ಆ್ಯಪ್ನಗರ

ಜತ್ತ-ಜಾಂಬೋಟಿ ಹೆದ್ದಾರಿ ನಿರ್ಮಾಣಕ್ಕೆ ಮಂಜೂರಾತಿ

ಅಥಣಿ: ಜತ್ತ-ಜಾಂಬೋಟಿ ರಾಜ್ಯ ಹೆದ್ದಾರಿ ನಿರ್ಮಾಣಕ್ಕೆ ಸರಕಾರದಿಂದ ಆಡಳಿತಾತ್ಮಕ ಮಂಜೂರಾತಿ ದೊರಕಿದ್ದು ಶೀಘ್ರ 300 ಕೋಟಿ ರೂ. ಅನುದಾನದಲ್ಲಿ ಕಾಮಗಾರಿ ಆರಂಭವಾಗಲಿದೆ. ಅಥಣಿ ಪಟ್ಟಣದ ಮಧ್ಯ ಭಾಗದಲ್ಲಿಯೇ ಈ ರಸ್ತೆ ನಿರ್ಮಾಣಗೊಳ್ಳಲಿದೆ ಎಂದು ಶಾಸಕ ಲಕ್ಷ್ಮಣ ಸವದಿ ತಿಳಿಸಿದರು.

ವಿಕ ಸುದ್ದಿಲೋಕ 10 Mar 2016, 3:00 am
ಶಾಸಕ ಲಕ್ಷ್ಮಣ ಸವದಿ ಮಾಹಿತಿ - ಅಥಣಿ ಪಟ್ಟಣದಲ್ಲಿ ನಾನಾ ಕಾಮಗಾರಿಗಳಿಗೆ ಚಾಲನೆ
Vijaya Karnataka Web
ಜತ್ತ-ಜಾಂಬೋಟಿ ಹೆದ್ದಾರಿ ನಿರ್ಮಾಣಕ್ಕೆ ಮಂಜೂರಾತಿ


ಅಥಣಿ: ಜತ್ತ-ಜಾಂಬೋಟಿ ರಾಜ್ಯ ಹೆದ್ದಾರಿ ನಿರ್ಮಾಣಕ್ಕೆ ಸರಕಾರದಿಂದ ಆಡಳಿತಾತ್ಮಕ ಮಂಜೂರಾತಿ ದೊರಕಿದ್ದು ಶೀಘ್ರ 300 ಕೋಟಿ ರೂ. ಅನುದಾನದಲ್ಲಿ ಕಾಮಗಾರಿ ಆರಂಭವಾಗಲಿದೆ. ಅಥಣಿ ಪಟ್ಟಣದ ಮಧ್ಯ ಭಾಗದಲ್ಲಿಯೇ ಈ ರಸ್ತೆ ನಿರ್ಮಾಣಗೊಳ್ಳಲಿದೆ ಎಂದು ಶಾಸಕ ಲಕ್ಷ್ಮಣ ಸವದಿ ತಿಳಿಸಿದರು.

ಅವರು ಪುರಸಭಾ ಸಭಾ ಭವನದಲ್ಲಿ 2015-16ನೇ ಸಾಲಿನ ಹಣಕಾಸು ಯೋಜನೆ ಮತ್ತು ಪುರಸಭೆ ನಿಧಿಯಲ್ಲಿ 2.22 ಕೋಟಿ ರೂ. ಅನುದಾನದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು. ಕೃಷ್ಣಾ ನದಿಯಲ್ಲಿ ನೀರು ಬತ್ತಿದ ಪರಿಣಾಮ ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಬಹುದಾದ್ದರಿಂದ ಕುಡಿಯುವ ನೀರು ಪೂರೈಸುವ ವ್ಯವಸ್ಥೆ ಮಾಡಬೇಕು. ಪುರಸಭೆ ಸದಸ್ಯರು ಪಕ್ಷಭೇದ ಮರೆತು ಪಟ್ಟಣದ ಜನರಿಗೆ ಮೂಲ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಪುರಸಭೆ ಅಧ್ಯಕ್ಷ ದಿಲೀಪ ಲೋನಾರೆ ಮಾತನಾಡಿ, ನಾನಾ ಕಾಮಗಾರಿಗಳ ಮಾಹಿತಿ ನೀಡಿದರು. ಸಮಾರಂಭದಲ್ಲಿ ದಿಲೀಪ ಲೋನಾರೆ ಅಧ್ಯಕ್ಷತೆಯಲ್ಲಿ ನಡೆದ ಅಭಿವನದ್ಧಿ ಕಾಮಗಾರಿಗಳ ಕಿರುಮಾಹಿತಿ ಪುಸ್ತಕವನ್ನು ಶಾಸಕ ಲಕ್ಷ್ಮಣ ಸವದಿ ಬಿಡುಗಡೆ ಮಾಡಿದರು. ಫಲಾನುಭವಿಗಳಿಗೆ ಅಡುಗೆ ಅನಿಲ, ಹೊಲಿಗೆ ಯಂತ್ರ ಹಾಗೂ ವೈಯಕ್ತಿಕ ಶೌಚಾಲಯ ನಿರ್ಮಾಣದ ಪ್ರೋತ್ಸಾಹ ಧನದ ಚೆಕ್ ವಿತರಿಸಲಾಯಿತು.

ಪುರಸಭೆ ಉಪಾಧ್ಯಕ್ಷೆ ಮಹಾದೇವಿ ಪರಾಂಜಪೆ, ಸ್ಥಾಯಿ ಸಮಿತಿ ಅಧ್ಯಕ್ಷ ಭರತಸಿಂಗ ರಜಪೂತ, ಆನಂದ ಟೊಣಪಿ, ರಾವಸಾಬ ಐಹೊಳೆ, ರಾಜು ಬುಲಬುಲೆ, ಪುಷ್ಪಾ ಚೌಗಲಾ, ವಿಲಿನರಾಜ ಯಳಮಲ್ಲೆ ಸೇರಿದಂತೆ ಎಲ್ಲ ಸದಸ್ಯರು ಉಪಸ್ಥಿತರಿದ್ದರು. ಮುಖ್ಯಾಧಿಕಾರಿ ಡಿ.ಎಸ್. ಹರ್ದಿ ಸ್ವಾಗತಿಸಿದರು. ವಿಜಯ ಹುದ್ದಾರ ನಿರೂಪಿಸಿದರು.

ಆರ್ಥಿಕವಾಗಿ ಹಿಂದುಳಿದ ಹೆಣ್ಣು ಮಕ್ಕಳಿಗಾಗಿ ಅಥಣಿ ಪಟ್ಟಣದಲ್ಲಿ ವಸತಿ ಶಾಲೆಗೆ 2 ಕೋಟಿ ರೂ. ಅನುದಾನ ಮಂಜೂರಾಗಿದೆ. ಪುರಸಭೆ ವತಿಯಿಂದ ವಸತಿ ಶಾಲೆಗೆ ಸ್ಥಳ ನೀಡಬೇಕು. - ಲಕ್ಷ್ಮಣ ಸವದಿ

ಫೋಟೊ ಶೀರ್ಷಿಕೆ- (9ಅಥಣಿ2) - ಅಥಣಿಯಲ್ಲಿ ಪುರಸಭೆ ನಿಧಿಯಲ್ಲಿ ಆರ್ಥಿಕವಾಗಿ ಹಿಂದುಳಿದ ಮಹಿಳಾ ಫಲಾನುಭವಿಗಳಿಗೆ ಶಾಸಕ ಲಕ್ಷ್ಮಮ ಸವದಿ ಹೊಲಿಗೆ ಯಂತ್ರ ವಿತರಿಸಿದರು.

ಜತ್ತ-ಜಾಂಬೋಟಿ ಹೆದ್ದಾರಿ ನಿರ್ಮಾಣಕ್ಕೆ ಮಂಜೂರಾತಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ