ಆ್ಯಪ್ನಗರ

ಕೃಷ್ಣೆಗೆ ಬಂತು ಮಹಾರಾಷ್ಟ್ರದ ನೀರು!

ಬಾವನ ಸೌಂದತ್ತಿ :ಅಥಣಿ, ರಾಯಬಾಗ, ಚಿಕ್ಕೋಡಿ ತಾಲೂಕುಗಳ ಜನರ ಜೀವನಾಡಿ ಕೃಷ್ಣಾ ನದಿಗೆ ಮಹಾರಾಷ್ಟ್ರ ಸರಕಾರ ನೀರು ಹರಿಸಿದ್ದು, ನದಿ ಪಾತ್ರದ ಜನರಲ್ಲಿ ಸಂತಸ ಮೂಡಿಸಿದೆ

ವಿಕ ಸುದ್ದಿಲೋಕ 10 Mar 2016, 4:02 am
ಬಾವನ ಸೌಂದತ್ತಿ :ಅಥಣಿ, ರಾಯಬಾಗ, ಚಿಕ್ಕೋಡಿ ತಾಲೂಕುಗಳ ಜನರ ಜೀವನಾಡಿ ಕೃಷ್ಣಾ ನದಿಗೆ ಮಹಾರಾಷ್ಟ್ರ ಸರಕಾರ ನೀರು ಹರಿಸಿದ್ದು, ನದಿ ಪಾತ್ರದ ಜನರಲ್ಲಿ ಸಂತಸ ಮೂಡಿಸಿದೆ.
Vijaya Karnataka Web
ಕೃಷ್ಣೆಗೆ ಬಂತು ಮಹಾರಾಷ್ಟ್ರದ ನೀರು!


ಮಳೆ ಇಲ್ಲದೆ ಬರಗಾಲ ಆವರಿಸಿದ್ದ ಕಾರಣ ಕೃಷ್ಣಾ ನದಿ ಬತ್ತಿಹೋಗಿತ್ತು. ಜನ, ಜಾನುವಾರುಗಳಿಗೆ ಕುಡಿಯಲು ನೀರಿಲ್ಲದೆ, ರೈತರು ಬೆಳೆದ ಬೆಳೆಗಳೂ ಒಣಗಿ ಹೋಗಿದ್ದವು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹಾರಾಷ್ಟ್ರ ಸರಕಾರಕ್ಕೆ ಪತ್ರ ಬರೆದು ಕೃಷ್ಣಾ ನದಿಗೆ ನೀರು ಹರಿಸುವಂತೆ ಕೋರಿದ್ದರು. ಅಲ್ಲದೆ, ಸಂಸದ ಪ್ರಕಾಶ ಹುಕ್ಕೇರಿ ಹಾಗೂ ಲೋಕಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ಈ ಸಂಬಂಧ ಮನವಿ ಸಲ್ಲಿಸಿದ್ದರು. ಈ ಪ್ರಯತ್ನಗಳಿಗೆ ಸ್ಪಂದಿಸಿರುವ ಮಹಾ ಸರಕಾರ ರಾಜಾಪುರ ಬ್ಯಾರೇಜ್‌ನಿಂದ ನದಿಗೆ ನೀರು ಹರಿಸಿದೆ ಎಂದು ರಾಯಬಾಗ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈರಗೌಡ ಪಾಟೀಲ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ