ಆ್ಯಪ್ನಗರ

ದಾಖಲೆ ಇಲ್ಲದ 30 ಕೆಜಿ ಬೆಳ್ಳಿ ಆಭರಣ ಜಪ್ತಿ

ದಾಖಲೆ ಇಲ್ಲದೆ ಸಾಗಿಸಲಾಗುತ್ತಿದ್ದ 30 ಕೆಜಿ ಬೆಳ್ಳಿ ಆಭರಣಗಳನ್ನು ಮಂಗಳವಾರ ತಡ ರಾತ್ರಿ ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಚೆಕ್‌ ಪೋಸ್ಟ್‌ನಲ್ಲಿ ನಿಪ್ಪಾಣಿ

Vijaya Karnataka 14 Mar 2019, 5:00 am
ಬೆಳಗಾವಿ: ದಾಖಲೆ ಇಲ್ಲದೆ ಸಾಗಿಸಲಾಗುತ್ತಿದ್ದ 30 ಕೆಜಿ ಬೆಳ್ಳಿ ಆಭರಣಗಳನ್ನು ಮಂಗಳವಾರ ತಡ ರಾತ್ರಿ ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಚೆಕ್‌ ಪೋಸ್ಟ್‌ನಲ್ಲಿ ನಿಪ್ಪಾಣಿ ಗ್ರಾಮೀಣ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.
Vijaya Karnataka Web BLG-1303-2-52-13 NIPPANI1


ಈ ಸಂಬಂಧ, ರಾಣೆಬೆನ್ನೂರಿನ ಚಿನ್ನಾಭರಣ ವ್ಯಾಪಾರಿ ರಾಜೇಂದ್ರಕುಮಾರ್‌ ಜೈನ್‌ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಚುನಾವಣಾ ನೀತಿ ಸಂಹಿತೆ ಜಾರಿ ನಂತರ ಜಿಲ್ಲೆಯಲ್ಲಿ ದಾಖಲಾದ ಭಾರಿ ಮೊತ್ತದ ಮೊದಲ ಪ್ರಕರಣ ಇದಾಗಿದೆ.

''ರಾಜೇಂದ್ರಕುಮಾರ್‌ ಜೈನ್‌ ಕುಟುಂಬದ ಸದಸ್ಯರೊಂದಿಗೆ ಕೊಲ್ಲಾಪುರದಿಂದ ಕೊಗನೊಳ್ಳಿ ಚೆಕ್‌ಪೋಸ್ಟ್‌ ಮಾರ್ಗವಾಗಿ ಬೆಳಗಾವಿ ಕಡೆ ಆಗಮಿಸುತ್ತಿದ್ದಾಗ ಅವರ ಕಾರನ್ನು ಪರಿಶೀಲಿಸಲಾಯಿತು. ಈ ವೇಳೆ ಕಾರಿನಲ್ಲಿ ಬೆಳ್ಳಿ ಆಭರಣಗಳು ಪತ್ತೆಯಾಗಿವೆ. ಅವರನ್ನು ವಿಚಾರಣೆಗೆ ಒಳಪಡಿಸಿದಾಗ 11.82 ಲಕ್ಷ ರೂ.ಮೌಲ್ಯದ 30 ಕೆಜಿ ಬೆಳ್ಳಿ ಆಭರಣಗಳನ್ನು ಕೊಲ್ಲಾಪುರದಿಂದ ಖರೀದಿ ಮಾಡಿ ರಾಣೆಬೆನ್ನೂರಿಗೆ ಕೊಂಡೊಯ್ಯುತ್ತಿರುವುದಾಗಿ ಒಪ್ಪಿಕೊಂಡಿದ್ದಾರೆ. ಆದರೆ, ಬೆಳ್ಳಿ ಆಭರಣ ಖರೀದಿ ಕುರಿತು ಜಿಎಸ್‌ಟಿ ಸೇರಿದಂತೆ ಯಾವುದೇ ದಾಖಲೆಗಳು ಅವರ ಬಳಿ ಇಲ್ಲದ್ದರಿಂದ ನೀತಿ ಸಂಹಿತೆ ಜಾರಿ ನಿಯಮ ಉಲ್ಲಂಘನೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಚಿನ್ನಾಭರಣಗಳ ನಿರ್ದಿಷ್ಟ ಮೌಲ್ಯ ಮತ್ತು ಇತರೆ ವಿಚಾರಣೆಗಾಗಿ ಅವರನ್ನು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ'', ಎಂದು ಜಿಲ್ಲಾ ಪೊಲೀಸ್‌ ವರಿಷ್ಠ ಸುಧೀರ್‌ಕುಮಾರ ರೆಡ್ಡಿ ತಿಳಿಸಿದ್ದಾರೆ.

ನಿಪ್ಪಾಣಿ ಠಾಣೆ ಪೊಲೀಸ್‌ ನಿರೀಕ್ಷಕ ಜೆ.ಕರುಣೇಶಗೌಡ ನೇತೃತ್ವದಲ್ಲಿ ನಿಪ್ಪಾಣಿ ಗ್ರಾಮೀಣ ಠಾಣೆ ಪಿಎಸ್‌ಐ ಬಿ.ಎಸ್‌.ತಳವಾರ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು. ವಶಪಡಿಸಿಕೊಂಡಿರುವ ಆಭರಣಗಳಲ್ಲಿ ಬೆಳ್ಳಿ ಗೆಜ್ಜೆ, ಉಂಗುರ, ಗುಂಡಗಡಿಗೆ, ಚೈನ್‌ ಇವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ