ಆ್ಯಪ್ನಗರ

ಬೆಳಗಾವಿಯಲ್ಲಿ ಬಸವೇಶ್ವರ ಭಾವಚಿತ್ರಕ್ಕೆ ಮಸಿ ಬಳಿದ ಪ್ರಕರಣ; ಮೂವರು ಕಿಡಿಗೇಡಿಗಳ ಬಂಧನ

ಪ್ರಕರಣದ ತನಿಖೆ ಆರಂಭಿಸಿದ್ದ ಪೊಲೀಸರು ಕಿಡಿಗೇಡಿಗಳ ಪತ್ತೆಗಾಗಿ ಬಲೆ ಬೀಸಿದ್ದರು. ಇದೀಗ ಕೊನೆಗೂ ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೊದಲೇ ಅನಗೊಳದಲ್ಲಿ ಸಂಗೊಳ್ಳಿ ರಾಯಣ್ಣನ ಮೂರ್ತಿ ಭಗ್ನಗೊಂಡ ಪ್ರಕರಣದಿಂದ ಕೆರಳಿದ್ದ ಕನ್ನಡಿಗರು ಹಲಸಿ ಘಟನೆಯಿಂದ ಮತ್ತಷ್ಟು ಆಕ್ರೋಶಗೊಂಡಿದ್ದರು. ಆರೋಪಿಗಳನ್ನು ಬಂಧಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿತ್ತು.

Vijaya Karnataka Web 21 Dec 2021, 10:52 am
ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲೂಕಿನ ಹಲಸಿ ಗ್ರಾಮದಲ್ಲಿ ಬಸವೇಶ್ವರ ಭಾವಚಿತ್ರಕ್ಕೆ ಮಸಿ ಬಳಿದು ಕನ್ನಡ ಬಾವುಟವನ್ನು ಕಿತ್ತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ.
Vijaya Karnataka Web belagavi basaveshwar


ಹಲಸಿ ಗ್ರಾಮದಲ್ಲಿ ಬಸವೇಶ್ವರ ಭಾವಚಿತ್ರಕ್ಕೆ ಮಸಿ ಬಳಿದು ಕನ್ನಡ ಭಾವುಟ ಕಿತ್ತ ಪ್ರಕರಣದ ಆರೋಪಿಗಳಾದ ಸಚಿನ್ ಒಮಣ್ಣ ಗುರವ್, ಸಂಜು ಒಮಣ್ಣ ಗುರವ್ ಮತ್ತು ಗಣೇಶ್ ಪಡ್ನೇಕರ್ ಎಂಬ ಮೂವರನ್ನು ಬಂಧಿಸಲಾಗಿದೆ. ಹಲಸಿಯ ಬಸವೇಶ್ವರ ವೃತ್ತದ ಬಸವೇಶ್ವರ ಭಾವಚಿತ್ರಕ್ಕೆ ಸಗಣಿ ಎರಚಿದ್ದ ಆರೋಪಿಗಳು ಬಳಿಕ ಗ್ರಾಮ ಪಂಚಾಯತ್ ಆವರಣದಲ್ಲಿದ್ದ ಕನ್ನಡ ಬಾವುಟ ಕಿತ್ತು ವಿಕೃತಿ ಪ್ರದರ್ಶಿಸಿದ್ದರು. ಈ ಕುರಿತು ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ರಾಯಣ್ಣ ಮೂರ್ತಿ ಧ್ವಂಸಗೊಳಿಸಿದ ಬೆನ್ನಲ್ಲೇ ಕ್ರಾಂತಿವೀರನ ಮತ್ತೊಂದು ಚಿತ್ರಕ್ಕೆ ಬಣ್ಣ ಎರಚಿದ ಕಿಡಿಗೇಡಿಗಳು!
ಪ್ರಕರಣದ ತನಿಖೆ ಆರಂಭಿಸಿದ್ದ ಪೊಲೀಸರು ಕಿಡಿಗೇಡಿಗಳ ಪತ್ತೆಗಾಗಿ ಬಲೆ ಬೀಸಿದ್ದರು. ಇದೀಗ ಕೊನೆಗೂ ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೊದಲೇ ಅನಗೊಳದಲ್ಲಿ ಸಂಗೊಳ್ಳಿ ರಾಯಣ್ಣನ ಮೂರ್ತಿ ಭಗ್ನಗೊಂಡ ಪ್ರಕರಣದಿಂದ ಕೆರಳಿದ್ದ ಕನ್ನಡಿಗರು ಹಲಸಿ ಘಟನೆಯಿಂದ ಮತ್ತಷ್ಟು ಆಕ್ರೋಶಗೊಂಡಿದ್ದರು. ಆರೋಪಿಗಳನ್ನು ಬಂಧಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿತ್ತು.
ಕನ್ನಡ ಧ್ವಜ ಸುಟ್ಟ ಬೆನ್ನಲ್ಲೇ ಮತ್ತೊಂದು ಕೃತ್ಯ; ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನ!
ಒಂದೆಡೆ ಬೆಳಗಾವಿ ಗಡಿ ಭಾಗದಲ್ಲಿ ಎಂಇಎಸ್ ಪುಂಡರು ನಡೆಸುತ್ತಿರುವ ದುಷ್ಕೃತ್ಯಗಳಿಂದಾಗಿ ಗಡಿ ಜಿಲ್ಲೆ ಉದ್ವಿಗ್ನ ಪರಿಸ್ಥಿತಿಯಲ್ಲಿದೆ. ಈ ಮಧ್ಯೆ ಬಸವೇಶ್ವರ ಚಿತ್ರಕ್ಕೆ ಮಸಿ ಬಳಿದಿರೋದು ಕನ್ನಡಿಗರ ತಾಳ್ಮೆಯನ್ನು ಕೆದಕುವಂತೆ ಮಾಡಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ