ಆ್ಯಪ್ನಗರ

ನೀರಾವರಿ ಭೂಮಿಯಾಗಿಸಲು ಪ್ರಸ್ತಾವನೆ ಸಲ್ಲಿಸಿ

ಬೆಳಗಾವಿ : ಮುಂಬರುವ 5 ವರ್ಷಗಳಲ್ಲಿ ಜಿಲ್ಲೆಯಲ್ಲಿರುವ ಮಳೆಯಾಶ್ರಿತ ಕೃಷಿ ಭೂಮಿಗಳನ್ನು ನೀರಾವರಿ ಭೂಮಿಯಾಗಿ ಪರಿವರ್ತಿಸಲು ಕೃಷಿ ಇಲಾಖೆಯ ನಿವೃತ್ತ ನುರಿತ ಅಧಿಕಾರಿಗಳಿಂದ ಸಲಹೆ ಪಡೆದು ಮಾ.30ರೊಳಗೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎನ್.ಜಯರಾಂ ಸೂಚಿಸಿದರು.

ವಿಕ ಸುದ್ದಿಲೋಕ 5 Mar 2016, 4:58 am
ಬೆಳಗಾವಿ : ಮುಂಬರುವ 5 ವರ್ಷಗಳಲ್ಲಿ ಜಿಲ್ಲೆಯಲ್ಲಿರುವ ಮಳೆಯಾಶ್ರಿತ ಕೃಷಿ ಭೂಮಿಗಳನ್ನು ನೀರಾವರಿ ಭೂಮಿಯಾಗಿ ಪರಿವರ್ತಿಸಲು ಕೃಷಿ ಇಲಾಖೆಯ ನಿವೃತ್ತ ನುರಿತ ಅಧಿಕಾರಿಗಳಿಂದ ಸಲಹೆ ಪಡೆದು ಮಾ.30ರೊಳಗೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎನ್.ಜಯರಾಂ ಸೂಚಿಸಿದರು.
Vijaya Karnataka Web
ನೀರಾವರಿ ಭೂಮಿಯಾಗಿಸಲು ಪ್ರಸ್ತಾವನೆ ಸಲ್ಲಿಸಿ


ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೇಂದ್ರ ಸರಕಾರದ ಈ ಯೋಜನೆ ರೈತರಿಗೆ ಅನುಕೂಲವಾಗಲಿದೆ. ಅಧಿಕಾರಿಗಳು ಸ್ಥಳೀಯ ಜನಪ್ರತಿನಿಧಿಗಳಿಗೆ ಸಿಂಚಾಯಿ ಯೋಜನೆಯ ಬಗ್ಗೆ ಮಾಹಿತಿ ನೀಡುವ ಜತೆಗೆ ಅವರಿಂದ ಅಗತ್ಯ ಸಲಹೆ ಪಡೆಯಬೇಕು ಎಂದು ಹೇಳಿದರು.

ರೈತರಿಗಾಗಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿವೆ. ಈ ಯೋಜನೆಗಳು ಕೇವಲ ಕಚೇರಿ ಕಡತಗಳಿಗೆ ಸೀಮಿತವಾಗದೆ, ರೈತರಿಗೆ ತಲುಪುವಂತಾಗಬೇಕು. ಗ್ರಾಮಗಳಿಗೆ ಭೇಟಿ ನೀಡಿ ಜಮೀನಿನ ಸ್ಥಿತಿಗತಿ ಬಗ್ಗೆ ಮಾಹಿತಿ ಕಲೆ ಹಾಕುವಲ್ಲಿ ಸಣ್ಣ ನೀರಾವರಿ ಇಲಾಖೆ, ಅರಣ್ಯ ಇಲಾಖೆ, ಕೃಷಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳ ಜವಾಬ್ದಾರಿ ಮಹತ್ವದ್ದಾಗಿದೆ ಎಂದರು.

ಸಭೆಯಲ್ಲಿ ಜಿಪಂ ಸಿಇಒ ಡಾ.ಬಗಾದಿ ಗೌತಮ್, ಕೃಷಿ ಇಲಾಖೆ ಉಪನಿರ್ದೇಶಕ ವೆಂಕಟರಮಣ ರೆಡ್ಡಿ ಪಾಟೀಲ ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ