ಆ್ಯಪ್ನಗರ

ಏಪ್ರಿಲ್‌ ಮೊದಲ ವಾರ ಕೃಷ್ಣೆಗೆ 2 ಟಿಎಂಸಿ ನೀರು

ವಿಕ ಸುದ್ದಿಲೋಕ 11 Mar 2017, 8:38 pm

ಅಥಣಿ: ಏಪ್ರಿಲ್‌ ಮೊದಲ ವಾರ ಕೃಷ್ಣಾ ನದಿಗೆ 2 ಟಿಎಂಸಿ ನೀರು ಬಿಡುಗಡೆ ಮಾಡುವ ಸಂಬಂಧ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅಲ್ಲಿನ ನೀರಾವರಿ ಇಲಾಖೆ ಕಾರ್ಯದರ್ಶಿಗೆ ಅಧಿಕೃತ ಆದೇಶ ನೀಡಿದ್ದಾರೆ.

ಕೃಷ್ಣಾ ನದಿಯಲ್ಲಿ ನೀರಿನ ಮಟ್ಟ ದಿನದಿಂದ ದಿನಕ್ಕೆ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿಯ ಬಿಜೆಪಿ ಶಾಸಕರ ಮತ್ತು ಮುಖಂಡರ ನಿಯೋಗ ಮಹಾ ಸಿಎಂ ದೇವೇಂದ್ರ ಫಡ್ನವೀಸ್‌ ಅವರನ್ನು ಮುಂಬಯಿಯಲ್ಲಿ ಭೇಟಿ ಮಾಡಿ, ಇಲ್ಲಿಯ ವಸ್ತುಸ್ಥಿತಿ ಕುರಿತು ಸುದೀರ್ಘ ಮಾಹಿತಿ ನೀಡಿ, ನೀರು ಬಿಡುವಂತೆ ಕೋರಿತ್ತು. ಮನವಿಗೆ ತಕ್ಷ ಣ ಸ್ಪಂದಿಸಿದ ಫಡ್ನವೀಸ್‌ ಕೊಯ್ನಾ ಜಲಾಶಯದಿಂದ ನೀರು ಬಿಡುಗಡೆಗೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ನಿಯೋಗದಲ್ಲಿದ್ದ ರಾಜ್ಯಸಭಾ ಸದಸ್ಯ ಡಾ. ಪ್ರಭಾಕರ ಕೋರೆ ಹಾಗೂ ಶಾಸಕ ಲಕ್ಷ ್ಮಣ ಸವದಿ ದೂರವಾಣಿ ಮೂಲಕ ತಿಳಿಸಿದ್ದಾರೆ.

ಕಳೆದ ವರ್ಷವೂ ಭೀಕರ ಬರಗಾಲದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರು ಇದೇ ನಿಯೋಗದ ಮನವಿಗೆ ಸ್ಪಂದಿಸಿ ಕೃಷ್ಣಾ ನದಿಗೆ ನೀರು ಹರಿಸುವ ಮೂಲಕ ಈ ಭಾಗದ ಜನರಿಗೆ ಅನುಕೂಲ ಕಲ್ಪಿಸಿದ್ದರು. ಈ ಬಾರಿಯೂ ನಿಯೋಗದ ಮನವಿಗೆ ಅವರು ಸ್ಪಂದಿಸಿದ್ದಾರೆ ಎಂದು ಡಾ. ಪ್ರಭಾಕರ ಕೋರೆ ತಿಳಿಸಿದರು.

Vijaya Karnataka Web
ಏಪ್ರಿಲ್‌ ಮೊದಲ ವಾರ ಕೃಷ್ಣೆಗೆ 2 ಟಿಎಂಸಿ ನೀರು


ಧಾರವಾಡ ಸಂಸದ ಪ್ರಹ್ಲಾದ ಜೋಶಿ, ವಿಧಾನ ಪರಿಷತ್‌ ಸದಸ್ಯ ಮಹಾಂತೇಶ ಕವಟಗಿಮಠ, ರಾಯಬಾಗ ಶಾಸಕ ದುರ್ಯೋಧನ ಐಹೊಳೆ, ಕಾಗವಾಡ ಶಾಸಕ ರಾಜು ಕಾಗೆ, ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ, ಬಾಗಲಕೋಟ ಸಂಸದ ಪಿ.ಸಿ.ಗದ್ದಿಗೌಡರ, ಹಾತಕಣಗಲೆ ಸಂಸದ ರಾಜು ಶೆಟ್ಟಿ, ಸಾಂಗಲಿ ಸಂಸದ ಸಂಜಯ ಕಾಕಾ ಪಾಟೀಲ, ಶಾಸಕರಾದ ಸುರೇಶ ಹಳವಣಕರ್‌, ಅಮಲ ಮಹಾಡಿಕ, ಸಹಕಾರಿ ಧುರೀಣ ಅಣ್ಣಾಸಾಹೇಬ ಜೊಲ್ಲೆ ಮೊದಲಾದವರು ನಿಯೋಗದಲ್ಲಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ