೆಗೆ ಕರೆತರುತ್ತಿದ್ದಾಗ ಬೇವೂರು ಗ್ರಾಮದ ಬಳಿಯೇ ತೀವ್ರ ಹರಿಗೆ ನೋವು ಕಾಣಿಸಿಕೊಂಡಿದೆ.

ಬೆಂಗಳೂರಲ್ಲಿ ತಪ್ಪಿದ ಅಲೆದಾಟ, ಹೆರಿಗೆ ನೆರವಿಗೆ ಟೀಂ ವಾಣಿವಿಲಾಸ ಸದಾ ಸಿದ್ಧ

ಕೂಡಲೇ ಆ್ಯಂಬುಲೆನ್ಸ್‌ ನಿಲ್ಲಿಸಿದ ಚಾಲಕ ಸದಾನಂದ್ ಹಾಗೂ ತುರ್ತು ವೈದ್ಯಕೀಯ ಸಿಬ್ಬಂದಿ ನಿಂಗಣ್ಣ ಆ್ಯಂಬುಲೆನ್ಸ್‌ನಲ್ಲೇ ಹರಿಗೆ ಮಾಡಿಸಿದ್ದಾರೆ. ಆ್ಯಂಬುಲೆನ್ಸ್‌ನಲ್ಲೇ ಹೆಣ್ಣುಮಗುವಿಗೆ ಜನ್ಮ ನೀಡಿರುವ ಸುರೇಖಾಳನ್ನು ಬಾಗಲಕೋಟೆಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಾಯಿ ಹಾಗೂ ಮಗುವಿನ ಆರೋಗ್ಯ ಸ್ಥಿರವಾಗಿದ್ದು, ಚಾಲಕ ಸದಾನಂದ್ ಹಾಗೂ ತುರ್ತು ವೈದ್ಯಕೀಯ ಸಿಬ್ಬಂದಿ ನಿಂಗಣ್ಣ ಅರ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ