ಆ್ಯಪ್ನಗರ

ಪ್ರತಿ‌ ಟನ್‌ ಕಬ್ಬಿಗೆ ₹2500 ಬೆಲೆ ನಿಗದಿ: ಹುಕ್ಕೇರಿ ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆ ಘೋಷಣೆ

ಹುಕ್ಕೇರಿಯ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆಯಿಂದ ಈ ವರ್ಷ ಪ್ರತಿ ಮೆ. ಟನ್‌ ಕಬ್ಬಿಗೆ 2500 ರೂ. ಘೋಷಣೆ ಮಾಡಲಾಗಿದ್ದು, ಶೀಘ್ರವೇ ಕಬ್ಬಿನ ಹಣವನ್ನು ರೈತರ ಖಾತೆಗೆ ಜಮೆ ಮಾಡಲಾಗುತ್ತದೆ ಎಂದು ಕಾರ್ಖಾನೆ ಅಧ್ಯಕ್ಷ ನಿಖಿಲ್‌ ಕತ್ತಿ ಹೇಳಿದರು.

Vijaya Karnataka Web 16 Dec 2020, 8:19 pm
ಹುಕ್ಕೇರಿ: ಶ್ರೀ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆಯಿಂದ ಈ ವರ್ಷ ಪ್ರತಿ ಮೆ. ಟನ್‌ ಕಬ್ಬಿಗೆ 2500 ರೂ. ಘೋಷಣೆ ಮಾಡಲಾಗಿದ್ದು, ಶೀಘ್ರವೇ ಕಬ್ಬಿನ ಹಣವನ್ನು ರೈತರ ಖಾತೆಗೆ ಜಮೆ ಮಾಡಲಾಗುತ್ತದೆ ಎಂದು ಕಾರ್ಖಾನೆ ಅಧ್ಯಕ್ಷ ನಿಖಿಲ್‌ ಕತ್ತಿ ಹೇಳಿದರು.
Vijaya Karnataka Web sugar cane
ಸಾಂದರ್ಭಿಕ ಚಿತ್ರ


ಅವರು ಕರ್ಖಾನೆ ಆವರಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾರ್ಖಾನೆ 45 ದಿನಗಳಲ್ಲಿ 3,70,780 ಮೆ. ಟನ್‌ ಕಬ್ಬು ನುರಿಸಿ, 3,86,500 ಸಕ್ಕರೆ ಉತ್ಪಾದನೆ ಮಾಡಿದೆ. ಈ ವರ್ಷ ಉತ್ತಮ ಮಳೆಯಾಗಿದ್ದರಿಂದ ಕಾರ್ಖಾನೆ ಕಾರ್ಯಕ್ಷೇತ್ರದಲ್ಲಿ ಕಬ್ಬಿನ ಬೆಳೆ ಹೆಚ್ಚಾಗಿದ್ದು, ಮಾರ್ಚ್ ತಿಂಗಳವರೆಗೆ ಕಾರ್ಯಾಚರಣೆ ಮಾಡುವ ನಿರೀಕ್ಷೆಯಲ್ಲಿದ್ದೇವೆ. ಆದ್ದರಿಂದ ಬೆಳೆಗಾರರು ತಾವು ಬೆಳೆದ ಕಬ್ಬನ್ನು ಕಾರ್ಖಾನೆಗೆ ಕಳುಹಿಸಿ ಸಹಕರಿಸಬೇಕು ಎಂದು ಹೇಳಿದರು.

ಕಬ್ಬು ಬೆಳೆಗಾರರಿಂದ ಸುಲಿಗೆ ಮಾಡುವ ದಂಧೆ ಶುರು; ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ ರೈತರು..!

ನಿರ್ದೇಶಕರಾದ ಶಿವನಾಯಿಕ ನಾಯಿಕ, ಪ್ರಲ್ಹಾದ ಪಾಟೀಲ, ಬಾಬಾಸಾಹೇಬ ಅರಬೋಳೆ, ರಾಜಕುಮಾರ ಪಾಟೀಲ, ಉದಯಕುಮಾರ ದೇಸಾಯಿ, ಸುರೇಶ ಬೆಲ್ಲದ, ಬಸವರಾಜ ಕಲ್ಲಟ್ಟಿ ಹಾಗೂ ವ್ಯವಸ್ಥಾಪಕ ನಿರ್ದೇಶಕ ಡಾ.ಎ.ಎಂ.ಪಾಟೀಲ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ