ಬೆಳಗಾವಿ: ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್)ಯನ್ನು ತಕ್ಷಣ ರದ್ದುಪಡಿಸಿ ಅದರ ಮುಖಂಡರನ್ನು ಗಡಿಪಾರು ಮಾಡಲು ಹಾಗೂ ಬೆಳಗಾವಿ ಮಹಾನಗರ ಪಾಲಿಕೆಯನ್ನು ಕೂಡಲೇ ಸೂಪರ್ಸೀಡ್ ಮಾಡಲು ಆಗ್ರಹಿಸಿ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ ಅವರ ನೇತೃತ್ವದಲ್ಲಿ ಮೇ 31ರಂದು ಬೆಳಗ್ಗೆ 11ಕ್ಕೆ ಜಿಲ್ಲಾಧಿಕಾರಿ ಕಾರಾರಯಲಯದ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಪ್ರತಿಭಟನೆಯಲ್ಲಿ ಡಾ.ರಾಜ್ಕುಮಾರ ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷ ಸಾ.ರಾ.ಗೋವಿಂದು, ಕನ್ನಡ ಸೇನೆ ರಾಜ್ಯಾಧ್ಯಕ್ಷ ಕೆ.ಆರ್.ಕುಮಾರ, ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಶಿವರಾಮೇಗೌಡ, ಪ್ರವೀಣ ಶೆಟ್ಟಿ, ಕನ್ನಡ ಜಾಗೃತಿ ಸೇನೆ ಅಧ್ಯಕ್ಷ ಮಂಜುನಾಥ ದೇವ್, ಎಚ್.ವಿ.ಗಿರೀಶ ಗೌಡ ಮುಂತಾದವರು ಭಾಗವಹಿಸಲಿದ್ದಾರೆ ಎಂದು ವಾಟಾಳ್ ನಾಗರಾಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಂಇಎಸ್ ರದ್ದತಿಗೆ ಆಗ್ರಹಿಸಿ ಇಂದು ವಾಟಾಳ್ ಪ್ರತಿಭಟನೆ
ವಿಕ ಸುದ್ದಿಲೋಕ 31 May 2017, 2:00 am